ತುಳು ಅಧಿಕೃತ ಭಾಷೆ ಘೋಷಣೆಗೆ ಅಕಾಡೆಮಿ ಪ್ರಯತ್ನ


Team Udayavani, Jan 10, 2019, 5:24 AM IST

tulu-lipii.jpg

ಮಂಗಳೂರು: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವುದಕ್ಕೆ ಅನು ಕೂಲವಾಗುವಂತೆ ಅದನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವಂತೆ ತುಳು ಸಾಹಿತ್ಯ ಅಕಾಡೆಮಿ ಸರಕಾರ ಹಾಗೂ ಕರಾವಳಿ ಭಾಗದ ಎಲ್ಲ ಶಾಸಕರಿಗೆ ಪತ್ರ ಬರೆದಿದೆ.

ಅಕಾಡೆಮಿಯ ಈ ಪತ್ರಕ್ಕೆ ಕರಾವಳಿಯ ಹೆಚ್ಚಿನ ಶಾಸಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಖ್ಯಮಂತ್ರಿಗಳಲ್ಲಿ ಈ ಸಂಬಂಧ ಚರ್ಚೆ ಮಾಡುವ ಭರವಸೆ ನೀಡಿದ್ದಾರೆ. ರಾಜ್ಯ ಸರಕಾರ ತುಳುವನ್ನು ಅಧಿಕೃತ ಭಾಷೆಯಾಗಿ ಘೋಷಣೆ ಮಾಡಿದರೆ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವ ಬೇಡಿಕೆಗೆ ಬಲ ಬರುತ್ತದೆ.

ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಹಕ್ಕೊತ್ತಾಯವನ್ನು ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಲು ಕರಾವಳಿ ಶಾಸಕರು ಮುಂದಾಗಿದ್ದರು. ಲೋಕ ಸಭೆಯಲ್ಲಿಯೂ ಪ್ರಸ್ತಾಪವಾಗಿತ್ತು. ಆದರೆ ದೊಡ್ಡಮಟ್ಟದ ಚರ್ಚೆಗೆ ಅವಕಾಶ ಲಭ್ಯವಾಗಿರ ಲಿಲ್ಲ. ಈಗ ತುಳುವನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಿಸಿ, ಆ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರುವುದಕ್ಕೆ ಕರಾವಳಿ ಜನಪ್ರತಿನಿಧಿಗಳು ಮುಂದಾಗಿದ್ದಾರೆ. 
ಕರಾವಳಿಯಷ್ಟೇ ಅಲ್ಲದೆ ಕೇರಳ, ಮಹಾರಾಷ್ಟ್ರ, ತ.ನಾಡು, ಆಂಧ್ರ, ಗುಜರಾತ್‌, ಹೊಸದಿಲ್ಲಿಗಳಲ್ಲಿಯೂ ತುಳು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಬೆಂಗಳೂರು, ಮುಂಬಯಿ, ಹೈದರಾಬಾದ್‌, ಚೆನ್ನೆ , ಅಹಮದಾಬಾದ್‌, ಬರೋಡ, ಕೋಲ್ಕತ್ತಾ ಸೇರಿದಂತೆ ಇನ್ನಿತರ ಪಟ್ಟಣಗಳಲ್ಲಿ ತುಳುವರು ತಮ್ಮ ನೆಲೆ ಕಂಡುಕೊಂಡಿದ್ದಾರೆ. 

ಸುಮಾರು 40 ಭಾಷೆಗಳಿಂದ ಬೇಡಿಕೆ,22 ಭಾಷೆಗಳಿಗೆ ಮಾನ್ಯತೆ
ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆ ಗೊಳಿಸಬೇಕು ಎಂಬ ಕೂಗು ತುಳು ಸಹಿತ ಅನೇಕ ಭಾಷೆಗಳಿಂದ ಕೇಳಿಬರುತ್ತಿದೆ. ಕೊಡವ, ಲೆಪc, ಬಂಜಾರ, ಹರಿಯಾನ್ವಿ, ಗೊಂಡಿ, ಗುಜ್ಜಾರಿ, ಕರ್ಬಿ, ಮುಂಡಾರಿ, ನಾಗ್ಪುರಿ, ರಾಜಸ್ಥಾನಿ ಸೇರಿ ದಂತೆ ಸುಮಾರು 40ಕ್ಕೂ ಹೆಚ್ಚಿನ ಭಾಷೆಗಳು ಕೇಂದ್ರ ಸರಕಾರಕ್ಕೆ ಬೇಡಿಕೆ ಸಲ್ಲಿಸಿವೆ. ಸಂವಿಧಾನ ರಚನೆಯ ಸಮಯದಲ್ಲಿ 14 ಭಾಷೆಗಳಿಗೆ ಮಾನ್ಯತೆ ನೀಡಲಾಗಿತ್ತು. 1967ರಲ್ಲಿ ಸಿಂಧಿ, 1992ರಲ್ಲಿ ನೇಪಾಳಿ, ಕೊಂಕಣಿ, ಮಣಿಪುರಿಗಳನ್ನು ಸೇರ್ಪಡೆ ಮಾಡ ಲಾಯಿತು. 2003ರಲ್ಲಿ ಕಾಶ್ಮೀರದ ಡೋಗ್ರಿ, ಅಸ್ಸಾಂನ ಬೋಡೊ, ಸಾಂಥಾಲಿ, ಬಿಹಾರದ ಮೈಥಿಲಿ ಭಾಷೆಯನ್ನು ಕೇಂದ್ರ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಿದೆ. 

ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಂಡರೆ ಅನುಕೂಲ
*ರಾಷ್ಟ್ರಮಟ್ಟದಲ್ಲಿ ತುಳು ಭಾಷೆಗೆ ಮಾನ್ಯತೆ ಸಿಗಲಿದೆ
* ಮಾನ್ಯತೆ ಪಡೆದ ಭಾಷೆಗಳ ಸಂಶೋಧನೆಗೆ ಕೇಂದ್ರದಿಂದ ಹೆಚ್ಚಿನ ಹಣ ಬಿಡುಗಡೆ
*ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಪ್ರಶಸ್ತಿಗೆ ತುಳು ಸಾಹಿತ್ಯ ಪರಿಗಣನೆ
* ತುಳು ವಿಶ್ವವಿದ್ಯಾನಿಲಯದ ಬೇಡಿಕೆಗೆ ಮತ್ತಷ್ಟು ಬಲ
* ವಿಧಾನಸಭೆ, ಲೋಕಸಭೆಯಲ್ಲಿ ಜನಪ್ರತಿನಿಧಿಗಳು ತುಳು ಭಾಷೆಯಲ್ಲಿಯೂ ಪ್ರಮಾಣ ವಚನ ಸೀÌಕರಿಸಲು ಅವಕಾಶ

ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ರಾಜ್ಯ ಸರಕಾರ ಘೋಷಣೆ ಮಾಡುವಂತೆ ಒತ್ತಾಯಿಸಿ ರಾಜ್ಯ ಸರಕಾರಕ್ಕೆ ಮತ್ತು ಕರಾವಳಿ ಭಾಗದ ಶಾಸಕರಿಗೆ ಈಗಾಗಲೇ ತುಳು ಸಾಹಿತ್ಯ ಅಕಾಡೆಮಿಯಿಂದ ಪತ್ರವನ್ನು 
ಬರೆಯಲಾಗಿದೆ. ಹೆಚ್ಚಿನ ಶಾಸಕರು ಈ ಬಗ್ಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಒಂದು ವೇಳೆ ಸರಕಾರ ಅಧಿಕೃತ ಭಾಷೆಯಾಗಿ ಘೋಷಿಸಿದರೆ ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕು ಎಂಬ ಬೇಡಿಕೆಗೆ ಮತ್ತಷ್ಟು ಬಲ ಬರುತ್ತದೆ.
ಎ.ಸಿ. ಭಂಡಾರಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.