ಪುತ್ತೂರು: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪಿ ಠಾಣೆಯಿಂದ ಪರಾರಿ…!
Team Udayavani, Mar 3, 2020, 7:19 PM IST
ಪುತ್ತೂರು: ಬಸ್ಸೊಂದರಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣದ ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದಾಗ ಠಾಣೆಯಲ್ಲಿ ಕುಳಿತಿದ್ದ ಆರೋಪಿ ಅಲ್ಲಿಂದ ಓಡಿ ತಪ್ಪಿಸಿಕೊಂಡ ಘಟನೆ ನಡೆದಿದೆ.
ಸುಳ್ಯ ಕಡೆಯಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿಗೆ ಹತ್ತಿ ಹಿಂದಿನ ಸೀಟಿನಲ್ಲಿ ಕುಳಿತಿದ್ದ ನಗರದ ಕಾಲೇಜೊಂದರ ವಿದ್ಯಾರ್ಥಿನಿಗೆ ಯುವಕನೋರ್ವ ಕಿರುಕುಳ ನೀಡುವ ಪ್ರಯತ್ನ ನಡೆಸಿದ್ದಾನೆ. ಇದನ್ನು ಆಕ್ಷೇಪಿಸಿದ ವಿದ್ಯಾರ್ಥಿನಿ ಬಸ್ಸಿನ ನಿರ್ವಾಹಕನಿಗೆ ಮಾಹಿತಿ ನೀಡಿದ್ದಾಳೆ.
ಬಸ್ಸು ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಬಳಿಗೆ ಬರುತ್ತಿದ್ದಂತೆ ಚಾಲಕ ಬಸ್ಸನ್ನು ಠಾಣೆಯ ಎದುರು ನಿಲ್ಲಿಸಿದ್ದು, ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಾಳೆ. ಆರೋಪಿಯನ್ನು ಬಸ್ಸಿನಿಂದ ಠಾಣೆಗೆ ಕರೆಸಲಾಗಿದ್ದು, ಠಾಣೆಯಲ್ಲಿದ್ದ ಮಹಿಳಾ ಪೊಲೀಸರು ವಿಚಾರಣೆ ನಡೆಸುತ್ತಿದ್ದಂತೆ ಆರೋಪಿ ಅಲ್ಲಿಂದ ಓಡಿ ಪರಾರಿಯಾಗಿದ್ದಾನೆ.
ಸಭ್ಯ ಯುವಕರಂತೆ ವಸ್ತ್ರ ಧರಿಸಿದ ಆರೋಪಿ ಪುತ್ತೂರು ಮಾರ್ಗವಾಗಿ ಓಡುತ್ತಿದ್ದಂತೆ ಸ್ಥಳೀಯರು ಬೈಕ್, ರಿಕ್ಷಾಗಳಲ್ಲಿ ಬೆನ್ನಟ್ಟಿದ್ದಾರೆ. ಆದರೆ ಆರೋಪಿ ವಿಷ್ಣುಮೂರ್ತಿ ದೇವಸ್ಥಾನ ರಸ್ತೆಯಲ್ಲಿ ಓಡಿ ಕಣ್ಮರೆಯಾಗಿದ್ದಾನೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಠಾಣೆಯಲ್ಲಿ ಮಹಿಳಾ ಪೊಲೀಸರು ಮಾತ್ರ ಇದ್ದ ಕಾರಣ ಅವರು ಆರೋಪಿಯ ಹಿಂದೆ ಬಿದ್ದಿಲ್ಲ. ವಿದ್ಯಾರ್ಥಿನಿ ಬಾಯಿ ಮಾತಿನ ದೂರು ಮಾತ್ರ ನೀಡಿದ್ದ ಕಾರಣ ಪ್ರಕರಣ ಅಲ್ಲಿಗೆ ಮುಕ್ತಾಯಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ