“ನಮ್ಮನ್ನೂ ಕಡಬ ತಾಲೂಕಿಗೆ ಸೇರಿಸಿಕೊಳ್ಳಿ’

ಬೆಳ್ತಂಗಡಿ, ಸುಳ್ಯ ಗ್ರಾಮಗಳ ಸಾರ್ವಜನಿಕರ ಮನವಿ

Team Udayavani, Apr 8, 2019, 3:21 PM IST

sudi-3
ಕಡಬ : ಕೊನೆಗೂ ಕಡಬ ತಾಲೂಕು ಉದ್ಘಾಟನೆಯಾಗಿದೆ. ಆದರೆ ನೂತನ ಕಡಬ ತಾಲೂಕಿಗೆ ತುಂಬಾ ಹತ್ತಿರ ಇರುವ ಬೆಳ್ತಂಗಡಿ ತಾಲೂಕಿನ 5 ಗ್ರಾಮಗಳು ಹಾಗೂ ಸುಳ್ಯ ತಾಲೂಕಿನ 4 ಗ್ರಾಮಗಳನ್ನು ಕಡಬ ತಾಲೂಕಿಗೆ ಸೇರ್ಪಡೆಗೊಳಿಸಬೇಕೆಂಬ ಬೇಡಿಕೆಗೆ ಮಾತ್ರ ಮನ್ನಣೆ ಸಿಕ್ಕಿಲ್ಲ. ನೂತನ ತಾಲೂಕಿಗಾಗಿ ಸಲ್ಲಿಸಲಾಗಿದ್ದ ಪ್ರಸ್ತಾವನೆಯಲ್ಲಿ ನಮ್ಮ ಗ್ರಾಮಗಳ ಹೆಸರಿದ್ದರೂ ತಾಲೂಕು ರಚನೆಯ ವೇಳೆ ಹೆಸರು ಗಳನ್ನು ಕೈಬಿಡಲಾಗಿದೆ ಎನ್ನುವ ಮುನಿಸು ಆ ಗ್ರಾಮಗಳ ಜನರದ್ದು.
ಕೈಬಿಟ್ಟ ಗ್ರಾಮಗಳು ಕಡಬ ತಾಲೂಕಿಗಾಗಿ ಹಲವು ದಶಕಗಳಿಂದಲೇ ಹೋರಾಟಗಳು ನಡೆದಿದ್ದವು. ಕಡಬದ ತಾಲೂಕಿನ ಪ್ರಸ್ತಾವನೆಯಲ್ಲಿ ಬೆಳ್ತಂಗಡಿ ತಾಲೂಕಿನ ಶಿಶಿಲ, ಕೊಕ್ಕಡ, ಶಿಬಾಜೆ, ರೆಖ್ಯಾ, ಹತ್ಯಡ್ಕ ಗ್ರಾಮಗಳು ಹಾಗೂ ಸುಳ್ಯ ತಾಲೂಕಿನ ಏನೆಕಲ್‌, ಸುಬ್ರಹ್ಮಣ್ಯ, ಐನೆಕಿದು, ಬಳ್ಪ, ಕೇನ್ಯ, ಎಣ್ಮೂರು, ಎಡಮಂಗಲ, ಐವತ್ತೂಕ್ಲು (ಪಂಜ), ಕೂತ್ಕುಂಜ, ಪಂಬೆ ತ್ತಾಡಿ ಮತ್ತು ಮುರುಳ್ಯ ಗ್ರಾಮಗಳನ್ನು ಸೇರ್ಪಡೆಗೊಳಿಸಲಾಗಿತ್ತು.
ತಾಲೂಕು ರಚನ ಸಮಿತಿಗಳೂ ಈ ಗ್ರಾಮಗಳನ್ನು ಸೇರ್ಪಡೆಗೊಳಿಸಿಯೇ ಸರಕಾರಕ್ಕೆ ವರದಿ ನೀಡಿದ್ದವು. ಆದರೆ
ಹೊಸ ತಾಲೂಕುಗಳ ಘೋಷಣೆ ಯಾದಾಗ ಬೆಳ್ತಂಗಡಿ ತಾಲೂಕಿನ ಗ್ರಾಮ ಗಳನ್ನು ಕೈಬಿಟ್ಟು, ಸುಳ್ಯ ತಾಲೂಕಿನ 7
ಗ್ರಾಮಗಳನ್ನು ಮಾತ್ರ ಸೇರಿಸಿಕೊಳ್ಳಲಾಗಿತ್ತು. ಸುಳ್ಯ ತಾಲೂಕಿನ ಐವತ್ತೂಕ್ಲು (ಪಂಜ), ಕೂತ್ಕುಂಜ, ಪಂಬೆತ್ತಾಡಿ ಮತ್ತು ಮುರುಳ್ಯ ಗ್ರಾಮಗಳನ್ನು ಕಡಬ ತಾಲೂಕಿನ ವ್ಯಾಪ್ತಿಯಿಂದ ಕೈಬಿಡಲಾಗಿತ್ತು.
ನೂತನ ತಾಲೂಕಿನ ವ್ಯಾಪ್ತಿಯಿಂದ ಕೈಬಿಡಲಾಗಿರುವ ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನ ಈ ಗ್ರಾಮಗಳು ಕಡಬ
ತಾಲೂಕು ಕೇಂದ್ರಕ್ಕೆ ಭೌಗೋಳಿಕವಾಗಿ ಬಹಳ ಹತ್ತಿರವಾಗಿದ್ದು, ಅಲ್ಲಿಯ ಜನರ ಅನುಕೂಲಕ್ಕಾಗಿ ಆ ಗ್ರಾಮಗಳನ್ನು ಕಡಬ ತಾಲೂಕಿಗೆ ಸೇರ್ಪಡೆಗೊಳಿಸಬೇಕು ಎನ್ನುವ ಬೇಡಿಕೆ ಸರಕಾರದ ಮಟ್ಟಕ್ಕೆ ತಲುಪಿದೆ. ಬೆಳ್ತಂಗಡಿ ತಾಲೂಕಿನ ಶಿಶಿಲ, ಕೊಕ್ಕಡ, ಶಿಬಾಜೆ, ರೆಖ್ಯಾ, ಹತ್ಯಡ್ಕ ಗ್ರಾಮಗಳು ಕಡಬ ತಾಲೂಕಿಗೆ ಸೇರ್ಪಡೆಯಾಗಬೇಕು ಎಂದು ಆಯಾ ಗ್ರಾ.ಪಂ.ಗಳು ನಿರ್ಣಯ ಕೈಗೊಂಡಿವೆ. ಸುಳ್ಯ ತಾಲೂಕಿನ ಐವತ್ತೂಕ್ಲು (ಪಂಜ), ಕೂತ್ಕುಂಜ, ಪಂಬೆತ್ತಾಡಿ ಮತ್ತು ಮುರುಳ್ಯ ಗ್ರಾಮಗಳಿಗೂ ಕಡಬ ತಾ| ಕೇಂದ್ರವಾದರೆ ಅನುಕೂಲವಾಗಲಿದೆ ಎಂದು ಅಲ್ಲಿನ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಜಿಲ್ಲಾಧಿಕಾರಿಗೆ ಸೂಚನೆ ಮುಖ್ಯಮಂತ್ರಿ, ಕಂದಾಯ ಸಚಿವರು, ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿ ಫಲವಾಗಿ
ರಾಜ್ಯದ ಅಧೀನ ಕಾರ್ಯದರ್ಶಿಯವರು ಸೂಕ್ತ ಕ್ರಮ ಕೈಗೊಳ್ಳುವಂತೆ, ಅಗತ್ಯವಿದ್ದಲ್ಲಿ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ ಎಂದು ಕಡಬ ತಾ| ಹೋರಾಟ ಸಮಿತಿಯ ಕಾರ್ಯದರ್ಶಿ ಸಯ್ಯದ್‌ ಮೀರಾ ಸಾಹೇಬ್‌ ತಿಳಿಸಿದ್ದಾರೆ.
ಸೇರಿಸಿದರೆ ಉತ್ತಮ ಪ್ರಸ್ತುತ ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಯಲ್ಲಿರುವ ಶಿಶಿಲ, ಕೊಕ್ಕಡ, ಶಿಬಾಜೆ, ರೆಖ್ಯಾ ಹಾಗೂ ಹತ್ಯಡ್ಕ ಗ್ರಾಮಗಳನ್ನು ಕಡಬ ತಾಲೂಕಿಗೆ ಸೇರಿಸಿದರೆ ಅಲ್ಲಿನ ಜನರಿಗೆ ಅನುಕೂವಾಗಲಿದೆ. ನಾವು ಕಂದಾಯ ಕಚೇರಿಯ ಕೆಲಸಗಳಿಗೆ ಮಾತ್ರ ಬೆಳ್ತಂಗಡಿಗೆ ಹೋಗಬೇಕಿದೆ. ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲ. ರಸ್ತೆಗಳ ಪರಿಸ್ಥಿತಿಯಂತೂ ಹೇಳುವುದೇ ಬೇಡ. ಉತ್ತಮ ರಸ್ತೆ ಮತ್ತು ಸೇತುವೆಗಳಿರುವ ಕಾರಣ ನಮಗೆ ಕಡಬವನ್ನು ತಲುಪುವುದು ಸುಲಭ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಗ್ರಾಮಗಳನ್ನು ಕಡಬ ತಾಲೂಕಿಗೆ ಸೇರ್ಪಡೆಗೊಳಿಸಿ ಎನ್ನುವುದು ನಮ್ಮ ಆಗ್ರಹ.
 -ಎ.ಸಿ. ಮ್ಯಾಥ್ಯೂ, ಮಾಜಿ ಅಧ್ಯಕ್ಷರು, ಶಿಬಾಜೆ ಗ್ರಾ.ಪಂ.
ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.