ಅತಿಕ್ರಮಣ ವಿರುದ್ಧ ಕಟ್ಟು ನಿಟ್ಟಿನ ಕ್ರಮ; ಅಧಿಕಾರಿಗಳಿಗೆ ಡಾ| ಕೆ.ವಿ. ರಾಜೇಂದ್ರ ಸೂಚನೆ


Team Udayavani, May 28, 2022, 12:09 AM IST

ಅತಿಕ್ರಮಣ ವಿರುದ್ಧ ಕಟ್ಟು ನಿಟ್ಟಿನ ಕ್ರಮ; ಅಧಿಕಾರಿಗಳಿಗೆ ಡಾ| ಕೆ.ವಿ. ರಾಜೇಂದ್ರ ಸೂಚನೆ

ಮಂಗಳೂರು: ಸರಕಾರಿ ಜಾಗವನ್ನು ಯಾರೇ ಅತಿಕ್ರಮಣ ಮಾಡಿದರೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಮತ್ತು ಅತಿಕ್ರಮಣ ತೆರವುಗೊಳಿಸಿ ಸರಕಾರಿ ಉದ್ದೇಶಗಳಿಗೆ ಮೀಸಲಿರಿಸ‌ಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಹೇಳಿದರು.

ಗಂಜೀಮಠ ಗ್ರಾಮ ಪಂಚಾಯತ್‌ನ ಮೊಗರು ಗ್ರಾಮದಲ್ಲಿ ಶುಕ್ರವಾರ ಜರಗಿದ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯದ ಅಂಗವಾಗಿ ಕುಕ್ಕಟ್ಟೆ ವಿದ್ಯಾಭಾರತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸರಕಾರಿ ಜಾಗ ಅತಿಕ್ರಮಣ ಕುರಿತು ಬಂದ ದೂರು ಅರ್ಜಿಯ ಕುರಿತು ಅವರು ಪ್ರತಿಕ್ರಿಯಿಸಿದರು.

ಮಂಜೂರಾತಿ ಪತ್ರ ವಿತರಣೆ
ಗ್ರಾಮವಾಸ್ತವ್ಯದಲ್ಲಿ ಒಟ್ಟು ವಿವಿಧ ಸಮಸ್ಯೆ, ವಿಚಾರಗಳಿಗೆ ಸಂಬಂಧಿಸಿ ಒಟ್ಟು 63 ಅರ್ಜಿಗಳ ಸಲ್ಲಿಕೆಯಾಯಿತು. 30 ಅರ್ಜಿಗಳನ್ನು ಸ್ಥಳದಲ್ಲೇ ಇತ್ಯರ್ಥಗೊಳಿಸಲಾಯಿತು. 20 ಮಂದಿಗೆ ವಸತಿ ಹಾಗೂ 14 ಮಂದಿಗೆ ಪಿಂಚಣಿ, ಮಾಸಾಶನ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಯವರು, ಗ್ರಾಮ ವಾಸ್ತವ್ಯದಲ್ಲಿ ಮಾಸಿಕ ಪಿಂಚಣಿ, ಮನೆ, ನಿವೇಶನ, ರಸ್ತೆ, ಕೃಷಿ ಹಾನಿ, ತೋಟಗಾರಿಕೆ ಬೆಳೆ ಹಾನಿ, ಶಾಲಾ ಅಭಿವೃದ್ಧಿ, ಕಂದಾಯ ಇಲಾಖೆ ಸೇರಿದಂತೆ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ಬಂದಿರುವ ಅರ್ಜಿಗಳಲ್ಲಿ ಶೇ. 50ಕ್ಕೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲಾಗಿದೆ. ಶೇ. 25ನ್ನು ಹೆಚ್ಚಿನ ಪರಿಶೀಲನೆ ಹಿನ್ನೆಲೆಯಲ್ಲಿ ಮುಂದಿನ ಕ್ರಮಕ್ಕೆ ಕಳುಹಿಸಲಾಗುತ್ತಿದೆ. ಇನ್ನುಳಿದ ಶೇ. 25 ಅರ್ಜಿಗಳು ಕಾನೂನು ಸಮಸ್ಯೆ, ನ್ಯಾಯಾಲಯಗಳಲ್ಲಿರುವಂತದ್ದು ಆಗಿದ್ದು ಈ ಬಗ್ಗೆ ಅವರಿಕೆ ಮನವರಿಕೆ ಮಾಡಿ ಸೂಕ್ತ ಮಾಹಿತಿ ನೀಡಲಾಗಿದೆ ಎಂದರು.

ವಿವಿಧೆಡೆ ಭೇಟಿ
ಜಿಲ್ಲಾಧಿಕಾರಿಯವರು ಮಧ್ಯಾಹ್ನದ ಬಳಿಕ ಗ್ರಾಮದ ವಿವಿಧೆಡೆಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಅಂಗನವಾಡಿ, ಮೊಗರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕೊರಗರ ಕಾಲನಿಗೆ ಭೇಟಿ ನೀಡಿದರು.ಕೊರಗರ ಕಾಲನಿಯಲ್ಲಿ ಮೂಲಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಗಂಜೀಮಠದಲ್ಲಿ ಮನೆ ನಿವೇಶನಕ್ಕೆ ಮೀಸಲಿರಿಸಿರುವ 11.19 ಎಕ್ರೆ ಜಾಗಕ್ಕೆ ಭೇಟಿ ಸ್ಥಳ ಪರಿಶೀಲನೆ ಮಾಡಿದರು. ಗ್ರಾ.ಪಂ. ವ್ಯಾಪ್ತಿಯಲ್ಲಿ ಸರಕಾರದ ವಿವಿಧ ಉದ್ದೇಶಗಳಿಗೆ ಸುಮಾರು 25 ಎಕ್ರೆ ಜಾಗವನ್ನು ಹೊಂದಿಸಿಕೊಳ್ಳುವ ಬಗ್ಗೆ ವಿವಿಧಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗ್ರಾಮಸ್ಥರಿಂದ ಮನವಿ
ಗ್ರಾಮಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳಿಗೆ ಬಗ್ಗೆ ಜನರು ಅರ್ಜಿ ಸಲ್ಲಿಸಿದರು. ಬಡವರಿಗೆ ಮನೆ ನಿರ್ಮಾಣಕ್ಕೆ 11 ಇ ನಿಬಂಧನೆ ಸೃಷ್ಟಿಸಿರುವ ಸಮಸ್ಯೆ, ಮೊಗರು-ಅರ್ಬಿ ರಸ್ತೆ ದುಸ್ಥಿತಿ, ಮೊಗರು ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ, ಬಿಪಿಎಲ್‌ ಪಡಿತರ ಚೀಟಿ, ಪಿಂಚಣಿ, ಮಸಾಶನ ಸೇರಿದಂತೆ ವಿವಿಧ ವಿಚಾರಗಳಿಗೆ ಸಂಬಂಧಿಸಿ ಅರ್ಜಿಗಳು ಸಲ್ಲಿಕೆಯಾಗಿದ್ದವು.

ಜಿ.ಪಂ. ಸಿಇಒ ಡಾ| ಕುಮಾರ್‌, ಎಸಿ ಮದನಮೋಹನ್‌, ತಹಶೀಲ್ದಾರ್‌ ಪುರಂದರ ಹೆಗ್ಡೆ, ಗ್ರಾ.ಪಂ. ಅಧ್ಯಕ್ಷ ನೋಣಯ ಕೋಟ್ಯಾನ್‌, ಉಪಾಧ್ಯಕ್ಷೆ ಕುಮುದಾ ನಾಯ್ಕ, ಉಪತಹಶೀಲ್ದಾರ್‌ ಶಿವಪ್ರಸಾದ್‌, ಕಂದಾಯ ನಿರೀಕ್ಷಕ ಪೂರ್ಣಚಂದ್ರ ತೇಜಸ್ವಿ, ಪಿಡಿಒ ಜಗದೀಶ್‌ ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ರಾತ್ರಿ ವಾಸ್ತವ್ಯ
ರಾತ್ರಿ ವೇಳೆ ಮೊಗರು ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ವಾಸ್ತವ್ಯ ಹೂಡಿದ ಜಿಲ್ಲಾಧಿಕಾರಿ ಜನರ ಜತೆ ಅಭಿವೃದ್ಧಿ, ಸಮಸ್ಯೆಗಳಿಗೆ ಸಂಬಂಧಿಸಿ ಚರ್ಚಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.