ವೆನ್ಲಾಕ್‌ಗೆ ಹೆಚ್ಚುವರಿ 300 ಹಾಸಿಗೆ ಸೌಲಭ್ಯ


Team Udayavani, Dec 7, 2017, 11:47 AM IST

7-Dec-7.jpg

ಮಹಾನಗರ: ರಾಜ್ಯದಲ್ಲೇ ಉತ್ತಮ ಜಿಲ್ಲಾಸ್ಪತ್ರೆಯೆಂದು ಹೆಸರು ಗಳಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ವೆನ್ಲಾಕ್‌ ಆಸ್ಪತ್ರೆ ತನ್ನ ಸೇವೆಯನ್ನು ವಿಸ್ತರಿಸಲು ಮುಂದಾಗಿದ್ದು, ಸುಮಾರು 25 ಕೋಟಿ ರೂ. ವೆಚ್ಚದಲ್ಲಿ 300 ಹಾಸಿಗೆ ಸಾಮರ್ಥ್ಯದ ಸೂಪರ್‌ ಸ್ಪೆಷಾಲಿಟಿ ವಿಭಾಗ ಮತ್ತು ಮೆಡಿಕಲ್‌ ಸೂಪರ್‌ ಸ್ಪೆಷಾಲಿಟಿ ವಿಭಾಗಗಳನ್ನು ಆರಂಭಿಸಲಿದೆ.

ವೆನ್ಲಕ್‌ ಆಸ್ಪತ್ರೆ ಮಕ್ಕಳ ವಿಭಾಗದ ಹಿಂಭಾಗದಲ್ಲಿ ಹೊಸ ಕಟ್ಟಡ ತಲೆ ಎತ್ತಲಿದ್ದು, ಸೂಪರ್‌ ಸ್ಪೆಷಾಲಿಟಿ ವಿಭಾಗ ನಿರ್ಮಾಣ ಹಂತದಲ್ಲಿದೆ. 176 ಹಾಸಿಗೆ ಸಾಮರ್ಥ್ಯದ ಸೂಪರ್‌ ಸ್ಪೆಷಾಲಿಟಿ ವಿಭಾಗದ ನೂತನ ಕಟ್ಟಡವನ್ನು 15.16 ಕೋ. ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಕಾಮಗಾರಿಗಾಗಿ ಆರೋಗ್ಯ ರಕ್ಷಾ ಸಮಿತಿಯ ಕ್ಲಿನಿಕಲ್‌ ವೆಚ್ಚದಿಂದ 5.10 ಕೋಟಿ ರೂ. ಗಳನ್ನು ಕೆಎಚ್‌ಎಸ್‌ಡಿಆರ್‌ಪಿಗೆ ಪಾವತಿಸಲಾಗಿದೆ. ಮೂರು ಅಂತಸ್ತಿನ ಕಟ್ಟಡದಲ್ಲಿ ಸೂಪರ್‌ ಸ್ಪೆಷಾಲಿಟಿ ವಿಭಾಗದ ಕೆಳ ಹಾಗೂ ಮೊದಲ ಅಂತಸ್ತಿನ ಕಾಮಗಾರಿ ಮುಗಿದಿದ್ದು, ಎರಡನೇ ಅಂತಸ್ತಿನ ಕಾಮಗಾರಿ ಪ್ರಗತಿಯಲ್ಲಿದೆ.

ಇದರೊಂದಿಗೆ ಮೆಡಿಕಲ್‌ ಸೂಪರ್‌ ಸ್ಪೆಷಾಲಿಟಿ ವಿಭಾಗವೂ ಕಾರ್ಯ ನಿರ್ವಹಿಸಲಿದ್ದು, ಇದು 124 ಹಾಸಿಗೆ ಸಾಮರ್ಥ್ಯ ಹೊಂದಿರುತ್ತದೆ. ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ಹೊಂದಿಕೊಂಡಂತೆ ಈ ವಿಭಾಗವನ್ನು ನಿರ್ಮಿಸಲಾಗುತ್ತಿದ್ದು, ಸರಕಾರದ 10 ಕೋಟಿ ರೂ. ಅನುದಾನದಲ್ಲಿ ಕಾಮಗಾರಿ ನಡೆಯಲಿದೆ. ಈ ವಿಭಾಗ ನಿರ್ಮಾಣಗೊಂಡ ಬಳಿಕ ಮೆಡಿಸಿನ್‌ಗೆ ಸಂಬಂಧಿಸಿದ ಎಲ್ಲ ತರಹದ ವಿಭಾಗದ ಸೇವೆಯು ಇಲ್ಲಿ ಲಭ್ಯವಾಗಲಿದೆ. ಎಂಡೋಸ್ಕೋಪಿ, ಕ್ಯಾತ್‌ಲ್ಯಾಬ್‌, ಇಂಟೆನ್ಸಿವ್‌ ಕೊರೊನರಿ ಕೇರ್‌ ಯೂನಿಟ್‌, ಇಂಟೆನ್ಸಿವ್‌ ಕೇರ್‌ ಯೂನಿಟ್‌, ಡಯಾಲಿಸಿಸ್‌ ರಿಕವರಿ ವಾರ್ಡ್‌ ಹಾಗೂ ಜನರಲ್‌ ವಾರ್ಡ್‌ಗಳು ಈ ವಿಭಾಗದಲ್ಲಿ ಕಾರ್ಯನಿರ್ವಹಿಸಲಿವೆ. 

ಹಳೆ ಲಾಂಡ್ರಿಗೆ ಹೊಸ ಕಾಯಕಲ್ಪ
ಬ್ರಿಟಿಷ್‌ ರಾಣಿ ವಿಕ್ಟೋರಿಯಾ ಕಾಲದಲ್ಲಿ ನಿರ್ಮಾಣವಾದ ಹಳೆ ಲಾಂಡ್ರಿ ಆಸ್ಪತ್ರೆ ಆವರಣದಲ್ಲಿದ್ದು, ಸಂಪೂರ್ಣ ಶಿಥಿಲಾವಸ್ಥೆಯಲ್ಲಿದೆ. ರೋಗಿ ಮತ್ತು ಸಂಬಂಧಿಕರ ಬಟ್ಟೆ ಒಗೆಯಲು ತೊಂದರೆಯಾಗುತ್ತಿದೆ. ಇದನ್ನು ಕೆಡವಿ ಹೊಸ ಲಾಂಡ್ರಿ ನಿರ್ಮಾಣ ಮಾಡುವ ಚಿಂತನೆಯಿದೆ. ರೀಜನಲ್‌ ಎಡ್ವಾನ್ಸ್‌ಡ್‌ ಪೀಡಿಯಾಟ್ರಿಕ್‌ ಕೇರ್‌ ಸೆಂಟರ್‌ನ್ನು (ಆರ್‌ ಎಪಿಸಿಸಿ) ಮಕ್ಕಳ ಆರೋಗ್ಯ ಸಂಸ್ಥೆಯಾಗಿ ಮೇಲ್ದರ್ಜೆಗೇರಿಸಲಾಗುತ್ತಿದ್ದು, ಇದಕ್ಕಾಗಿ 3 ಕೋ. ರೂ. ಬಿಡುಗಡೆಯಾಗಿದೆ. ಕಟ್ಟಡದ ಪೈಂಟಿಂಗ್‌, ಮರು ನವೀಕರಣ ಜತೆಗೆ 40 ಕೋಣೆಗಳ ವಿಶೇಷ ವಾರ್ಡ್‌ನ್ನು ನಿರ್ಮಿಸಲಾಗುತ್ತಿದೆ. ಈಗಿರುವ ಎನ್‌ಐ ಸಿಯು ವಿಭಾಗ ಸಂಕೀರ್ಣವಾಗಿದ್ದು, ಅದನ್ನು ವಿಸ್ತರಿಸುವ ಯೋಜನೆಯಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ| ರಾಜೇಶ್ವರಿ ದೇವಿ ‘ಉದಯವಾಣಿಯ ಸುದಿನ’ಕ್ಕೆ ತಿಳಿಸಿದ್ದಾರೆ.

170 ವರ್ಷ ಹಳೆಯ ಕಟ್ಟಡ
ವೆನ್ಲಾಕ್‌ಆಸ್ಪತ್ರೆಗೆ ರಾಜ್ಯದ ನಾನಾ ಭಾಗಗಳಿಂದ ರೋಗಿಗಳು ಬರುತ್ತಾರೆ. ಸರಕಾರಿ ಆಸ್ಪತ್ರೆಗಳ ಪೈಕಿ ಉತ್ತಮ ಆಸ್ಪತ್ರೆ ಎಂದೂ ಗುರುತಿಸಿ ಕೊಂಡಿದ್ದರೂ ಆಸ್ಪತ್ರೆ ಕಟ್ಟಡವು 170 ವರ್ಷ ಹಳೆಯದಾಗಿದ್ದು, ಶಿಥಿಲಾ ವಸ್ಥೆಯಲ್ಲಿದೆ. ಅದು ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಆತಂಕ ಸೃಷ್ಟಿಸುವಂತಿದೆ. ಅದರಲ್ಲೂ 2 ಬ್ಲಾಕ್‌ನ ಕಟ್ಟಡ ಸಂಪೂರ್ಣ ಹಾಳಾಗಿದೆ. ಈ ಹಿನ್ನೆಲೆ ಯಲ್ಲಿ ಶೀಘ್ರ ಕಟ್ಟಡದ ದುರಸ್ತಿ ನಡೆಸಲಾಗುವುದು. 1000 ಹಾಸಿಗೆ ಸಾಮರ್ಥ್ಯದ ಈ ಆಸ್ಪತ್ರೆಯನ್ನು ತಜ್ಞ ವೈದ್ಯರಿಂದ ಉನ್ನತ ಮಟ್ಟದ ಚಿಕಿತ್ಸೆ ಕೊಡಿಸುವ ತರ್ಶರಿ ಕೇರ್‌ (Tertiary Care) ರೀಜನಲ್‌ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಡಾ| ರಾಜೇಶ್ವರಿ ದೇವಿ ತಿಳಿಸಿದ್ದಾರೆ.

ಹಂತ-ಹಂತವಾಗಿ ಅಭಿವೃದ್ಧಿ
ವೆನ್ಲಾಕ್‌ ಅನ್ನು ಮಾದರಿ ಆಸ್ಪತ್ರೆಯಾಗಿ ರೂಪಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ನಡೆಯುತ್ತಿದೆ. ಸೂಪರ್‌ ಸ್ಪೆಷಾಲಿಟಿ ವಿಭಾಗ ನಿರ್ಮಾಣ ಹಂತದಲ್ಲಿದೆ. ಮೆಡಿಕಲ್‌ ಸೂಪರ್‌ ಸ್ಪೆಷಾಲಿಟಿ ವಿಭಾಗ ಸದ್ಯದಲ್ಲೇ ಸೇರ್ಪಡೆಗೊಳ್ಳಲಿದೆ. ಹಂತ ಹಂತವಾಗಿ ಎಲ್ಲ ಅಭಿವೃದ್ಧಿ ನಡೆಸಲಾಗುವುದು.
ಡಾ| ರಾಜೇಶ್ವರಿ ದೇವಿ, ವೈದ್ಯಕೀಯ
  ಅಧೀಕ್ಷಕಿ, ವೆನ್ಲಾಕ್‌ ಆಸ್ಪತ್ರೆ

ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.