ಕುಮಾರ ಪರ್ವತದಲ್ಲಿ ಯುವಕ ನಾಪತ್ತೆ: ಹುಡುಕಾಟಕ್ಕೆ ತೆರಳಿದ ತಂಡ
Team Udayavani, Sep 17, 2019, 10:08 AM IST
ಸುಬ್ರಹ್ಮಣ್ಯ: ಪುಷ್ಪಗಿರಿ ವನ್ಯಧಾಮ ವ್ಯಾಪ್ತಿಯ ಕುಮಾರ ಪರ್ವತ ಚಾರಣಕ್ಕೆ ಶನಿವಾರ ತೆರಳಿದ ತಂಡದ ಪೈಕಿ ಬೆಂಗಳೂರು ಗಾಯತ್ರಿ ನಗರದ ನಿವಾಸಿ ಸಂತೋಷ್ ನಾಪತ್ತೆಯಾಗಿದ್ದು, ಹುಡುಕಾಟಕ್ಕೆ ನಾಲ್ಕು ತಂಡಗಳು ಮಂಗಳವಾರ ಬೆಳಿಗ್ಗೆ ಪುಷ್ಪಗಿರಿ ವನ್ಯಧಾಮದ ಗಿರಿಗದ್ದೆ ಕಡೆಗೆ ತೆರಳಿದ್ದಾರೆ.
ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಗ್ರಾ.ಪಂಚಾಯತ್ ಅಧಿಕಾರಿಗಳನ್ನು ಒಳಗೊಂಡ ತಂಡದ ಜತೆ ಸುಬ್ರಹ್ಮಣ್ಯ ಸ್ಥಳಿಯ ಹಾಗೂ ದೇವರಗದ್ದೆಯ ನುರಿತ ಯುವಕರ ತಂಡ ಶೋಧಕ್ಕೆ ತೆರಳಿದೆ.
ಸುಬ್ರಹ್ಮಣ್ಯ ಪೊಲೀಸ್ ಠಾಣೆ ಅರಣ್ಯ ಇಲಾಖೆ ಅಧಿಕಾರಿಗಳು ಅಲ್ಲದೆ ಪುತ್ತೂರು, ಬೆಳ್ಳಾರೆ, ಸುಳ್ಯ ಮುಂತಾದ ಕಡೆಗಳಿಂದ ಸಿಬ್ಬಂದಿಗಳನ್ನು ಕರೆಸಿಕೊಳ್ಳಲಾಗಿದೆ.
ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ದಿನಕರ ಶೆಟ್ಟಿ.ಸುಳ್ಯ ವ್ರತ್ತ ನಿರೀಕ್ಷಕ ಸತೀಶ್ ಭೇಟಿ ನೀಡಿ ಶೋಧ ಕಾರ್ಯಚರಣೆ ಕುರಿತು ತಂಡಗಳಿಗೆ ಮಾರ್ಗದರ್ಶನ ನೀಡಿದರು
ಬೆಂಗಳೂರಿಂದ ಆಗಮಿಸಿದ 12 ಮಂದಿ ಚಾರಣಿಗರ ತಂಡ ಶನಿವಾರ ಪುಷ್ಪಗಿರಿ ತಪ್ಪಲಿನ ಕುಮಾರ ಪರ್ವತಕ್ಕೆ ಚಾರಣಕ್ಕೆ ತೆರಳಿತ್ತು. ರವಿವಾರ ಗಿರಿಗದ್ದೆಯಿಂದ ವಾಪಸ್ ಆಗುವ ವೇಳೆ ಬೆಂಗಳೂರಿನ ಗಾಯತ್ರಿ ನಗರದ ಆಂಜನಮೂರ್ತಿ ಅವರ ಪುತ್ರ ಸಂತೋಷ್ ನಾಪತ್ತೆಯಾಗಿದ್ದ. ತಂಡದಲ್ಲಿ ಒಟ್ಟು 12 ಮಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್