ಎಸಿಬಿ ದಾಳಿ: ಲಂಚ ಸ್ವೀಕರಿಸುತ್ತಿದ್ದ ಇಬ್ಬರ ಬಂಧನ
Team Udayavani, Jul 20, 2017, 6:45 AM IST
ಪುತ್ತೂರು : ಹೊಸದಾಗಿ ಸಹಕಾರ ಸಂಘ ನೋಂದಣಿಗೆ ಅರ್ಜಿ ಸಲ್ಲಿಸಿದ ವ್ಯಕ್ತಿಯೊಂದಿಗೆ ಲಂಚ ಸ್ವೀಕರಿಸುತ್ತಿದ್ದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಮತ್ತು ಚಾಲಕನನ್ನು ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಬುಧವಾರ ಸಂಜೆ ಸಂಭವಿಸಿದೆ.
ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕ ಕೆ.ಮಂಜುನಾಥ್ ಮತ್ತು ಚಾಲಕ ರಾಧಾಕೃಷ್ಣ ಅವರು ಲಂಚ ಸ್ವೀಕಾರ ಮಾಡಿದವರು. ಪಟ್ನೂರಿನ ವ್ಯಕ್ತಿಯೋರ್ವರು ಹೊಸದಾಗಿ ಸಹಕಾರ ಸಂಘ ಮಾಡುವ ಕುರಿತು ಅರ್ಜಿ ಸಲ್ಲಿಸಿದ್ದರು.
ಆದರೆ ಅದಕ್ಕೆ ಅನುಮತಿ ನೀಡಬೇಕಾದರೆ 25,000 ರೂ. ನೀಡುವಂತೆ ಡಿಮಾಂಡ್ ಇಟ್ಟಿದ್ದರು. ಈ ವಿಚಾರವನ್ನು ಅರ್ಜಿದಾರ ಭ್ರಷ್ಟಾಚಾರ ನಿಗಹದಳದ ಗಮನಕ್ಕೆ ತಂದಿದ್ದರು. ಪೂರ್ವಯೋಜಿತ ದಾಳಿ ನಡೆಸಿದ ಅಧಿಕಾರಿಗಳು, ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ದಿಢೀರ್ ದಾಳಿ ನಡೆಸಿ ಈ ಇಬ್ಬರನ್ನು ಬಂಧಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹದಳದ ಇನ್ಸ್ಪೆಕ್ಟರ್ ಯೋಗೀಶ್ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ