ಪತಿ, ಪತ್ನಿ ಹೆಸರಲ್ಲೂ ಖಾತೆ; ಅನರ್ಹತೆ

ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌

Team Udayavani, Jul 22, 2019, 5:33 AM IST

PM

ಸಾಂದರ್ಭಿಕ ಚಿತ್ರ.

ಬೆಳ್ತಂಗಡಿ: ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಉಭಯ ಜಿಲ್ಲೆಗಳಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸುವುದು ಇಲಾಖೆಗೆ ಇಕ್ಕಟ್ಟಾಗಿರುವ ನಡುವೆ ಅರ್ಜಿದಾರರ ಸಂಖ್ಯೆ 2.52 ಲಕ್ಷ ಮುಟ್ಟಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 3,98,818 ಲಕ್ಷ ಖಾತೆದಾರರ ಪೈಕಿ 2.52 ಲಕ್ಷಕ್ಕೂ ಅಧಿಕ ಅರ್ಜಿ ಸಲ್ಲಿಕೆಯಾಗಿವೆ. ಜು.19ರ ವರೆಗಿನಅಂಕಿಅಂಶ ಪ್ರಕಾರ 1,24,362 ಮಂದಿ ಖಾತೆದಾರರು ಅರ್ಹರೆಂದು ಪರಿಗಣಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ 1,89,900 ಲಕ್ಷ ಖಾತೆದಾರರು ಅರ್ಜಿಸಲ್ಲಿಸಿದ್ದು, 1,27,613 ಮಂದಿಯನ್ನು ಅರ್ಹರೆಂದು ಗುರುತಿಸಲಾಗಿದೆ. ಕಂದಾಯ ಇಲಾಖೆಯಿಂದ ಮತ್ತೂಂದು ಸುತ್ತಿನ ಪರಿಶೀಲನೆಯಾಗುತ್ತಿದೆ. ಒಂದೇ ಕುಟುಂಬದ ಪತಿ, ಪತ್ನಿ,ಮಕ್ಕಳ ಹೆಸರಲ್ಲಿ ಜಮೀನು ಹೊಂದಿದ್ದು,ಎಲ್ಲರೂ ಅರ್ಜಿ ಸಲ್ಲಿಸಿರುವುದು ಇಲಾಖೆಯ ಗಮನಕ್ಕೆ ಬಂದಿದೆ. ಅಂಥ ಫಲಾನುಭವಿಗಳ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಮತ್ತಷ್ಟು ಫಲಾನುಭವಿಗಳು ಇದರಿಂದ ಅವಕಾಶ ವಂಚಿತರಾಗುವ ಸಾಧ್ಯತೆಯೂ ಇದೆ ಎಂದು ಇಲಾಖಾ ಅಧಿಕಾರಿಗಳು ತಿಳಿಸಿದ್ದಾರೆ.

ಚುನಾವಣೆ ವೇಳೆ ಪ್ರಧಾನಿ ಮೋದಿಅವರು ರೈತರಿಗೆ ನೇರವಾಗಿ ಹಣ ನೀಡುವ ಯೋಜನೆ ಘೋಷಿಸಿದ್ದರು. ಆದಾದ ಕೆಲವೇ ದಿನಗಳಲ್ಲಿ ನೀತಿ ಸಂಹಿತೆ ಜಾರಿಯಾಗಿ ಹಣಸಂದಾಯ ಸ್ಥಗಿತಗೊಂಡಿತ್ತು. ಮತ್ತೆ ಮೋದಿ ನೇತೃತ್ವದ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದಿರುವುದರಿಂದ ಹಣ ಬಿಡುಗಡೆ ಪುನರಾರಂಭವಾಗಿದೆ.

ಎರಡೂವರೆ ಲಕ್ಷ ರೈತರಿಗೆ ಲಾಭ
ರಾಜ್ಯದಲ್ಲಿ ಈಗಾಗಲೇ ರೈತರ ಖಾತೆಗಳಿಗೆ ಮೊದಲ ಕಂತಿನ 2 ಸಾವಿರ ರೂ. ಹಣ ನೇರ ಜಮೆ ಆಗಿದೆ.ಈ ಮುನ್ನ ಕೇವಲ ಸಣ್ಣ ಹಿಡುವಳಿದಾರರಿಗೆ ಮೀಸಲಾಗಿದ್ದ ಈ ಯೋಜನೆಯನ್ನು ಈಗ ತೆರಿಗೆ ಪಾವತಿಸುವವರು ಮತ್ತು ಸರಕಾರಿ, ಅರೆ ಸರಕಾರಿ ನೌಕರಿ ಹೊಂದಿರುವವರನ್ನು ಹೊರತುಪಡಿಸಿ ಇನ್ನುಳಿದ ಎಲ್ಲ ರೈತರಿಗೆ ವಿಸ್ತರಿಸಲಾಗಿದೆ. ಹೀಗಾಗಿ ದ.ಕ., ಉಡುಪಿ ಜಿಲ್ಲೆಯ 2,51,975 ಅರ್ಜಿದಾರ ರೈತರು ಯೋಜನೆಯ ಲಾಭ ಪಡೆಯಲಿದ್ದಾರೆ.

ಬೆಳ್ತಂಗಡಿ, ಕುಂದಾಪುರ ಗರಿಷ್ಠ
ಆರಂಭದಲ್ಲಿ ಅರ್ಜಿ ಸಲ್ಲಿಸಲು ರೈತರು ಹಿಂದೇಟು ಹಾಕಿದ್ದರು. ಬಳಿಕದ ದಿನಗಳಲ್ಲಿ ಕೃಷಿ, ತೋಟಗಾರಿಕೆ, ನಾಡ ಕಚೇರಿ, ಗ್ರಾ.ಪಂ. ಸೇರಿದಂತೆ ಗ್ರಾಮ ಲೆಕ್ಕಾಧಿಕಾರಿ ಮೂಲಕವೂ ಅರ್ಜಿ ಸ್ವೀಕರಿಸುವ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಕೃಷಿ ಇಲಾಖೆ ಅಧಿಕಾರಿಗಳು, ಸಹಕಾರಿ ಸಂಘಗಳವರು ಉಭಯ ಜಿಲ್ಲೆಗಳಲ್ಲಿ ಮನೆ ಭೇಟಿ ನಡೆಸಿ ಯೋಜನೆಯ ಮಾಹಿತಿ ನೀಡಲು, ಅರ್ಜಿ ಸ್ವೀಕರಿಸಲುಮುಂದಾಗಿದ್ದಾರೆ. ದ.ಕ. ಜಿಲ್ಲೆಯಲ್ಲಿ ಬೆಳ್ತಂಗಡಿ ತಾ|ನಲ್ಲಿ ಗರಿಷ್ಠ 29,835 ಮತ್ತು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಗರಿಷ್ಠ 36,946 ಮಂದಿ ಫಲಾನುಭವಿಗಳನ್ನು ಗುರುತಿಸಲಾಗಿದೆ.

ಮೂರು ಲಕ್ಷಕ್ಕೂ ಅಧಿಕ ಖಾತೆದಾರರ ಸಂಖ್ಯೆ ಇದ್ದರೂ ಭೂ ಪರಿವರ್ತನೆ, ಇತರ ವಾಣಿಜ್ಯ ಉದ್ದೇಶಗಳಿಂದ ಒಂದೇ ಕುಟುಂಬದ ಪತಿ, ಪತ್ನಿ ಇಬ್ಬರ ಹೆಸರಲ್ಲಿ ಖಾತೆಗಳಿವೆ. ಅರ್ಹರನ್ನು ಪರಿಗಣಿಸುವ ಅವಧಿಯಲ್ಲಿ ಮತ್ತಷ್ಟು ಅರ್ಜಿ ತಿರಸ್ಕಾರಗೊಳ್ಳುವ ಸಾಧ್ಯತೆ ಇದೆ. ಬಾಕಿ ಉಳಿದಿರುವ ಅರ್ಜಿದಾರರು ಆನ್‌ಲೈನ್‌ ಮೂಲಕವೂ ಅರ್ಜಿ ಸಲ್ಲಿಸಬಹದು.
– ಸೀತಾ ಸಿ., ದ.ಕ. ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು

ಉಡುಪಿ ಜಿಲ್ಲೆಯಲ್ಲಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಹೊಂದಲಾದ ಗುರಿ ಶೇ.90 ಪೂರ್ಣವಾಗಿದೆ. ಆಧಾರ್‌ ಸಮಸ್ಯೆ, ಊರಿನಿಂದ ಹೊರಗುಳಿದವರು ಹೊರತುಪಡಿಸಿ 1.27 ಲಕ್ಷ ಮಂದಿಯನ್ನು ಅರ್ಹರು ಎಂದು ಪರಿಗಣಿಸಲಾಗಿದೆ. ಬಾಕಿ ಉಳಿದಿದ್ದವರು ಈ ತಿಂಗಳ ಒಳಗಾಗಿ ಅರ್ಜಿ ಸಲ್ಲಿಸದೆ ಹೋದಲ್ಲಿ ಮೊದಲ ಕಂತು ಜಮೆಗೆ ಸಮಸ್ಯೆಯಾಗಲಿದೆ.
– ಕೆಂಪೇಗೌಡ, ಉಡುಪಿ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು

ಖಾತೆಗೆ ಸಂದಾಯ ವಿವರ
ದ.ಕ. ಜಿಲ್ಲೆಮೊದಲ ಕಂತು 61,884 (ರೈತ ಖಾತೆ) ಎರಡನೇ ಕಂತು 5,629 ಉಡುಪಿ ಜಿಲ್ಲೆಮೊದಲ ಕಂತು 32,293 ಎರಡನೇ ಕಂತು 2,214

-ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.