ನೇತ್ರಾವತಿ ಸೇತುವೆಯಲ್ಲಿ ಅಪಘಾತ: ತಪ್ಪಿದ ದುರಂತ
Team Udayavani, Aug 9, 2019, 8:54 AM IST
ಉಳ್ಳಾಲ: ಇಲ್ಲಿನ ನೇತ್ರಾವತಿ ಸೇತುವೆಯಲ್ಲಿ ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಸೇತುವೆಯ ದಂಡೆಗೆ ಹೊಡೆದ ಘಟನೆ ತಡರಾತ್ರಿ ನಡೆದಿದೆ.
ರಾತ್ರಿ ಸಮಯವಾದ್ದರಿಂದ ರಸ್ತೆಯಲ್ಲಿ ವಾಹನ ದಟ್ಟಣೆ ಇಲ್ಲದ ಕಾರಣ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.