ಭೂತಳದಲ್ಲಿ ಒರತೆಯ ಕೊರತೆ: ಬರಿದಾಗುತ್ತಿದೆ ಅಂತರ್ಜಲ

ಅಂತರ್ಜಲ ಸ್ಥಿರ ಮಟ್ಟ 21 ಮೀಟರ್‌ಗೆ ಇಳಿಕೆ

Team Udayavani, Feb 28, 2024, 6:45 AM IST

ಭೂತಳದಲ್ಲಿ ಒರತೆಯ ಕೊರತೆ: ಬರಿದಾಗುತ್ತಿದೆ ಅಂತರ್ಜಲ

ಮಂಗಳೂರು: ಒಂದೆಡೆ ಮಳೆ ಕೊರತೆ, ಮತ್ತೊಂದೆಡೆ ಅತಿಯಾಗಿ ಬೋರ್‌ವೆಲ್‌ ಕೊರೆತದ ಪರಿಣಾಮ ಜಿಲ್ಲೆಯಲ್ಲೂ ಕೆರೆ ಬಾವಿಗಳು ಬತ್ತಿವೆ. ಅಂತರ್ಜಲ ಪ್ರಮಾಣ ಗಣನೀಯ ಕುಸಿತವಾಗಿದೆ. ಪ್ರಸಕ್ತ ಸಾಲಿನಲ್ಲಿ ವಾಡಿಕೆಯ ಮಳೆಯಾಗದ ಕಾರಣದಿಂದ ಮೂಡುಬಿದಿರೆ ಹಾಗೂ ಮಂಗಳೂರು ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ.

ದ.ಕ.ದಲ್ಲಿ ವರ್ಷದಿಂದ ವರ್ಷಕ್ಕೆ ಅಂತರ್ಜಲದ ಪ್ರಮಾಣ ಇಳಿ ಮುಖವಾಗುತ್ತಿದೆ. ಜಿಲ್ಲೆಯಾದ್ಯಂತ ಕೃಷಿ, ಗೃಹೋಪಯೋಗ, ಕೈಗಾರಿಕಾ ಉಪಯೋಗಕ್ಕಾಗಿ ಬೋರ್‌ವೆಲ್‌ ಕೊರೆ ಯಲಾಗುತ್ತದೆ. ನೀರಿನ ಸಮಸ್ಯೆ ಕಂಡುಬಂದ ವೇಳೆ ಭೂಗರ್ಭದ ನೀರಿನತ್ತ ಚಿತ್ತ ಹರಿಸಲಾಗುತ್ತಿದೆ. ಪರಿಣಾಮ ಭೂಮಿಯೊಳಗಿನ ನೀರಿನ ಸ್ಥಿರ ಮಟ್ಟದಲ್ಲೂ ಇಳಿಕೆಯಾಗುತ್ತಿದೆ. 2021ರಲ್ಲಿ 11.99 ಮೀ. ಆಳದಲ್ಲಿದ್ದ ಸ್ಥಿರಮಟ್ಟ 2023ರಲ್ಲಿ ಬರೋಬ್ಬರಿ 21 ಮೀ. ಆಳಕ್ಕೆ ತಲುಪಿದೆ. ಈ ಸಾಲಿನಲ್ಲಿ ಜನವರಿ ಅಂತ್ಯದ ವರೆಗೆ 15.23 ಮೀ.ನಲ್ಲಿದ್ದು ಮೇಯಲ್ಲಿ ಮತ್ತಷ್ಟು ಆಳಕ್ಕೆ ಇಳಿಯುವ ಆತಂಕ ಇದೆ.

ಕಳೆದ ವರ್ಷಕ್ಕೆ ಹೋಲಿಸಿದ್ದಲ್ಲಿ ದ.ಕ. ಜಿಲ್ಲೆಯಲ್ಲಿ ಮುಂಗಾರು ಮಳೆ ತೀವ್ರ ಕೊರತೆಯಾಗಿದೆ. ವಾಡಿಕೆಯ ಮಳೆಯೇ ಸುರಿಯದ ಹಿನ್ನೆಲೆ ನೀರಿನ ತತ್ವಾರ ಎದುರಾಗುವ ಆತಂಕ ಹೆಚ್ಚಿದೆ. ಈ ನಡುವೆ ಬೇಸಗೆ ಸುಡು ಬಿಸಿಲಿನ ಕಾರಣದಿಂದಾಗಿ ಅಣೆಕಟ್ಟುಗಳಲ್ಲಿ ನೀರು ಬೇಗನೇ ಆವಿಯಾಗುವುದು ಮತ್ತೂಂದು ಸಮಸ್ಯೆ.

ಕೈಗಾರಿಕೆಗಳಲ್ಲಿ ಮಳೆ ನೀರು ಕೊಯ್ಲು
ಅಂತರ್ಜಲ ಇಲಾಖೆಯಿಂದ ನೀರಿನ ಮಿತ ಬಳಕೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ಕೈಗಾರಿಕೆಗಳಲ್ಲಿ ಮಳೆ ನೀರು ಕೊಯ್ಲು ಕಡ್ಡಾಯಗೊಳಿಸಲಾಗಿದೆ. ಇದರಿಂದಾಗಿ ಸರಿಸುಮಾರು 6 ತಿಂಗಳಿಗೆ ಬೇಕಾದ ಮಳೆ ನೀರನ್ನು ಭೂಮಿಯೊಳಗೆ ಟ್ಯಾಂಕ್‌ ನಿರ್ಮಿಸಿ ಸಂಗ್ರಹಿಸುವ ಮೂಲಕ ಅಂತರ್ಜಲವನ್ನು ಅವಲಂಬಿಸುವುದು ತಪ್ಪುತ್ತದೆ. ಮಂಗಳೂರು ವಿಮಾನ ನಿಲ್ದಾಣ, ಎಚ್‌ಪಿಸಿಎಲ್‌, ಪುತ್ತೂರಿನ ರೈತ ಬಂಧು ಸೇರಿದಂತೆ ಹತ್ತಕ್ಕೂ ಅಧಿಕ ಸಂಸ್ಥೆಗಳು ಮಳೆನೀರು ಕೊಯ್ಲು ಮೂಲಕ ನೀರು ಸಂಗ್ರಹ ಕಾರ್ಯ ನಡೆಸುತ್ತಿವೆ.

ಈಚಿನ ವರ್ಷಗಳಲ್ಲಿ ಸಾವಿರ ಅಡಿಯ ತನಕ ಅಗೆದರೂ ನೀರಿಲ್ಲ ಎಂಬಂತಾಗಿದೆ. ಪುತ್ತೂರು ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿ ಸರಾಸರಿ 800 ಅಡಿ, ಉಳ್ಳಾಲ, ಬಂಟ್ವಾಳ, ಮೂಡುಬಿದಿರೆ, ಮಂಗಳೂರಿನಲ್ಲಿ ಸರಾಸರಿ 500 ಅಡಿ, ಕಡಬ, ಸುಳ್ಯದಲ್ಲಿ 600 ಅಡಿ ಸರಾಸರಿಯಲ್ಲಿ ನೀರಿನ ಒರತೆ ಸಿಗುತ್ತಿದೆ. ಈ ತಾಲೂಕುಗಳಲ್ಲಿ 800 ಅಡಿ ಮೀರಿದ ಬಳಿಕವೂ ನೀರಿನ ಪಸೆ ಸಿಗದ ಉದಾಹರಣೆಗಳೂ ಇವೆ.

ಹಿತ ಮಿತ ಬಳಕೆ ಅಗತ್ಯ
ಹರಿಯುವ ನೀರನ್ನು ನಿಲ್ಲಿಸಬೇಕು. ನಿಂತ ನೀರನ್ನು ಇಂಗಿಸಬೇಕು. ಅಂತರ್ಜಲ ಅತಿಯಾಗಿ ಬಳಕೆಯ ಮೇಲೆ ನಿಯಂತ್ರಣವಿರಬೇಕು. ಬೋರ್‌ವೆಲ್‌ಗ‌ಳನ್ನು ಮರುಪೂರಣಗೊಳಿಸುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ವಿವೇಚನಾ ರಹಿತವಾಗಿ ಅಂತರ್ಜಲ ಬಳಸಲಾಗುತ್ತಿದ್ದು ಇದಕ್ಕೆ ಮಿತಿ ಇರಬೇಕು. ರೈತರು ಮಳೆಯಾಧಾರಿತ ಬೆಳೆಗಳನ್ನು ಬೆಳೆಸುತ್ತ ಹೆಚ್ಚು ಆಸಕ್ತಿ ವಹಿಸಬೇಕು. ನೀರನ್ನು ನಿಯಮಿತ ಹಾಗೂ ನ್ಯಾಯಯುತವಾಗಿ ಬಳಸಬೇಕು.

ಕೊಳವೆ ಬಾವಿ ಕೊರೆಯುವುದಕ್ಕೆ ತಡೆಯೊಡ್ಡುವುದಾಗಲಿ, ಇಂತಿಷ್ಟೇ ಅಡಿ ಕೊರೆಯಬೇಕೆನ್ನುವ ನಿರ್ಬಂಧ ವಿಧಿಸಲು ಸಾಧ್ಯವಿಲ್ಲ. ಜನರಾಗಿಯೇ ಮುಂದೆ ಎದುರಾಗಬಹುದಾದ ನೀರಿನ ಕ್ಷಾಮದ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಮುಂದಿನ ತಲೆಮಾರು ಜಲ ಕ್ಷಾಮದಿಂದ ದೂರ ಉಳಿಯಬೇಕೆಂದರೆ, ಇಂದು ಎಚ್ಚರವಹಿಸಬೇಕು. ಅನಗತ್ಯ ಪೋಲು ಮಾಡದೆ ಅಗತ್ಯಕ್ಕೆ ತಕ್ಕಷ್ಟು ಮಾತ್ರವೇ ಬಳಸುವುದು ಜಲ ಸಂರಕ್ಷಣೆಯ ಭಾಗವಾಗುತ್ತದೆ.
-ಶೇಖ್‌ ದಾವೂದ್‌, ಹಿರಿಯ ಭೂವಿಜ್ಞಾನಿ

-ಸಂತೋಷ್‌ ಮೊಂತೇರೊ

ಟಾಪ್ ನ್ಯೂಸ್

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.