ಪೊಳಲಿ: ನರ್ತೆ ಹೆಕ್ಕುವ ವೇಳೆ ಕೆಸರಿನಲ್ಲಿ ಹೂತು ಯುವಕ ಸಾವು
Team Udayavani, Jul 21, 2022, 2:25 PM IST
ಬಂಟ್ವಾಳ: ಪೊಳಲಿ ಸಮೀಪದ ಕಲ್ಕುಟದ ಗದ್ದೆಯೊಂದರಲ್ಲಿ ನರ್ತೆ( ಶಂಕುಹುಳು) ಹೆಕ್ಕುವ ವೇಳೆ ಯುವಕನೋರ್ವ ನೀರು ಹಾಗೂ ಕೆಸರಿನಲ್ಲಿ ಹೂತು ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಕರಿಯಂಗಳ ಗ್ರಾಮದ ಸಾಣೂರುಪದವು ನಿವಾಸಿ ದಾಮೋದರ್(31) ಮೃತಪಟ್ಟ ಯುವಕ.
ದಾಮೋದರ್ ಗದ್ದೆಯ ಬದುವಿನಲ್ಲಿ ಕೂತು ನರ್ತೆ ಹೆಕ್ಕುತ್ತಿದ್ದ ವೇಳೆ ಆಯತಪ್ಪಿ ಗದ್ದೆಗೆ ಬಿದ್ದಿದ್ದಾರೆ. ಗದ್ದೆಯಲ್ಲಿ ನೀರಿನ ಜತೆಗೆ ಕೆಸರು ಕೂಡ ತುಂಬಿಕೊಂಡಿದ್ದು, ಈ ವೇಳೆ ಅವರ ಕುತ್ತಿಗೆವರೆಗೂ ಹೂತು ಹೋಗಿದ್ದಾರೆ. ಬಳಿಕ ಮೇಲಕ್ಕೆ ಬರಲು ಆಗದೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಮಂಗಳೂರು ಕಾಲೇಜು ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋ ವೈರಲ್! ವಿಡಿಯೋ ವೈರಲ್ ಮಾಡಿದಾತ ವಶಕ್ಕೆ
ಮೇಸ್ತ್ರಿ ಕೆಲಸ ನಿರ್ವಹಿಸುತ್ತಿದ್ದ ದಾಮೋದರ್ ಅವರು ತಂದೆ-ತಾಯಿ, ಪತ್ನಿ, ಸಣ್ಣ ಮಗು ಸೇರಿದಂತೆ ಕುಟುಂಬ ವರ್ಗವನ್ನು ಅಗಲಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ