ಎಲ್ಲ ಪಿಜಿಗಳಲ್ಲಿ ಸಿಸಿ ಕೆಮರಾ ಅಳವಡಿಸಲು ಕ್ರಮ

ಮಂಗಳೂರಿನಲ್ಲಿ ವಿದ್ಯಾರ್ಥಿನಿ ಕೊಲೆ ಹಿನ್ನೆಲೆ

Team Udayavani, Jun 9, 2019, 6:00 AM IST

CC

ಮಂಗಳೂರು: ಉದ್ಯೋಗ ಮತ್ತು ಶಿಕ್ಷಣದ ತಾಣ ಎನಿಸಿಕೊಂಡಿರುವ ನಗರದ ಎಲ್ಲ ಪೇಯಿಂಗ್‌ ಗೆಸ್ಟ್‌ಹೌಸ್‌ (ಪಿಜಿ) ಗಳಲ್ಲಿ ಸಿಸಿ ಕೆಮರಾ ಅಳವಡಿಕೆ ಕಡ್ಡಾಯವಾಗಲಿದೆ.
ಶುಕ್ರವಾರ ಅತ್ತಾವರದ ಪಿಜಿಯೊಂದರಲ್ಲಿ ಘಟಿಸಿದ ಚಿಕ್ಕಮಗಳೂರು ಮೂಲದ ವಿದ್ಯಾರ್ಥಿನಿಯೊಬ್ಬಳ ಕೊಲೆ ಸಂಬಂಧ ಕೂಡಲೇ ಎಚ್ಚೆತ್ತುಕೊಂಡಿರುವ ನಗರ ಪೊಲೀಸ್‌ ಇಲಾಖೆ, ಈ ನಿರ್ಧಾರಕ್ಕೆ ಬಂದಿದೆ.

ಪ್ರಸ್ತುತ 150 ಪಿಜಿ ಗಳು ಮಹಾನಗರಪಾಲಿಕೆಯ ಪರವಾನಗಿ ಪಡೆದಿವೆ. ಆದರೆ ಅದಕ್ಕಿಂತ ಎರಡು-ಮೂರು ಪಟ್ಟು ಹೆಚ್ಚು ಪಿಜಿಗಳು ಅನಧಿ ಕೃತ ವಾಗಿ ನಡೆಯುತ್ತಿವೆ ಎನ್ನಲಾಗಿದೆ. ಇದನ್ನು ಪುಷ್ಟೀ ಕರಿಸುವಂತೆ ಪಾಲಿಕೆ ಆರೋಗ್ಯ ಇಲಾಖೆ 2019ರ ಜನವರಿಯಿಂದ ಮೇ ವರೆಗೆ ಎಂಟು ಅನಧಿಕೃತ ಪಿಜಿ ಗಳ ಮೇಲೆ ದಾಳಿ ನಡೆಸಿದೆ.

ನಿಯಮವಿದ್ದರೂ ಹೀಗೆ
ಪಿಜಿ ನಡೆಸಲು ವ್ಯಾಪಾರ ಪರವಾನಿಗೆಯನ್ನು ಪಡೆದುಕೊಳ್ಳಬೇಕೆಂಬ ನಿಯಮವಿದ್ದರೂ, ಎಲ್ಲರೂ ಪಾಲಿಸುತ್ತಿಲ್ಲ. ಸ್ವಂತ ಮನೆಯಲ್ಲೋ, ಮನೆ ಬಾಡಿಗೆ ಪಡೆದೋ ಪಿಜಿಗಳನ್ನು ನಡೆಸಲಾಗುತ್ತಿದೆ. ಇಂಥ ಪಿಜಿಗಳಲ್ಲಿ ಉಳಿಯಲು ಬಂದವರಿಂದ ಆಧಾರ್‌ ಕಾರ್ಡ್‌, ಮತದಾರ ಗುರುತಿನ ಚೀಟಿ, ರೇಷನ್‌ ಕಾರ್ಡ್‌ ಅಥವಾ ಇತರ ಗುರುತು ಪತ್ರದ ಪ್ರತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಅಲ್ಲದೆ, ಆಕೆ/ಆತ ಕೆಲಸ ಮಾಡುತ್ತಿರುವ ಅಥವಾ ಓದುತ್ತಿರುವ ಸಂಸ್ಥೆಯ ವಿಳಾಸವನ್ನೂ ಪಡೆಯಬೇಕು. ಆದರೆ, ಹೆಚ್ಚಿನ ಪಿಜಿ ಗಳ ಮಾಲಕರು ಈ ನಿಯಮಗಳನ್ನು ಪಾಲಿಸುತ್ತಿಲ್ಲ ಎಂಬ ದೂರಿದೆ.

ಭದ್ರತೆ, ಸಿಸಿ ಕ್ಯಾಮರಾ ಇಲ್ಲ
ಕರ್ನಾಟಕ ಸೆಕ್ಯುರಿಟಿ ಆ್ಯಕ್ಟ್ ಪ್ರಕಾರ ಹೆಚ್ಚು ಜನ ವಾಸವಾಗಿರುವ ಸ್ಥಳಗಳಲ್ಲಿ ಭದ್ರತಾ ದೃಷ್ಟಿಯಿಂದ ಸಿಸಿಟಿವಿ ಅಳವಡಿಸಬೇಕು. ಭದ್ರತಾ ಕ್ರಮ ಅನು ಸರಿಸಬೇಕು. ಆದರೆ, ಬಹುತೇಕ ಕಡೆ ಮಾಲಕರು ವಾಸವಾಗಿರುವುದಿಲ್ಲ ಮತ್ತು ಭದ್ರತಾ ಸಿಬಂದಿಯನ್ನೂ ನಿಯೋಜಿಸಿರುವುದಿಲ್ಲ. ಸಮಯದ ಮಿತಿಯಿದ್ದರೂ ಹೊರ ಹೋಗುವಿಕೆ-ಒಳ ಬರುವಿಕೆಯನ್ನು ಸ್ಪಷ್ಟವಾಗಿ ಗಮನಿಸಲು ಯಾರೂ ಇರುವುದಿಲ್ಲ. ಪಿಜಿಗಳಲ್ಲಿ ಸಿಸಿ ಕೆಮರಾವೂ ಇಲ್ಲದಿರುವುದರಿಂದ ಅಲ್ಲಿನ ವಾಸಿಗಳ ಚಲನವಲನಗಳ ಬಗ್ಗೆಯೂ ನಿಗಾ ಇಡಲಾಗುತ್ತಿಲ್ಲ.

ಠಾಣಾ ವ್ಯಾಪ್ತಿಯ ಪಿಜಿಗಳ ಪಟ್ಟಿ
ನಗರದ ಎಲ್ಲಾ ಪೊಲೀಸ್‌ ಠಾಣೆಗಳ ವ್ಯಾಪ್ತಿಯ ಪಿಜಿಗಳ ಪಟ್ಟಿ ಸಿದ್ಧಪಡಿಸಲು ಠಾಣೆಗಳಿಗೆ ಸೂಚಿಸ ಲಾಗಿದೆ. ಪಟ್ಟಿ ಸಿದ್ಧಗೊಂಡ ಬಳಿಕ ಅಧಿಕೃತ ಮತ್ತು ಅನಧಿಕೃತಗಳ ಸಂಖ್ಯೆ ಸ್ಪಷ್ಟಗೊಳ್ಳಲಿದೆ. ಅನಧಿಕೃತ ಪಿಜಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಪಿಜಿಯಲ್ಲ
ಅತ್ತಾವರದಲ್ಲಿ ವಿದ್ಯಾರ್ಥಿನಿ ಕೊಲೆಯಾದ ಕಟ್ಟಡ ಪಿಜಿಯಲ್ಲ; ಬಾಡಿಗೆ ವಸತಿ ಎಂಬುದಾಗಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಆದರೆ, ಈ ಕಟ್ಟಡ ಪಿಜಿ ಮಾದರಿಯಲ್ಲೇ ಇದ್ದು, ಮೃತ ಯುವತಿ ಮತ್ತು ಆಕೆಯ ಸ್ನೇಹಿತನಿಗೆ ಒಂದು ರೂಂನ್ನು ಬಾಡಿಗೆ ನೀಡಲಾಗಿತ್ತು. ಮಲಗುವ ಕೋಣೆ, ಬಾತ್‌ರೂಂ ಮತ್ತು ಶೌಚಾಲಯ ಮಾತ್ರ ಇತ್ತು. ನಾಲ್ಕು ಮಹಡಿಯ ಕಟ್ಟಡದಲ್ಲಿ ಕೆಳಗೆ ಮಾಲಕರಿದ್ದು, ಮೇಲಿನ ಮಹಡಿಗಳಲ್ಲಿ ರೂಮ್‌ಗಳನ್ನು ಬಾಡಿಗೆ ನೀಡಲಾಗಿತ್ತೇ ಅಥವಾ ಪಿಜಿ ರೂಪದಲ್ಲಿ ನಡೆಸಲಾಗುತ್ತಿತ್ತೇ ಎನ್ನುವ ಅಂಶ ಇನ್ನೂ ಬಹಿರಂಗಗೊಳ್ಳಬೇಕಿದೆ.

ಹೊಸ ನೀತಿಯ ಭರವಸೆ
ಹಲವು ಶಿಕ್ಷಣ ಸಂಸ್ಥೆಗಳು, ಔದ್ಯೋಗಿಕ ಸಂಸ್ಥೆಗಳಿರುವ ಮಂಗಳೂರಿಗೆ ಜಿಲ್ಲೆ ಮಾತ್ರವಲ್ಲದೆ, ಹೊರ ಜಿಲ್ಲೆ, ಹೊರ ರಾಜ್ಯ, ಹೊರ ದೇಶಗಳಿಂದಲೂ ವಿದ್ಯಾರ್ಥಿಗಳು, ಉದ್ಯೋಗಿಗಳು ಬಂದು ಪಿಜಿಗಳಲ್ಲಿ ನೆಲೆಸುತ್ತಾರೆ. ಆದರೆ, ಪಿಜಿಗಳಲ್ಲಿ ಮೂಲ ಸೌಲಭ್ಯ, ಭದ್ರತೆ ಮತ್ತಿತರ ವಿಷಯಗಳಿಗೆ ಸಂಬಂಧಿಸಿ ಯಾವುದೇ ಸ್ಪಷ್ಟ ನೀತಿ ನಿಯಮವಿಲ್ಲ. ಈ ಬಗ್ಗೆ ಕೆಲ ದಿನಗಳ ಹಿಂದೆ ನಗರಾಭಿವೃದ್ಧಿ ಸಚಿವ ಯು. ಟಿ. ಖಾದರ್‌ ಅವರೂ ಪ್ರಸ್ತಾವಿಸಿದ್ದು, ರಾಜ್ಯದ ನಗರ ಪ್ರದೇಶದಲ್ಲಿರುವ ಪಿಜಿ ಹಾಗೂ ಹೋಂ ಸ್ಟೇಗಳಿಗೆ ಸಂಬಂಧಿಸಿ ಹೊಸ ನೀತಿ ರೂಪಿಸಲಾಗುವುದು ಎಂದು ತಿಳಿಸಿದ್ದರು.

ಎಲ್ಲ ಪಿಜಿ ಗಳಲ್ಲೂ ಸಿಸಿ ಕೆಮರಾ ಅಳವಡಿಕೆ ಕಡ್ಡಾಯಗೊಳಿಸ ಲಾಗುವುದು. ಈಗಾಗಲೇ ಕೆಲವೆಡೆ ಕೆಮರಾ ಅಳವಡಿಸಿದ್ದು, ಉಳಿದ ಪಿಜಿಗಳಿಗೂ ಸೂಚಿಸಲಾಗುವುದು. ಇದರೊಂದಿಗೆ ನಗರದ ಪಿಜಿಗಳ ಪಟ್ಟಿ ಸಿದ್ಧಪಡಿಸಲು ಠಾಣೆಗಳಿಗೆ ಸೂಚಿಸಲಾಗಿದೆ. ಮಾಹಿತಿ ಲಭ್ಯವಾದ ಮೇಲೆ ಅನಧಿಕೃತ ಪಿಜಿ ಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು.
– ಸಂದೀಪ್‌ ಪಾಟೀಲ್‌,
ಕಮಿಷನರ್‌ ಆಫ್ ಪೊಲೀಸ್‌,
ಮಂಗಳೂರು ನಗರ

-ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.