ಮಂಗಳೂರು: ಕುವೈಟ್ನಲ್ಲಿ ತೊಂದರೆಗೆ ಸಿಲುಕಿದ್ದ ಯುವಕ ಊರಿನತ್ತ
Team Udayavani, Jul 6, 2022, 1:34 AM IST
ಮಂಗಳೂರು: ಉದ್ಯೋಗಕ್ಕೆಂದು ಕುವೈಟ್ಗೆ ತೆರಳಿ ತೊಂದರೆಗೆ ಸಿಲುಕಿದ್ದ ಕಾರ್ಕಳ ನಿವಾಸಿ ಜಯೇಶ್ ಅವರು ಮುಂಬಯಿ ತಲುಪಿ ಅಲ್ಲಿಂದ ಊರಿನತ್ತ ಪ್ರಯಾಣ ಬೆಳೆಸಿದ್ದಾರೆ.
ಕುವೈಟ್ನಲ್ಲಿ ಮನೆ ನಿರ್ವಹಣೆಯ ಉದ್ಯೋಗವಿದೆ ಎಂದು ಶೃಂಗೇರಿಯ ಸಚಿನ್ ವೀಸಾ ಕಳುಹಿಸಿಕೊಟ್ಟಿದ್ದರು. ಅದನ್ನು ನಂಬಿದ ಜಯೇಶ್ ಅಲ್ಲಿಗೆ ತೆರಳಿದ್ದರು. ಆದರೆ ಅಲ್ಲಿ ಅರಬೀ ಪ್ರಜೆಯೋರ್ವ ಕುರಿ, ಆಡು ಸಾಕುವ ಫಾರ್ಮ್ಹೌಸ್ನಲ್ಲಿ ಕೆಲಸಕ್ಕೆ ನಿಯೋಜಿಸಿದ್ದ. ದಿನಕ್ಕೆ ಸುಮಾರು 12ರಿಂದ 14 ಗಂಟೆ ದುಡಿಯಬೇಕಿತ್ತು
. ಊಟ, ತಿಂಡಿ ಸರಿಯಾಗಿ ನೀಡುತ್ತಿರಲಿಲ್ಲ. ಹಲ್ಲೆ ಕೂಡ ನಡೆಸುತ್ತಿದ್ದ. ಈ ಬಗ್ಗೆ ಸಚಿನ್ನನ್ನು ಸಂಪರ್ಕಿಸಿದರೂ ಸೂಕ್ತ ಸ್ಪಂದನೆ ದೊರೆತಿರಲಿಲ್ಲ. ಅನಂತರ ಜಯೇಶ್ ತುಳುಕೂಟದ ರೋಶನ್ ಅವರಲ್ಲಿ ಸಹಾಯ ಯಾಚಿಸಿದ್ದರು. ರೋಶನ್ ಕುವೈಟ್ನಲ್ಲಿರುವ ಮಂಜೇಶ್ವರ ಮೋಹನದಾಸ್ ಕಾಮತ್ ಅವರಿಗೆ ತಿಳಿಸಿದ್ದರು.
ಈ ವೇಳೆ ಜಯೇಶ್ ಫಾರ್ಮ್ಹೌಸ್ನಿಂದ ತಪ್ಪಿಸಿಕೊಂಡು ಕುವೈಟ್ನ ರಾಯಭಾರ ಕಚೇರಿ ತಲುಪಿ ಊರಿಗೆ ಬರಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ ಮೋಹನ್ದಾಸ್ ಕಾಮತ್ ಹಾಗೂ ಎನ್ಆರ್ಐ ಫೋರಂನ ಮಾಜಿ ಉಪಾಧ್ಯಕ್ಷೆ ಆರತಿ ಕೃಷ್ಣ ನೆರವಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ