ಬಿಸಿಲಿನ ಝಳಕ್ಕೆ ಕಾರ್ಯಕರ್ತರು, ಮುಖಂಡರು ಹೈರಾಣು!


Team Udayavani, May 5, 2018, 3:34 PM IST

5-May-13.jpg

ಪುತ್ತೂರು: ಪಕ್ಷಗಳ ಮುಖಂಡರು, ಕಾರ್ಯಕರ್ತರನ್ನು ಬಿಸಿಲಿನ ಝಳ ಸಂಪೂರ್ಣ ಸೋಲಿಸಿದೆಯೇ ಎಂಬ ಅನುಮಾನ ಕುಂಬ್ರ, ಬಡಗನ್ನೂರು ಭಾಗದ ಜನರದ್ದು.

ಜನರು ಈ ರೀತಿ ಮಾತನಾಡುವುದಕ್ಕೂ ಕಾರಣ ಇದೆ. ರಾಷ್ಟ್ರೀಯ ಪಕ್ಷಗಳ ಮುಖಂಡರು ಹೇಳಿಕೊಂಡಿರುವಂತೆ, ಮನೆ ಮನೆ ಭೇಟಿ ಅಭಿಯಾನ ಎರಡು ರೌಂಡ್‌ ಪೂರ್ಣಗೊಂಡಿದೆ. ಈ ಅಭಿಯಾನದ ಪ್ರಕಾರ ಎಲ್ಲ ಮನೆ ಬಾಗಿಲಿಗೆ ತೆರಳಿ ಮತ ಯಾಚಿಸಬೇಕು. ಆದರೆ ಕೆಲವು ಮತದಾರರ ಪ್ರಕಾರ, ಇನ್ನೂ ಹಲವು ಮನೆಗಳಿಗೆ ಮುಖಂಡರು, ಕಾರ್ಯಕರ್ತರು ಬಂದೇ ಇಲ್ಲ.

ಆಧುನಿಕ ಕಾಲಘಟ್ಟದಲ್ಲಿ ಎಲ್ಲರಿಗೂ ತಮ್ಮ ಮನೆ, ಕುಟುಂಬದ್ದೇ ಚಿಂತೆ. ಇನ್ನು ಊರಿನ ಬಗ್ಗೆ ಆಲೋಚಿಸಲು ಪುರುಸೊತ್ತು ಎಲ್ಲಿದೆ? ಈ ಕಾರಣದಿಂದ ನಾಯಕರು ಉತ್ಸಾಹ ಕಳೆದು ಕೊಂಡಿದ್ದಾರೆಯೇ ಎಂಬಂತೆ ಭಾಸವಾಗುತ್ತಿದೆ ಎನ್ನುತ್ತಾರೆ ಪರ್ಪುಂಜದ ಉದಯ್‌.

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ 11 ಮಂದಿ ಅಭ್ಯರ್ಥಿಗಳು ಆಖಾಡದಲ್ಲಿ ಇದ್ದಾರೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಕ್ಷೇತ್ರದಿಂದ ಇಷ್ಟು ಮಂದಿ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಆದರೆ ಎಷ್ಟೋ ಜನರಿಗೆ ರಾಷ್ಟ್ರೀಯ ಪಕ್ಷಗಳನ್ನು ಹೊರತುಪಡಿಸಿ ಉಳಿದ ಯಾವುದೇ ಅಭ್ಯರ್ಥಿಗಳ ಬಗ್ಗೆ ತಿಳಿದೇ ಇಲ್ಲ. ಒಂದಿಬ್ಬರು ಜಾಹೀರಾತು ನೀಡುತ್ತಿದ್ದಾರೆ. ಆ ಮೂಲಕ ಜನರನ್ನು ತಲುಪಬಹುದು ಎನ್ನುವುದು ಅವರ ತಪ್ಪು ನಂಬಿಕೆ ಎನ್ನುತ್ತಾರೆ ಕುಂಬ್ರದ ಸೂರಜ್‌.

ಈ ವರ್ಷ ಅಬ್ಬರದ ಪ್ರಚಾರಕ್ಕೆ ಅವಕಾಶವೇ ನೀಡಿಲ್ಲ. ಬ್ಯಾನರ್‌, ಭಿತ್ತಿಪತ್ರ ಅಳವಡಿಕೆಗೆ ಅನುಮತಿ ಇಲ್ಲ. ಆದ್ದರಿಂದ ಪ್ರಚಾರದ ರಂಗು ಅಷ್ಟಾಗಿ ಕಾಣಿಸುತ್ತಿಲ್ಲ. ಪುತ್ತೂರು ಗ್ರಾಮಾಂತರ ಭಾಗದಲ್ಲಿ ಎಲ್ಲ ರಸ್ತೆಗಳು ಅಭಿವೃದ್ಧಿಗೊಂಡಿವೆ.
ಎಲ್ಲ ರಸ್ತೆಗಳಲ್ಲೂ ಶಕುಂತಳಾ ಶೆಟ್ಟಿ ಹೆಸರು ಕಂಡುಬರುತ್ತಿವೆ. ಇದನ್ನು ಹೈಜಾಕ್‌ ಮಾಡಲು ಸಂಜೀವ ಮಠಂದೂರು ಅಥವಾ ಇತರ ಅಭ್ಯರ್ಥಿಗಳು ಪ್ರಯತ್ನಿಸದೇ ಇರುವುದು ವಿಪರ್ಯಾಸ ಎನ್ನುತ್ತಾರೆ ಅಶ್ರಫ್‌.

ಜಾಲತಾಣದ ಚರ್ಚೆ
ರಾಷ್ಟ್ರೀಯ ನಾಯಕರು ಕನ್ನಡದಲ್ಲಿ ಭಾಷಣ ಪ್ರಾರಂಭಿಸುವ ಬಗ್ಗೆಯೂ ವಾದ- ವಿವಾದ ಕೇಳಿಬಂತು. ಕನ್ನಡ ಗೊತ್ತಿಲ್ಲದೇ ಇರುವವರು ಮಾತನಾಡಲೇ ಬಾರದು.

ನರೇಂದ್ರ ಮೋದಿ ಮತ್ತು ರಾಹುಲ್‌ ಗಾಂಧಿ ಅವರು ಕನ್ನಡದಲ್ಲಿ ಮಾತನಾಡುವ ಅಗತ್ಯವೇ ಇಲ್ಲ. ರಾಹುಲ್‌ ಗಾಂಧಿ ಕನ್ನಡವನ್ನು ಸಂಪೂರ್ಣ ಜಜ್ಜಿ ಹಾಕಿದರು ಎಂದು ಒಬ್ಬರು ಹೇಳಿದರೆ, ನರೇಂದ್ರ ಮೋದಿಯವರೂ ಕಮ್ಮಿಯಿಲ್ಲ.
ಅಕ್ಷರ ಉಚ್ಚಾರಣೆಯಲ್ಲಿ ದೋಷವಿತ್ತು ಎಂದು ಇನ್ನೊಬ್ಬರು ಹೇಳಿದರು. ಇವೆರಡೂ ವಿಷಯಗಳು ಜಾಲತಾಣದಲ್ಲಿ ವೈರಲ್‌ ಆಗಿವೆ. ಆದರೆ ರಾಹುಲ್‌ ಗಾಂಧಿ ವೀಡಿಯೋವನ್ನು ಹೆಚ್ಚು ಜನರು ನೋಡಿದ್ದಾರೆ. ಇದಕ್ಕೆ ಕಾರಣ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಅಪ್‌ ಡೇಟ್‌ ಆಗಿರುವುದು ಎಂಬ ವಿಶ್ಲೇಷಣೆಯನ್ನು ಮಾಡಿದರು.

ಮಾರಾಟ ಇಲ್ಲ 
ಈ ವರ್ಷ ಅಕ್ರಮಗಳು ತುಂಬಾ ಕಡಿಮೆ. ಚುನಾವಣೆ ನಿಮಿತ್ತ ಅಧಿಕಾರಿಗಳು ಹೆಚ್ಚು ಅಲರ್ಟ್‌ ಆಗಿದ್ದಾರೆ. ಆದ್ದರಿಂದ ಮತ ಮಾರಾಟ ಆಗುವ ಸಂಭವ ತುಂಬಾ ಕಡಿಮೆ ಇರಬಹುದು. ಅಥವಾ ಆಗದೇ ಇರಲೂಬಹುದು.
-ಶಿವಪ್ರಸಾದ್‌ ಬಡಗನ್ನೂರು

ಹವಾ ಇಲ್ಲ 
ಆದರೆ ಎಲ್ಲಿಯೂ ಮುಕ್ತವಾಗಿ ಪ್ರಚಾರ ಕಾರ್ಯ ನಡೆಸುತ್ತಿಲ್ಲ ಎನ್ನುವುದು ತಿಳಿದು ಬರುತ್ತಿದೆ. ಕಾರವಾರ ಭಾಗಕ್ಕೆ ಹೋಗಿದ್ದೆ. ಎಲ್ಲ ಕಡೆಯೂ ಪಕ್ಷದ ಶಾಲು ಹಾಕಿಕೊಂಡ ಕಾರ್ಯಕರ್ತರು, ಮುಖಂಡರೇ ಕಾಣಿಸುತ್ತಿದ್ದರು. ಆದರೆ ಪುತ್ತೂರು ಗ್ರಾಮಾಂತರ ಭಾಗದಲ್ಲಿ ಅಷ್ಟು ದೊಡ್ಡ ಹವಾ ಖಂಡಿತಾ ಇಲ್ಲ.
-ಜಯಾ ಕನಕಮಜಲು

 ಗಣೇಶ ಕಲ್ಲರ್ಪೆ 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.