ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ


Team Udayavani, Apr 17, 2024, 12:56 AM IST

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಪುತ್ತೂರು: ತೆಂಕುತಿಟ್ಟಿನ ಪ್ರಸಿದ್ಧ ಶ್ರೀ ಗೆಜ್ಜೆಗಿರಿ ಮೇಳವು ಮಸ್ಕತ್‌ ಮತ್ತು ದುಬಾೖಯಲ್ಲಿ ಮಾತೆ ದೇಯಿ ಬೈದೇತಿ ಮತ್ತು ಧೂಮಾವತಿ ಅಮ್ಮನವರ ಬೆಳಕಿನ ಯಕ್ಷಗಾನ ಗೆಜ್ಜೆಸೇವೆ ನೀಡಲಿದ್ದು ಪೂರ್ಣ ಪ್ರಮಾಣದ ಮೇಳವೊಂದು ವಿದೇಶಿ ನೆಲದಲ್ಲಿ ಪ್ರದರ್ಶನ ನೀಡುತ್ತಿರುವುದು ಯಕ್ಷರಂಗದ ಇತಿಹಾಸದಲ್ಲಿ ಪ್ರಥಮವೆನಿಸಿದೆ ಎಂದು ಮೇಳದ ವ್ಯವಸ್ಥಾಪಕ ಪ್ರಶಾಂತ್‌ ಪೂಜಾರಿ ತಿಳಿಸಿದ್ದಾರೆ.

ಒಮಾನ್‌ ಬಿಲ್ಲವಾಸ್‌ ಕೂಟದ ವತಿಯಿಂದ ಮಸ್ಕತ್‌ನ ರೂವಿ ಅಲ್‌ ಫಲಾಜ್‌ ಹೊಟೇಲ್‌ ಗ್ರ್ಯಾಂಡ್‌ ಸಭಾಂಗಣದಲ್ಲಿ ಎ. 19ರಂದು ಅಪರಾಹ್ನ 3.15ರಿಂದ ಗೆಜ್ಜೆಗಿರಿ ಕ್ಷೇತ್ರದ ಸ್ಥಳ ಪುರಾಣ ಆಧಾರಿತ ಕಾರಣಿಕದ ನಿತಿನ್‌ ತೆಂಕಕಾರಂದೂರು ವಿರಚಿತ, ಯೋಗೀಶ್‌ ಕುಮಾರ್‌ ಚಿಗುರುಪಾದೆ ಪದ್ಯ ರಚನೆಯ 225ನೇ ಪ್ರಯೋಗದ ಪ್ರದರ್ಶನ ನಡೆಯಲಿದೆ.

ಎ. 20ರಂದು ಬಿಲ್ಲವ ಫ್ಯಾಮಿಲಿ ದುಬಾೖ ಕೂಟದ ವತಿಯಿಂದ ಬರ್‌ ದುಬಾೖಯ ಜದಫ್‌ ಸ್ವಿಸ್‌ ಇಂಟರ್‌ ನ್ಯಾಶನಲ್‌ ಸೈಂಟಿಫಿಕ್‌ ಸ್ಕೂಲ್‌ನ ಹಾಲ್‌ನಲ್ಲಿ ಸಂಜೆ 5ರಿಂದ 226ನೇ ಪ್ರಯೋಗದ ಯಕ್ಷಗಾನ ಪ್ರದರ್ಶನ ಕಾಣಲಿದೆ.

ಏನಿದು ಪರಿಪೂರ್ಣ ತಂಡ
ಈಗಾಗಲೇ ವಿದೇಶದಲ್ಲಿ ಅನೇಕ ಯಕ್ಷಗಾನ ಪ್ರದರ್ಶನ ನೀಡಿದ್ದರೂ ಅದು ಬೇರೆ ಮೇಳಗಳ ಆಯ್ದ ಕಲಾವಿದರ ಒಗ್ಗೂಡುವಿಕೆಯೊಂದಿಗೆ ನೀಡಿರುವ ಪ್ರದರ್ಶನ. ಆದರೆ ಒಂದು ಮೇಳ ಪೂರ್ಣ ಪ್ರಮಾಣದಲ್ಲಿ ಈ ತನಕ ಪಾಲ್ಗೊಂಡಿಲ್ಲ. ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಪೀತಾಂಬರ ಹೆರಾಜೆ ಮಾರ್ಗದರ್ಶನದಲ್ಲಿ ಮೇಳ ಮೊದಲ ಬಾರಿಗೆ ಎಂಬಂತೆ ಪೂರ್ಣ ತಂಡವಾಗಿ ತೆರಳುತ್ತಿದೆ. ಊರಿನಲ್ಲಿ ಯಕ್ಷಗಾನ ಆಗುವ ರೀತಿಯಲ್ಲೇ ವಿದೇಶಿ ನೆಲದಲ್ಲಿ ತ್ರಿಕಾಲಪೂಜೆ, ಚೌಕಿ ಪೂಜೆ ಸಹಿತ ರಂಗಸ್ಥಳ ನಿರ್ಮಿಸಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಗಿರೀಶ್‌ ರೈ ಕಕ್ಕೆಪದವು ಮತ್ತು ನಿರಂಜನ ಪೂಜಾರಿ ಬಡಗಬೆಳ್ಳೂರು ಅವರ ಭಾಗವತಿಕೆ ಇರಲಿದೆ ಎಂದು ಪ್ರಶಾಂತ್‌ ಪೂಜಾರಿ ವಿವರಿಸಿದ್ದಾರೆ.

ಟಾಪ್ ನ್ಯೂಸ್

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.