“ಕಾಂಗ್ರೆಸ್‌ ನಿರ್ಧಾರ ಆಧರಿಸಿ ಕ್ರಮ’


Team Udayavani, Nov 10, 2019, 5:50 AM IST

HD-Devegowda–750

ಮಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ಬಳಿಕ ಬಿಜೆಪಿ ಸರಕಾರ ಅತಂತ್ರ ಸ್ಥಿತಿಗೆ ತಲುಪಿದರೆ ಕಾಂಗ್ರೆಸ್‌ ಹೈಕಮಾಂಡ್‌ ನಿರ್ಧಾರವನ್ನು ಅವಲಂಬಿಸಿ ಜೆಡಿಎಸ್‌ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಹೇಳಿದ್ದಾರೆ.

ಶನಿವಾರ ಮಂಗಳೂರಿನಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್‌ ಜತೆಗೆ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದರು.

ಮುಂದಿನ ಚುನಾವಣೆಗಳಲ್ಲಿ ಜೆಡಿಎಸ್‌ನ್ನು ನಿರ್ಲಕ್ಷಿಸಿ ಯಾರೂ ಸರಕಾರ ರಚನೆ ಮಾಡಲು ಸಾಧ್ಯವಾಗದು ಎನ್ನುವುದು ನಮ್ಮ ಭಾವನೆ. ಈಗ ಮಹಾರಾಷ್ಟ್ರದಲ್ಲಿನ ಪರಿಸ್ಥಿತಿ ನೋಡಿದರೆ ಇದು ಎಲ್ಲರಿಗೂ ಅರ್ಥವಾಗುತ್ತದೆ ಎಂದರು.

2020ರಲ್ಲಿ ಮಧ್ಯಾಂತರ ಚುನಾವಣೆ?
2020ರಲ್ಲಿ ರಾಜ್ಯದಲ್ಲಿ ಮಧ್ಯಾಂತರ ಚುನಾವಣೆ ಘೋಷಣೆಯಾದರೂ ಅಚ್ಚರಿ ಇಲ್ಲ. ಉಪಚುನಾವಣೆ, ಮಧ್ಯಾಂತರ ಚುನಾವಣೆ ಬಂದರೂ ಜೆಡಿಎಸ್‌ ಮಾತ್ರ ಏಕಾಂಗಿಯಾಗಿ ಸ್ಪರ್ಧೆ ಎದುರಿಸಲಿದೆ ಎಂದು ತಿಳಿಸಿದರು.ನಾನು ಈ ಇಳಿವಯಸ್ಸಿನಲ್ಲೂ 3 ತಿಂಗಳು ಪೂರ್ತಿ ರಾಜ್ಯವ್ಯಾಪಿ ಓಡಾಟ ನಡೆಸಿ ಪಕ್ಷವನ್ನು ಉಳಿಸಿ, ಬಲಗೊಳಿಸುತ್ತೇನೆ ಎಂದರು.

ಬಿಜೆಪಿ ಬಗ್ಗೆ ಮೃದು ನೀತಿ ಇಲ್ಲ
ಇತ್ತೀಚಿನ ದಿನಗಳಲ್ಲಿ ನಾನು ಬಿಜೆಪಿಗೆ ಬಗ್ಗೆ ಮೃದು ನೀತಿ ಹೊಂದಿದ್ದೇನೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ನಾನು ಅಥವಾ ನಮ್ಮ ಪಕ್ಷ ಅಂತಹ ನಿಲುವನ್ನು ಹೊಂದಿಲ್ಲ ಎಂದು ದೇವೇಗೌಡ ಸ್ಪಷ್ಟಪಡಿಸಿದರು.

ನಮ್ಮ ಬಗ್ಗೆ ಸಿದ್ದರಾಮಯ್ಯ ಈ ಹಿಂದೆ ಲಘು ವಾಗಿ ಮಾತನಾಡಿದ್ದರು. ಆ ಬಳಿಕ ನಾನು ಬಿಜೆಪಿಯ ಬಲ ತಗ್ಗಿಸಲು ಒಂದಾಗುವಂತೆ 3 ಬಾರಿ ಸಿದ್ದರಾಮಯ್ಯ ಜತೆ ಮಾತನಾಡಿದ್ದೇನೆ. ಆದರೆ ಅವರಿಗೆ ವಿಪಕ್ಷ ನಾಯಕನಾಗುವ, ಯಡಿಯೂರಪ್ಪ ಅವರಿಗೆ ಸಿಎಂ ಆಗುವ ಪ್ರಬಲ ಆಕಾಂಕ್ಷೆ ಇತ್ತು. ಮೈತ್ರಿ ಸರಕಾರ ಪತನಕ್ಕೆ ಸಿದ್ದರಾಮಯ್ಯ ಅವರೂ ಪರೋಕ್ಷ ಕಾರಣ ಎಂದು ಗೌಡರು ಆರೋಪಿಸಿದರು.

ಅತೃಪ್ತರ ಜತೆ ಮಾತುಕತೆ
ಮೈತ್ರಿ ಸರಕಾರ ಅಸ್ತಿತ್ವದಲ್ಲಿದ್ದಾಗ ಸಚಿವ ಸ್ಥಾನ ನೀಡದ ಬಗ್ಗೆ ಕೆಲವು ಶಾಸಕರಿಗೆ ಅತೃಪ್ತಿ ಇದೆ. ಅನಂತರ ಅಪಸ್ವರ ಎತ್ತಿದ ಹಿರಿಯ ಮುಖಂಡ ಬಸವ ರಾಜ ಹೊರಟ್ಟಿ ಸೇರಿದಂತೆ ಅಸಮಾಧಾನಿತರ ಜತೆ ನ. 12ರಿಂದ 14ರ ವರೆಗೆ ನಡೆಯುವ ಪಕ್ಷದ ಸಭೆಯಲ್ಲಿ ಇತ್ಯರ್ಥ ಪಡಿಸಲಾಗುವುದು. ಎಲ್ಲರನ್ನೂ ಸೇರಿಸಿ ಕೊಂಡು ಪಕ್ಷವನ್ನು ಮತ್ತೆ ಸಂಘಟಿಸುತ್ತೇವೆ ಎಂದು ಗೌಡರು ಹೇಳಿದರು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.