ಕರಾವಳಿಯ 44 ಗ್ರಾ.ಪಂ.ಗಳಲ್ಲಿ ಆಧಾರ್ ತಿದ್ದುಪಡಿ
Team Udayavani, Jul 9, 2021, 7:00 AM IST
ಮಂಗಳೂರು: ಕಳೆದೊಂದು ವರ್ಷದಿಂದ ಗ್ರಾಮ ಪಂಚಾಯತ್ಗಳಲ್ಲಿ ಸ್ಥಗಿತವಾಗಿದ್ದ ಆಧಾರ್ ತಿದ್ದುಪಡಿ ಯೋಜನೆಯನ್ನು ಮತ್ತೂಮ್ಮೆ ಹಂತ ಹಂತವಾಗಿ ಎಲ್ಲಾ ಪಂಚಾಯತ್ನಲ್ಲಿ ಅನುಷ್ಠಾನಗೊಳಿಸಲು ಸರಕಾರ ನಿರ್ಧರಿಸಿದೆ.
ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಹೊರತುಪಡಿಸಿ ರಾಜ್ಯದ ಎಲ್ಲ ಜಿ. ಪಂ.ನ 22 ಗ್ರಾ. ಪಂ.ಗಳಲ್ಲಿ ಆಧಾರ್ ನೋಂದಣಿ ಕೇಂದ್ರ ಸ್ಥಾಪಿಸಲು ಸರಕಾರ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲೆಯ ಒಟ್ಟು 44 ಗ್ರಾ. ಪಂ.ಗಳಲ್ಲಿ ನೋಂದಣಿ ಕೇಂದ್ರ ಆರಂಭವಾಗಲಿದೆ. ಕರಾವಳಿಯ ಯಾವೆಲ್ಲ ಪಂಚಾಯತ್ ಎಂಬುದು ಶೀಘ್ರ ಅಂತಿಮಗೊಳ್ಳಲಿದೆ.
ಆಧಾರ್ ನೋಂದಣಿಗೆ ಸರಕಾರದ ಇ-ಆಡಳಿತ ಇಲಾಖೆ 2,000 ಟ್ಯಾಬ್ಲೆಟ್ ಹಾಗೂ ಸಿಂಗಲ್ ಫಿಂಗರ್ ಪ್ರಿಂಟ್ ದೃಢೀಕರಣ ಉಪಕರಣವನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಇಲಾಖೆಗೆ ನೀಡಲಿದೆ. ಇಲಾಖೆಯು 28 ಜಿ. ಪಂ.ನ ತಲಾ 22 ಗ್ರಾ.ಪಂ.ಗೆ ಇದನ್ನು ನೀಡಲಿದೆ. ಜು. 19ರಂದು 22 ಗ್ರಾ.ಪಂ.ಗಳ ಪಿಡಿಒ ಹಾಗೂ ಗ್ರಾ.ಪಂ. ಡೇಟಾ ಎಂಟ್ರಿ ಆಪರೇಟರ್ಗಳಿಗೆ ಆಧಾರ್ ಸಮಾಲೋಚಕರು ತರಬೇತಿ ನೀಡಲಿದ್ದಾರೆ.
ವರ್ಷದಿಂದ ಸ್ಥಗಿತವಾಗಿದೆ ತಿದ್ದುಪಡಿ!:
ಆಧಾರ್ ಕಾರ್ಡ್ ತಿದ್ದುಪಡಿಯನ್ನು ಜನಸ್ನೇಹಿಯಾಗಿ ಮಾಡುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾ.ಪಂ.ಗಳಲ್ಲಿ ಆಧಾರ್ ತಿದ್ದುಪಡಿ ಕೇಂದ್ರಗಳನ್ನು ರಚಿಸಲಾಗಿತ್ತು. ಕೆಲವು ತಿಂಗಳು ಯಶಸ್ವಿಯಾಗಿದ್ದರೂ ಸರ್ವರ್/ ದಾಖಲೆ ಸಮಸ್ಯೆಗಳಿಂದಾಗಿ ತಿದ್ದುಪಡಿ ಸ್ಥಗಿತಗೊಂಡಿತ್ತು. ಹೀಗಾಗಿ ಕಳೆದ ಒಂದು ವರ್ಷದಿಂದ ಯಾವ ಪಂಚಾಯತ್ನಲ್ಲೂ ತಿದ್ದುಪಡಿಗೆ ಅವ ಕಾಶವಿರಲಿಲ್ಲ.
ಕೊರೊನಾ ಲಸಿಕೆ; ಆಧಾರ್ ತಿದ್ದುಪಡಿ! : ಸಾರ್ವಜನಿಕರು ಕೋವಿಡ್ 19 ಲಸಿಕೆಯನ್ನು ಆಧಾರ್ ದೃಢೀಕರಣದೊಂದಿಗೆ ಪಡೆಯಬೇಕಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿರುವ ನಿವಾಸಿಗಳು ಮೊಬೈಲ್ ಸಂಖ್ಯೆಯನ್ನು ಆಧಾರ್ಗೆ ಅಪ್ಡೇಟ್ ಮಾಡಲು ಹೆಚ್ಚು ಬೇಡಿಕೆ ಇಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಆಧಾರ್ ತಿದ್ದುಪಡಿಗೆ ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮೂಲಗಳು ತಿಳಿಸಿವೆ.
ಯಾವುದೆಲ್ಲ ತಿದ್ದುಪಡಿ?:
ಮೊಬೈಲ್ ನಂಬರ್ ಅಪ್ಡೇಟ್, ಇ ಮೇಲ್ ಐಡಿ ದಾಖಲಾತಿಗೆ ಅವಕಾಶವಿದೆ. 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಆಧಾರ್ ನೋಂದಣಿ ಸಹ ಮಾಡಬಹುದು. ಇದರ ಜತೆೆ ಹೆಸರು, ವಿಳಾಸ, ಜನ್ಮದಿನಾಂಕ ಬದಲಾವಣೆ ಸೇರಿದಂತೆ ಆಧಾರ್ನಲ್ಲಿ ಇತರ ತಿದ್ದುಪಡಿ ಮಾಡಲು ಕೂಡ ಅವಕಾಶ ದೊರೆಯುವ ಸಾಧ್ಯತೆಯಿದೆ.
“ಗ್ರಾ.ಪಂ. ಆಯ್ಕೆಗೆ ಕ್ರಮ’:
ಜಿಲ್ಲೆಯ 22 ಗ್ರಾ.ಪಂ.ಗಳಲ್ಲಿ ಆಧಾರ್ ನೋಂದಣಿ ಕೇಂದ್ರ ಸ್ಥಾಪನೆಗೆ ಆವಶ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಗ್ರಾ.ಪಂ. ಆಯ್ಕೆ ಕೆಲವೇ ದಿನಗಳಲ್ಲಿ ನಡೆಸಿ, ಅಲ್ಲಿನ ಸಿಬಂದಿಗೆ ತರಬೇತಿ ನೀಡಿ ತಿಂಗಳಾಂತ್ಯಕ್ಕೆ ಕೇಂದ್ರ ಕಾರ್ಯನಿರ್ವಹಿಸುವಂತೆ ಮಾಡಲಾಗುವುದು. ಆ ಬಳಿಕ ಎಲ್ಲ ಗ್ರಾ.ಪಂ.ಗಳಲ್ಲಿಯೂ ಕೇಂದ್ರ ಸ್ಥಾಪನೆಗೆ ಸರಕಾರ ಆದ್ಯತೆ ನೀಡಲಿದೆ.– ಡಾ| ಕುಮಾರ್, ಸಿಇಒ, ಜಿ. ಪಂ. -ದ.ಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ