ಶತಮಾನದ ಕೆರೆಗೆ ಹೊಸ ಸ್ಪರ್ಶ ನೀಡಿದ ಮಾಧವ ಭಟ್ ಕುಲ್ಲಂಗಾಲು

ಮೋದಿಯವರ ಮನ್ ಕಿ ಬಾತ್ ಪ್ರೇರಣೆ

Team Udayavani, Mar 25, 2021, 8:00 AM IST

Achievement of madhav bhat kullagalu

ಸುರತ್ಕಲ್:   ಮರ ಬಳ್ಳಿಗಳಿಂದ ಕೂಡಿದ ಕಿರು ಅರಣ್ಯ. ಯಾವುದೇ ಗುಡಿ ಗೋಪುರವಿರದ ನಾಗನ ಸನ್ನಿಧಿ. ಮಳೆಗಾಲದಲ್ಲಿ ಮೇಲಿನಿಂದ ಹರಿಯುವ ಮಳೆ ನೀರು ನಾಗನಿಗೆ ಅಭಿಷೇಕ ಮಾಡುತ್ತಾ ಕೆಳಗಿನ ತಗ್ಗು ಪ್ರದೇಶಲ್ಲಿನ ಕೆರೆಯನ್ನು ತುಂಬುವ ಪ್ರಕೃತಿ ಸಹಜ ದೃಶ್ಯ ಇಂದು ಅಪರೂಪ. ಇಂತಹ ನೈಸರ್ಗಿಕ  ಶತಶತಮಾನದ ಐತಿಹ್ಯದ ಕೆರೆಯೊಂದು ಇದೀಗ ಸದ್ದಿಲ್ಲದೆ ಅಭಿವೃದ್ಧಿ ಹೊಂದುತ್ತಿದೆ.

ಇದಕ್ಕೆ ಹೊಸ ಸ್ಪರ್ಶ ನೀಡುತ್ತಿರುವವರು ಕೃಷಿಕ, ಅದ್ಯಾತ್ಮ ಚಿಂತಕ ,ಯೋಗ ಸಾಧಕ ಮಾಧವ ಭಟ್ ಕುಲ್ಲಂಗಾಲು.

ಜೀವನದಲ್ಲಿ ಹಣ ಸಂಪಾದನೆ ಹೆಚ್ಚಾದರೆ ಕೊಡುವ ಮನಸ್ಸಿರುವುದಿಲ್ಲ. ಇಲ್ಲದವರಿಗೆ ಏನಾದರೂ ಸಾಧನೆ ಮಾಡುವ ಹಂಬಲವಿರುತ್ತದೆ. ಆದರೆ ಇದಕ್ಕೆ ಅಪವಾದ ಎಂಬಂತೆ ಕುಲ್ಲಂಗಾಲು ಮಾಧವ ಭಟ್ ಅವರು ತಾವು ಕಷ್ಟಪಟ್ಟು ಸಂಪಾದಿಸಿದ ಹಣದಿಂದ  ಕೆರೆಯೊಂದನ್ನು ಅಭಿವೃದ್ಧಿ ಪಡಿಸಿ ಸುತ್ತಮುತ್ತಲಿನ ಬಾವಿ,ಕೆರೆಗಳಲ್ಲಿ ಅಂತರ್ಜಲ ಹೆಚ್ಚಿಸುವ ಕಾಯಕದಲ್ಲಿ ನಿರತರಾಗಿದ್ದಾರೆ.

 

ಸುಮಾರು ಎರಡೂವರೆ ಎಕರೆ ಪ್ರದೇಶವನ್ನು ಇದಕ್ಕಾಗಿ ಬಳಸಿ ಸುಸಜ್ಜಿತ ಕೆರೆಯೊಂದನ್ನು ನಿರ್ಮಾಣ ಮಾಡುತ್ತಿದ್ದಾರೆ.30 ಅಡಿ ಆಳ  125 ಫೀಟ್ ಅಗಲ,140 ಫೀಟ್ ಉದ್ದಕ್ಕೆ ಈ ಕೆರೆ ವಿಸ್ತರಿಸಿ ನೈಸರ್ಗಿಕವಾಗಿ ಗುಡ್ಡದ ಮೂರು ಕಡೆಗಳಿಂದ ಹರಿದು ಬರುವ ಮಳೆ ನೀರನ್ನು ನಿಲ್ಲಿಸಲು ಯೋಜನೆ ರೂಪಿಸಿದ್ದಾರೆ. ಯಾವುದೇ ಕಸಕಡ್ಡಿ ಬಾರದೆ ಸ್ವಚ್ಚ ನೀರು ಹರಿಯಲು ಫಿಲ್ಟರ್ ವ್ಯವಸ್ಥೆ ಮಾಡಿದ್ದಾರೆ.

ಜನವರಿ ತಿಂಗಳಲ್ಲಿ ತಮ್ಮ ಯೋಜನೆ ಕಾರ್ಯಗತಕ್ಕಿಳಿಸಿದ ಮಾಧವ ಭಟ್ಟರು ಇದೀಗ ಶೇ 50ರಷ್ಟು ಕೆಲಸ ಮುಗಿಸಿದ್ದಾರೆ.ಸುತ್ತಲೂ ತಡೆಗೋಡೆ,ಕೆರೆಯ ಹೂಳೆತ್ತುವ ಕೆಲಸ ಪ್ರಗತಿಯಲ್ಲಿದೆ. ಮುಂದಿನ ಮಳೆಗಾದ ಒಳಗಾಗಿ ಇಲ್ಲಿ ಸುಸಜ್ಜಿತ ಕೆರೆ ಕಂಡುಬರಲಿದೆ. ಇದರಿಂದ ಸುತ್ತಲಿನ ಮನೆಗಳ ಬಾವಿ,ಕೆರೆ ಸಮೃದ್ಧವಾದರೆ,ತೋಟಗಳು ನಳನಳಿಸುವುದರಲ್ಲಿ ಸಂಶಯವಿಲ್ಲ.

ಸುತ್ತಲೂ ಅದ್ಯಾತ್ಮ ,ಯೋಗಕ್ಕೆ ಬೇಕಾದ ವ್ಯವಸ್ಥೆ ಇಲ್ಲಿರಲಿದೆ.ಇದರ ಜತೆಗೆ ನೈಸರ್ಗಿಕ ನಾಗಬನದ ಪಾವಿತ್ರ್ಯಕ್ಕೂ ಧಕ್ಕೆ ಬಾರದಂತೆ ಧ್ಯಾನ,ಯೋಗಕ್ಕೆ ಅವಕಾಶವಿರಲಿದೆ.

ಮೋದಿ ಮನ್ ಕಿ ಬಾತ್ ಪ್ರೇರಣೆ

ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ನಲ್ಲಿ ಅಂತರ್ಜಲ ಹೆಚ್ಚಳಕ್ಕೆ ಎಲ್ಲರೂ ಮುಂದಾಗಿ ಎಂದು ಪ್ರೋತ್ಸಾಹ,ಪ್ರೇರಣೆಯ ಮಾತುಗಳನ್ನಾಡಿದ್ದರು. ಇದನ್ನು ಕೇಳಿಸಿಕೊಂಡ  ಇವರು ತಮ್ಮ ಕುಟುಂಬದ  ಜಮೀನಿನಲ್ಲಿರುವ  ಕೆರೆಯನ್ನು ಉಳಿಸಲು ಮುಂದಾಗಿಯೇ ಬಿಟ್ಟಿದ್ದಾರೆ.ಯಾರ ನೆರವಿಲ್ಲದೆ ಕೂಡಿಟ್ಟ ಹಣವನ್ನು ಇದಕ್ಕಾಗಿ ಬಳಸುತ್ತಿದ್ದಾರೆ. ಅಂದಾಜು 50 ಲಕ್ಷ ರೂ.ಇದಕ್ಕಾಗಿ ವೆಚ್ಚವಾಗಲಿದೆ.

ಬೇಸಿಗೆ ನೀರಿನ ಸಮಸ್ಯೆಗೆ ಪರಿಹಾರ;

ಇನ್ನೇನು ಬೇಸಿಗೆಯ ದಿನಗಳು ಕಾಲಿಡಲಿವೆ. ಬೇಸಿಗೆ ಎಂದೊಡನೆ ಮನದಂಗಳದಲ್ಲಿ ಮೆರವಣಿಗೆ ಹೊರಡುವುದು ಎಲ್ಲೆಡೆ ನೀರಿಗಾಗಿ ಹಾಹಾಕಾರ, ಖಾಲಿ ಕೊಡಗಳ ಪ್ರದರ್ಶನ, ಬಂದ್, ಗಲಾಟೆ. ಬೇಸಿಗೆಯ ಈ ದಿನಗಳಲ್ಲಿ ನಮ್ಮ ಪಾಡೇ ಹೀಗಾದರೆ ಕಾಡಿನ ಪ್ರಾಣಿ-ಪಕ್ಷಿಗಳ ಗತಿ? ಸದಾ ಸ್ವಾರ್ಥಕ್ಕಾಗಿ ತಲೆಕೆಡಿಸಿಕೊಳ್ಳುವ ನಾವೆಂದಾದರೂ ಹನಿ ನೀರಿಗಾಗಿ ಹಪಹಪಿಸುವ ಪ್ರಾಣಿ ಪಕ್ಷಿಗಳ ಬಗೆಗೆ ಯೋಚಿಸಿದ್ದೇವೆಯೇ? ಕೆರೆ ನೀರು ಕುಡಿದವರು ಎಂಬ ವಾಡಿಕೆ ಮಾತನ್ನು ಕೇಳಿದ್ದೀರಿ. ಮಾಧವ ಭಟ್ ಅವರು ಕೆರೆಗೆ ಹೊಸ ಸ್ಪರ್ಶ ನೀಡುತ್ತಿದ್ದಾರೆ.  ತಾವು ಕೃಷಿ, ವ್ಯಾಪಾರ ಮಾಡಿ ಕೂಡಿಟ್ಟ   ಹಣದಲ್ಲಿ! ತಮಗಾಗಿ ಅಲ್ಲ, ತಮ್ಮ ಜಮೀನಿಗಾಗಿ ಅಲ್ಲ. ಇವರು ಕೆರೆ ಕಟ್ಟಿದ್ದು  ಅಂತರ್ಜಲ ಹೆಚ್ವಳಕ್ಕಾಗಿ, ಸಮೀಪದಲ್ಲಿರುವ ಸರೀಸೃಪಗಳಿಗೆ, ಕಾಡಿನ ಪ್ರಾಣಿಪಕ್ಷಿಗಳಿಗಾಗಿ!

ಪ್ರಧಾನಿಯವರ ಆಶಯದಂತೆ  ಕೆರೆ ಹೊಸ ರೂಪ ನೀಡುವ ಆಸಕ್ತಿ ಬಂತು.ಇದರ ಜತೆಗೆ ಜೀವಿತಾವಧಿಯಲ್ಲಿ ಪ್ರಕೃತಿ ಸಹಜ ಕೊಡುಗೆ ನೀಡಬೇಕೆಂಬ ಆಸೆಯೂ ಇತ್ತು. ತಂದೆಯವರಾದ  ಕುಲ್ಲಂಗಾಲು ದಿ .ವೆಂಕಟ್ರಾಜಭಟ್ಟರ ಆಶೀರ್ವಾದಿಂದ  ಮನೆತನಕ್ಕೆ ಸಂಬಂಧಿಸಿದ ನಾಗಳಿಕೆ ಎಂದು ಪ್ರಸಿದ್ಧಿ ಪಡೆದಿರುವ ವಿಶಾಲ ಪ್ರದೇಶದಲ್ಲಿ ಹಬ್ಬಿ ನಿಂತಿರುವ ನಾಗದೇವರ ಬನದಸಮೀಪದ ಕೆರೆಯನ್ನು ಅಭಿವೃದ್ಧಿ ಮಾಡಿ ಅಂತರ್ಜಲ ಸೆಲೆ ಹೆಚ್ಚಿಸಲು ಮುಂದಾಗಿದ್ದೇನೆ. ಇದರಿಂದ ಸುತ್ತಲಿನ ಪ್ರದೇಶಕ್ಕೆ ಪ್ರಯೋಜನವಾಗಲಿದೆ. -ಮಾಧವ ಭಟ್ ಕುಲ್ಲಂಗಾಲು

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.