![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಎಸಿಬಿ ದಾಳಿ: ಪುಡಾ ಅಧಿಕಾರಿ ಬಲೆಗೆ
Team Udayavani, Apr 13, 2017, 1:24 PM IST
![puda.jpg](https://www.udayavani.com/wp-content/uploads/2017/04/13/puda-620x382.jpg)
ಪುತ್ತೂರು: ಕೆಲಸ ಮಾಡಿಕೊಡಲು ಸಾರ್ವಜನಿಕರೋರ್ವರಿಂದ ಬುಧವಾರ ಲಂಚ ಸ್ವೀಕರಿಸುತ್ತಿದ್ದ ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಪುಡಾ)ದ ಸಹಾಯಕ ನಿರ್ದೇಶಕಿ ಲಾವಣ್ಯ ಅವರನ್ನು ರೆಡ್ ಹ್ಯಾಂಡ್ ಆಗಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ಸೆರೆಹಿಡಿದಿದ್ದಾರೆ.
ರಾಮ ಮೋಹನ್ ಪೈ ಅವರಿಂದ ಭೂ ಪರಿವರ್ತನೆಯ ವಲಯ ದೃಢೀಕರಣಕ್ಕಾಗಿ ಪುಡಾ ಸಹಾಯಕ ನಿರ್ದೇಶಕಿ ಲಾವಣ್ಯ 20,000 ರೂ. ಬೇಡಿಕೆ ಇಟ್ಟಿದ್ದರು. 20 ಸಾವಿರ ರೂ. ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ ಬಳಿಕ ಮಾತುಕತೆ ನಡೆಸಿ 10 ಸಾವಿರ ರೂ. ನೀಡುವುದೆಂದು ತೀರ್ಮಾನಿಸಲಾಗಿತ್ತು.
ಪುಡಾದಲ್ಲಿ ಹಣದ ಬೇಡಿಕೆ ಇಟ್ಟಿರುವ ಕುರಿತು ರಾಮ ಮೋಹನ ಪೈ ಅವರ ಪರವಾಗಿ ಕೇಶವ ಸುವರ್ಣ ಅವರು ಎಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಬುಧವಾರ ಲಂಚದ ಹಣ ನೀಡುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಭ್ರಷ್ಟಾಚಾರ ನಿಗ್ರಹ ದಳದ ಇನ್ಸ್ಪೆಕ್ಟರ್ ಯೊಗೀಶ್, ಕಾನ್ಸ್ಟೆಬಲ್ ಹರಿಪ್ರಸಾದ್ ದಾಳಿಯಲ್ಲಿ ಪಾಲ್ಗೊಂಡಿದ್ದರು. ಅನಂತರ ಅಧಿಕಾರಿಗಳು ತನಿಖೆ ನಡೆಸಿದ್ದು, ಬಳಿಕ ಲಾವಣ್ಯ ಅವರನ್ನು ಮಂಗಳೂರಿನ ಮೂರನೇ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.