ಭಾರತದ ಸಾಮರ್ಥ್ಯ ಮತ್ತೆ ವಿಶ್ವಮಾನ್ಯ: ಎಬಿವಿಪಿ ಜಿಲ್ಲಾ ಸಮಾವೇಶದಲ್ಲಿ ಬಾಲಕೃಷ್ಣ ಜಿ.


Team Udayavani, Jan 25, 2023, 10:53 PM IST

ಭಾರತದ ಸಾಮರ್ಥ್ಯ ಮತ್ತೆ ವಿಶ್ವಮಾನ್ಯ: ಎಬಿವಿಪಿ ಜಿಲ್ಲಾ ಸಮಾವೇಶದಲ್ಲಿ ಬಾಲಕೃಷ್ಣ ಜಿ.

ಮಂಗಳೂರು: ಜ್ಞಾನ ಭೂಮಿ, ಧರ್ಮ ಭೂಮಿ, ಕರ್ಮಭೂಮಿಯಾಗಿದ್ದ ಭಾರತ 1,200 ವರ್ಷಗಳ ಕಾಲ ಪರಕೀಯರ ದಾಳಿಯಿಂದ ಸಂಪೂರ್ಣವಾಗಿ ತನ್ನತನವನ್ನು ಕಳೆದುಕೊಳ್ಳುವಂತಾಯಿತು. ಮೆಕಾಲೆ ಶಿಕ್ಷಣ ಪದ್ಧತಿ ಜಾರಿಗೊಳಿಸಿದ ಬ್ರಿಟಿಷರು ಇಲ್ಲಿನ ಜನರ ಮನಃಸ್ಥಿತಿಯನ್ನೇ ಬದಲಾಯಿಸುವಲ್ಲಿ ಯಶಸ್ವಿಯಾದರು. ಆದರೆ ಇಂದು ಮತ್ತೆ ವಿಶ್ವಕ್ಕೆ ಭಾರತ ಏನೆಂದು ತೋರಿಸಿಕೊಟ್ಟಿದ್ದೇವೆ ಎಂದು ಎಬಿವಿಪಿ ರಾಷ್ಟ್ರೀಯ ಸಹ ಸಂಘಟನ ಕಾರ್ಯದರ್ಶಿ ಬಾಲಕೃಷ್ಣ ಜಿ. ಹೇಳಿದರು.

ಇಲ್ಲಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಬುಧವಾರ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಜಿಲ್ಲಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವಕ್ಕೆ ಗುರುವಿನ ಸ್ಥಾನದಲ್ಲಿದ್ದ ಭಾರತದಲ್ಲಿ ಅತ್ಯುನ್ನತ ಶ್ರೇಣಿಯ ವಿಶ್ವವಿದ್ಯಾನಿಲಯಗಳು ಇದ್ದವು. ಇಲ್ಲಿ ಉತ್ಪಾದನೆಯಾಗುತ್ತಿದ್ದ ಶೇ. 60ರಷ್ಟು ಉತ್ಪನ್ನಗಳು ವಿಶ್ವ ಮಾರುಕಟ್ಟೆಯಲ್ಲಿ ಸ್ಥಾನ ಪಡೆದಿದ್ದವು. ಆದರೆ ಬ್ರಿಟಿಷರು ಬಂದು ಒಡೆದು ಆಳುವ ನೀತಿಯನ್ನು ಅನುಸರಿಸಿ ಶ್ರೀಮಂತ ದೇಶವನ್ನು ಬಡದೇಶವನ್ನಾಗಿ ಮಾಡುವಲ್ಲಿ ಯಶಸ್ವಿಯಾದರು. ಇಂದು ಮತ್ತೆ ಭಾರತ ವಿಶ್ವ ಗುರುವಿನ ಸ್ಥಾನದತ್ತ ಸಾಗುತ್ತಿದ್ದು, ವಿಶ್ವದಲ್ಲಿ ದೇಶದ ಪ್ರತಿಷ್ಠೆ ಹೆಚ್ಚುತ್ತಿದೆ ಎಂದರು.

ಆರ್ಥಿಕತೆ, ವಿಜ್ಞಾನ- ತಂತ್ರಜ್ಞಾನ ಕ್ಷೇತ್ರದಲ್ಲಿ ಅಪೂರ್ವ ಬದಲಾವಣೆಗಳು ದೇಶದಲ್ಲಿ ಆಗಿವೆ. ಇದರ ನಡುವೆಯೇ ಕೆಲವು ವಿದೇಶಿ ಸಂಘ ಸಂಸ್ಥೆಗಳು ದೇಶದ ವಿರುದ್ಧ ಕೆಲಸ ಮಾಡುತ್ತಿವೆ. ಯುವ ಜನತೆ ಸಂಕಲ್ಪ ಮಾಡಿದರೆ ಇದನ್ನು ತಡೆಯುವುದು ಸುಲಭದ ಕೆಲಸ. ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಜತೆಗೆ ಎಬಿವಿಪಿಯೂ ಅಮೃತ ಮಹೋತ್ಸವದ ಹೊಸ್ತಿಲಲ್ಲಿದ್ದು, ದೇಶದ ತಣ್ತೀ, ಸಿದ್ಧಾಂತ ಸಂಸ್ಕೃತಿಯನ್ನೇ ಸಿದ್ಧಾಂತವಾಗಿ ಇಟ್ಟುಕೊಂಡಿರುವ ಸಂಘಟನೆಯಾಗಿದೆ ಎಂದು ಅವರು ಹೇಳಿದರು.

ಎಸ್‌ಸಿಎಸ್‌ ಕಾಲೇಜು ಪ್ರಾಂಶುಪಾಲ ಡಾ| ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್‌ ಅವರು ಮಾತನಾಡಿ, ಭಾರತೀಯ ಸಂಸ್ಕೃತಿ, ಆಚಾರ, ವಿಚಾರಗಳಿಗೆ ಇಂದು ವಿದೇಶೀಯರು ಮಾರು ಹೋಗಿದ್ದಾರೆ. ಪ್ರಪಂಚಕ್ಕೆ ಮಾತೃ ಸ್ಥಾನದಲ್ಲಿರುವ, ಸಂಸ್ಕಾರ ಹೇಳಿ ಕೊಡುವ ನಮಗೇ ನಮ್ಮ ಸಂಸ್ಕೃತಿ ಬೇಡವಾಗಿರುವುದು ಶೋಚನೀಯ ಹಾಗೂ ಯೋಚನೀಯ. ಇಂತಹ ಪರಿಸ್ಥಿತಿಯಲ್ಲಿ ಭಾರತಕ್ಕೆ ಹೊಸ ಭವಿಷ್ಯ ಬರೆಯುವ ತಾಕತ್ತು ಇರುವುದು ಎಬಿಪಿವಿಗೆ ಮಾತ್ರ ಎಂದರು.

ರಾಷ್ಟ್ರೀಯ ಸ್ವಾಯಂ ಸೇವಕ ಸಂಘದ ಮಂಗಳೂರು ಮಹಾನಗರ ಸೇವಾ ಪ್ರಮುಖ್‌ ಶ್ರೀಧರ ಶೆಟ್ಟಿ ಪುಳಿಂಚ, ಎಬಿವಿಪಿ ಮಂಗಳೂರು ವಿಭಾಗ ಪ್ರಮುಖ್‌ ಕೇಶವ ಬಂಗೇರ ಉಪಸ್ಥಿತರಿದ್ದರು. ಎಬಿವಿಪಿ ಜಿಲ್ಲಾ ಸಂಚಾಲಕ ಶ್ರೇಯಸ್‌ ಶೆಟ್ಟಿ ಸ್ವಾಗತಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.