ಮಂಜೂರಾದ ಜಮೀನು ದುರ್ಬಳಕೆ 


Team Udayavani, Dec 22, 2017, 12:38 PM IST

22-Dec-8.jpg

ನರಿಂಗಾನ: ಇಸ್ಲಾಮಿಕ್‌ ಎಜುಕೇಶನ್‌ ಟ್ರಸ್ಟಿಗೆ ಮಂಜೂರಾದ ಜಮೀನು ದುರ್ಬಳಕೆ ವಿಚಾರವಾಗಿ ನಡೆದ ಚರ್ಚೆಯಿಂದಾಗಿ ನರಿಂಗಾನ ಗ್ರಾಮ ಪಂಚಾಯತ್‌ನ 2017-18 ಸಾಲಿನ ಎರಡನೇ ಸುತ್ತಿನ ಗ್ರಾಮಸಭೆ ರದ್ದುಗೊಂಡು ಮುಂದೂಡಲ್ಪಟ್ಟ ಘಟನೆ ಕೊಲ್ಲರಕೋಡಿ ಸರಕಾರಿ ಶಾಲೆಯಲ್ಲಿ ಗುರುವಾರ ನಡೆಯಿತು. ಗ್ರಾ.ಪಂ. ಅಧ್ಯಕ್ಷ ಇಸ್ಮಾಯಿಲ್‌ ಮೀನಂಕೋಡಿ ಅಧ್ಯಕ್ಷತೆಯಲ್ಲಿ ಆರಂಭವಾದ ಗ್ರಾಮಸಭೆಯ ಆರಂಭದಲ್ಲೇ, ನೆತ್ತಿಲಪದವಿನಲ್ಲಿ ಇಸ್ಲಾಮಿಕ್‌ ಎಜುಕೇಷನ್‌ ಟ್ರಸ್ಟಿಗೆ ಮಂಜೂರಾದ ಜಮೀನಿನ ದುರ್ಬಳಕೆ ಕುರಿತ ಚರ್ಚೆ ನಡೆಯಿತು.

18 ವರ್ಷಗಳ ಹಿಂದೆ ಅಲ್ಪಸಂಖ್ಯಾಕ ನಿಗಮದಡಿ ಇಸ್ಲಾಮಿಕ್‌ ಎಜುಕೇಷನ್‌ ಟ್ರಸ್ಟ್‌ ಹೆಸರಿನಲ್ಲಿ 8 ಎಕರೆ ಸರಕಾರಿ ಜಮೀನು ಕೇರಳ ಮೂಲದ ವ್ಯಕ್ತಿಗೆ ನರಿಂಗಾನ ಗ್ರಾಮದ 1ನೇ ವಾರ್ಡು ನೆತ್ತಿಲಪದವು ಬಳಿ ಮಂಜೂರಾಗಿತ್ತು. ಇದಕ್ಕೆ ಗ್ರಾಮಸ್ಥರ ವಿರೋಧವಿತ್ತು. ಆದರೆ ಪೊಲೀಸ್‌ ಬಂದೋಬಸ್ತಿನಲ್ಲಿ ಕಟ್ಟಡ ಕಾಮಗಾರಿ ನಡೆದಿತ್ತು. ಮಂಜೂರಾದ ಜಮೀನಿನಲ್ಲಿ ಶಾಂತಿಪಾಲ ಆಂಗ್ಲ ಮಾಧ್ಯಮ ಶಾಲೆ ಕಾರ್ಯಾಚರಣೆ ಆರಂಭಿಸಿತ್ತು. ಡೊನೇಷನ್‌ ಪಡೆದುಕೊಂಡೇ ಆರಂಭವಾದ ಶಾಲೆಗೆ ಸರಕಾರದಅನುದಾನ ದೊರೆತು ಅನುದಾನಿತ ಶಾಲೆಯಾಗಿ ಮುಂದುವರಿದಿತ್ತು.

ಅನುದಾನ ಕಡಿತ
ಕ್ರಮೇಣ ಶಾಲಾ ಅವ್ಯವಸ್ಥೆಯಿಂದ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆಯಾಗಿದ್ದು, ಐದು ವರ್ಷಗಳಿಂದ ಬೆರಳೆಣಿಕೆ ವಿದ್ಯಾರ್ಥಿಗಳು ಮಾತ್ರ ಬರಲು ಆರಂಭಿಸಿದ್ದರು. ಈ ಬಗ್ಗೆ ನರಿಂಗಾನ ಗ್ರಾಮಸಭೆಯಲ್ಲಿ ಚರ್ಚೆಗಳು ನಡೆದಿದ್ದು, ಆಂಗ್ಲ ಮಾಧ್ಯಮ ಶಾಲೆಯನ್ನು ಅನುದಾನಿತ ಮಾಡಿರುವುದರ ವಿರುದ್ಧವೂ ಅಪಸ್ವರ ಕೇಳಿಬಂದಿತ್ತು. ಅಲ್ಲದೆ ವಿದ್ಯಾರ್ಥಿಗಳ ಸಂಖ್ಯೆ ಇಲ್ಲದಿರುವುದರಿಂದ ಅನುದಾನ ಕಡಿತಗೊಳಿಸಿ ಶಾಲೆಯನ್ನು ರದ್ದುಗೊಳಿಸುವಂತೆ ಪಂಚಾಯತ್‌ನಿಂದ ನಿರ್ಣಯ ಕೈಗೊಳ್ಳಲಾಗಿತ್ತು. ವರ್ಷದ ಹಿಂದೆ ಜಿಲ್ಲಾ ಪಂಚಾಯತ್‌ ಸದಸ್ಯೆ ಮಮತಾ ಡಿ.ಎಸ್‌. ಗಟ್ಟಿ ನೇತೃತ್ವದಲ್ಲಿ ಶಿಕ್ಷಣ ಇಲಾಖೆಗೆ ಪತ್ರ ಬರೆದು, ಶಾಲಾ ಅನುಮತಿಯನ್ನು ರದ್ದುಗೊಳಿಸಲಾಗಿತ್ತು. ಆದರೆ ಟ್ರಸ್ಟ್‌ಗೆ ಮಂಜೂರಾದ ಜಾಗವನ್ನು ವ್ಯಕ್ತಿ ಮಾರಾಟ ಮಾಡಲು ಯತ್ನಿಸುತ್ತಿದ್ದು, ಮಂಜೂರಾದ 8 ಎಕರೆ ಜಮೀನಿಗೆ ಬೇಲಿ ಹಾಕದೆ ಸುತ್ತಲಿನ ಜಾಗವನ್ನು ಕಬಳಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂತು.

ನೋಡಲ್‌ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಮೋಹನ್‌ ಕುಮಾರ್‌ ವಹಿಸಿದ್ದರು. ಉಪಾಧ್ಯಕ್ಷೆ ಮೀನಾಕ್ಷಿ ಹಾಗೂ ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಅಧಿಕಾರಿಗಳ ನಿರ್ಲಕ್ಷ್ಯ
ಮೂರು ಗ್ರಾಮಸಭೆಯಲ್ಲಿಯೂ ಕಂದಾಯ ಇಲಾಖೆ ಜಾಗವನ್ನು ಇಲಾಖೆ ಸುಪರ್ದಿಗೆ ಪಡೆಯುವಂತೆ ಒತ್ತಾಯಿಸುತ್ತಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇದೇ ಕಾರಣಕ್ಕೆ ಹಿಂದೆಯೂ ಗ್ರಾಮಸಭೆ ರದ್ದುಗೊಂಡಿದ್ದರೂ, ಸಂಬಂಧಪಟ್ಟ ತಹಶೀಲ್ದಾರ್‌ ಕೂಡ ಗ್ರಾಮಸಭೆಗೆ ಹಾಜರಾಗುತ್ತಿಲ್ಲ ಎಂದು ಆರೋಪಿಸಿದ ಗ್ರಾಮಸ್ಥರು ಸಭೆಯನ್ನೇ ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ.

ಅಧ್ಯಕ್ಷರಿಗೆ ಸೂಚನೆ
ತನ್ನಿಂದ ಆದ ಪ್ರಯತ್ನವನ್ನು ಮುಂದುವರಿಸುತ್ತಾ ಬಂದಿದ್ದೇನೆ. ಆದರೆ ಮುಂದಿನ ಗ್ರಾಮಸಭೆ ತಹಶೀಲ್ದಾರ್‌ ಬಾರದೆ ನಡೆಯುವುದಿಲ್ಲ. ಗ್ರಾಮಸ್ಥರ ಒತ್ತಾಯದಂತೆ ಸಭೆಯನ್ನು ರದ್ದುಗೊಳಿಸುವಂತೆ ಅಧ್ಯಕ್ಷರಿಗೆ ಸೂಚಿಸಿದ್ದಾರೆ.
ಮಮತಾ ಡಿ.ಎಸ್‌.ಗಟ್ಟಿ
  ಜಿ.ಪಂ. ಸದಸ್ಯೆ

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.