ಶಾಲಾ ರಜೆ ಗೊಂದಲ ನಿವಾರಣೆಗೆ ಕ್ರಮ: ತನ್ವೀರ್ ಸೇಠ್
Team Udayavani, Sep 24, 2017, 11:45 AM IST
ಮಂಗಳೂರು : ಶಾಲೆಗಳಿಗೆ ವಿವಿಧ ರಜೆ ಘೋಷಣೆ ಕುರಿತಂತೆ ಗೊಂದಲ ನಿವಾರಿಸುವ ನಿಟ್ಟಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಏಕರೂಪದ ರಜಾ ಪದ್ಧತಿ ಜಾರಿಗೆ ತರಲಾಗುವುದು ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮತ್ತು ವಕ್ಫ್ ಖಾತೆ ಸಚಿವ ತನ್ವಿರ್ ಸೇಠ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ವರ್ಷ ದಸರಾ ರಜೆಯಲ್ಲಿ ವ್ಯತ್ಯಾಸಗಳಾಗಿವೆ. ಮೈಸೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರಜೆಯಲ್ಲಿ ಮಾರ್ಪಾಟು ಮಾಡಲಾಗಿದೆ. ಇದನ್ನು ನಿವಾರಿಸಿ ಏಕರೂಪದ ರಜೆ ನಿಗದಿಪಡಿಸುವ ನಿಟ್ಟಿನಲ್ಲಿ ಶೈಕ್ಷಣಿಕ ವರ್ಷದ ಆರಂಭದಲ್ಲೇ ಕ್ರಮ ಕೈಗೊಳ್ಳಲಾಗುವುದು. ಹಬ್ಬಗಳಿಗೆ ಹೊಂದಿಕೆಯಾಗುವಂತೆ ರಜೆಗಳನ್ನು ಶೈಕ್ಷಣಿಕ ವರ್ಷದ ಆರಂಭದಲ್ಲೇ ಪ್ರಕಟಿಸಲಾಗುವುದು ಎಂದರು.
ಉಪ ಲೋಕಾಯುಕ್ತರ
ಮಧ್ಯಾಂತರ ವರದಿ ಅಧ್ಯಯನ
ವಕ್ಫ್ ಆಸ್ತಿಗಳಿಗೆ ಸಂಬಂಧಪಟ್ಟು ಉಪ ಲೋಕಾಯುಕ್ತರು ಸಲ್ಲಿಸಿರುವ ಮಧ್ಯಾಂತರ ವರದಿಯನ್ನು ರಾಜ್ಯ ಸರಕಾರ ಪರಿಶೀಲನೆ ಮಾಡುತ್ತಿದೆ ಎಂದು ಸಚಿವ ತನ್ವೀರ್ ಹೇಳಿದರು.
ವಕ್ಫ್ ಆಸ್ತಿ ರಕ್ಷಣೆಗೆ ಸರಕಾರ ಅವಶ್ಯ ಕ್ರಮಗಳನ್ನು ಕೈಗೊಂಡಿದ್ದು, ಕಾನೂನು ಬಿಗಿಗೊಳಿಸಲಾಗಿದೆ. ಪ್ರಕರಣಗಳ ವಿಚಾರಣೆಗೆ ಬೆಂಗಳೂರು ಹಾಗೂ ಮೈಸೂರು ವಿಭಾಗಕ್ಕೆ ಒಂದು ಹಾಗೂ ಬೆಳಗಾವಿ ಹಾಗೂ ಕಲ್ಬುರ್ಗಿ ವಿಭಾಗಕ್ಕೆ ಒಂದರಂತೆ ಬಹು ಸದಸ್ಯತ್ವದ ಟ್ರಿಬ್ಯೂನಲ್ ರಚಿಸಿದ್ದು, ಸಂಚಾರಿ ಪೀಠದ ಮಾದರಿಯಲ್ಲಿ ಕಾರ್ಯನಿರ್ವಹಿಸಲಿದೆ. ಇದರ ಜತೆಗೆ ವಕ್ಫ್ ಆಸ್ತಿಗಳ ರಕ್ಷಣೆಗೆ ಎಸ್ಪಿ ಶ್ರೇಣಿಯ ಅಧಿಕಾರಿಯೋರ್ವರ ನೇತೃತ್ವದಲ್ಲಿ ವಿಶೇಷ ಕಾರ್ಯಪಡೆಯನ್ನು ರಚಿಸುವ ಪ್ರಸ್ತಾವನೆ ಇದೆ ಎಂದವರು ವಿವರಿಸಿದರು.
ವಕ್ಫ್ ಅಸ್ತಿಗಳ ನಿರ್ವಹಣೆ ಕುರಿತಂತೆ ಮಾಹಿತಿ ನೀಡಲು ನಿರ್ವಹಣೆಗಾರರು, ಮುತವಲ್ಲಿಗಳ ಸಮಾವೇಶಗಳನ್ನು ಜಿಲ್ಲಾ ಮಟ್ಟಗಳಲ್ಲಿ ನಡೆಸಲಾಗುತ್ತಿದೆ. ಈಗಾಗಲೇ 12 ಜಿಲ್ಲೆಗಳಲ್ಲಿ ಈ ರೀತಿಯ ಸಮಾವೇಶಗಳು ನಡೆದಿದ್ದು, ದಕ್ಷಿಣ ಜಿಲ್ಲೆಯ ಸಮಾವೇಶ ಇಂದು ನಡೆದಿದೆ ಎಂದವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್