ಹೆಚ್ಚುವರಿ ಸ್ವ್ಯಾಬ್‌ ಟೆಸ್ಟ್‌ ಖಾಸಗಿ ಮೆಡಿಕಲ್‌ ಕಾಲೇಜಿಗೆ ರವಾನೆ?


Team Udayavani, May 6, 2021, 4:00 AM IST

ಹೆಚ್ಚುವರಿ ಸ್ವ್ಯಾಬ್‌ ಟೆಸ್ಟ್‌ ಖಾಸಗಿ ಮೆಡಿಕಲ್‌ ಕಾಲೇಜಿಗೆ ರವಾನೆ?

ಮಹಾನಗರ: ಕೋವಿಡ್ ಪರೀಕ್ಷೆಯ ವರದಿ ಸದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಡವಾಗಿ ಸಿಗುತ್ತಿರುವ ಕಾರಣದಿಂದ, ಹೆಚ್ಚುವರಿ ಸ್ವ್ಯಾಬ್‌  ಟೆಸ್ಟ್‌ಗಳನ್ನು ಜಿಲ್ಲೆಯ ಖಾಸಗಿ ಮೆಡಿಕಲ್‌ ಕಾಲೇಜಿನಿಂದಲೇ ನಡೆಸಲು ಸರಕಾರ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.

ಖಾಸಗಿ ಮೆಡಿಕಲ್‌ ಕಾಲೇಜಿನಿಂದಲೇ ಟೆಸ್ಟ್‌ ರಿಪೋರ್ಟ್‌ ದೊರೆಯುವಂತೆ ಮಾಡಿದರೆ ರಿಪೋರ್ಟ್‌ ಬೇಗನೆ ದೊರೆಯಬಹುದು; ಹೀಗಾಗಿ, ಅವಕಾಶ ನೀಡುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಆರೋಗ್ಯ ಸಚಿವ ಡಾ| ಕೆ. ಸುಧಾಕರ್‌ ಅವರಿಗೆ ಪತ್ರ ಬರೆದಿದ್ದಾರೆ. ಇದು ಸಾಧ್ಯವಾದರೆ ಪರೀಕ್ಷಾ ಫಲಿತಾಂಶ 24 ಗಂಟೆಯೊಳಗೆ ದೊರೆಯುವ ಸಾಧ್ಯತೆಯಿದೆ.

ಸುಳ್ಯ-ಪುತ್ತೂರು ತಾಲೂಕುಗಳ ಸ್ವ್ಯಾಬ್‌ಗಳನ್ನು ಸುಳ್ಯ ಕೆವಿಜಿ ಮೆಡಿಕಲ್‌ ಕಾಲೇಜಿನ ಲ್ಯಾಬ್‌ನಲ್ಲಿ ಟೆಸ್ಟ್‌ ಮಾಡಲು, ಇತರ ತಾಲೂಕುಗಳ ಸ್ವ್ಯಾಬ್‌ಗಳನ್ನು ಇತರ ಖಾಸಗಿ ಮೆಡಿಕಲ್‌ ಕಾಲೇಜುಗಳಲ್ಲಿ ಟೆಸ್ಟ್‌ ಮಾಡಲು ಅವಕಾಶ ದೊರೆತರೆ ಒಂದು ದಿನಗಳೊ ಳಗೆ ಪರೀಕ್ಷಾ ವರದಿ ಪಡೆಯಲು ಸಾಧ್ಯವಾಗಲಿದೆ. ಇದಕ್ಕೆ ಬೇಕಾಗುವ ಖರ್ಚನ್ನು ಜಿಲ್ಲಾಡಳಿತದ ಕೋವಿಡ್‌ ಪರಿಹಾರ ನಿಧಿಯಿಂದ ಭರಿಸಲು ಅವಕಾಶ ನೀಡುವಂತೆ ಪತ್ರದಲ್ಲಿ ಕೋರಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಮತ್ತು ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಸ್ವ್ಯಾಬ್‌ ತೆಗೆಯಲಾಗುತ್ತದೆ. ಜಿಲ್ಲೆಯ 10 ಪ್ರಯೋಗಾಲಯದಲ್ಲಿ ಸ್ವ್ಯಾಬ್‌ ಪರೀಕ್ಷೆ ನಡೆಸಲಾಗುತ್ತದೆ. ಪ್ರತೀ ದಿನ ಸರಾಸರಿ ಸುಮಾರು 5ರಿಂದ 6 ಸಾವಿರ ಕೋವಿಡ್‌ ತಪಾಸಣೆ ನಡೆಸಲಾಗುತ್ತಿದೆ. ಕೆಲವು ದಿನಗಳಿಂದೀಚೆಗೆ ಕೋವಿಡ್ ತಪಾಸಣೆ ಚುರುಕಾಗಿದ್ದು, ಸರಕಾರಿ ವಲಯದಲ್ಲಿ ತಪಾಸಣೆ ವರದಿ ಬರಲು ಕೆಲವು ದಿನ ಬೇಕು. ಜಿಲ್ಲಾ ವೆನ್ಲಾಕ್‌ ಆಸ್ಪತ್ರೆಯಲ್ಲಿ ಒತ್ತಡದ ಪರಿಣಾಮ ಸ್ವ್ಯಾಬ್‌ ಅನ್ನು ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಸರಕಾರಿ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗುತ್ತಿದೆ.

ಕೋವಿಡ್ ವರದಿ ಸಿಗಲು 8 ದಿನ! :

ಕೋವಿಡ್ ನಿಯಂತ್ರಣಕ್ಕೆ ಶೀಘ್ರ ರೋಗ ಪತ್ತೆಯೇ ಅತ್ಯಂತ ಮುಖ್ಯ. ವರದಿ ವಿಳಂಬವಾದಷ್ಟು ರೋಗಿಗಳನ್ನು ಗುರುತಿಸಿ ಪ್ರತ್ಯೇಕಿಸುವುದು ಕಷ್ಟ. ಹೀಗಾಗಿ ಸೋಂಕು ವೃದ್ಧಿಗೂ ಕಾರಣವಾಗುತ್ತದೆ. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ 8 ವೈದ್ಯಕೀಯ ಕಾಲೇಜ, ವೆನ್ಲಾಕ್ ಆಸ್ಪತ್ರೆಯಲ್ಲಿ ಆರ್‌ಟಿ-ಪಿಸಿಆರ್‌ ಪರೀಕ್ಷೆ ನಡೆಯುತ್ತಿವೆ. ವೆನ್ಲಾಕ್‌ನಲ್ಲಿ ಪ್ರತೀದಿನ 2,500ಕ್ಕೂ ಅಧಿಕ ಪರೀಕ್ಷೆ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ತಲಾ 300ರಷ್ಟು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಸ್ವ್ಯಾಬ್ ಸಂಗ್ರಹ ಹೆಚ್ಚುತ್ತಿರುವ ಕಾರಣದಿಂದ ಪರೀಕ್ಷೆ ವರದಿ ದಿನದಿಂದ ದಿನಕ್ಕೆ ಬಾಕಿಯಾಗುತ್ತಿದೆ. ಆರ್‌ಟಿ-ಪಿಸಿಆರ್‌ ಪರೀಕ್ಷೆ ವರದಿ 24ರಿಂದ 48 ಗಂಟೆ ಅವಧಿಯಲ್ಲಿ ದೊರೆಯಬೇಕು. ಆದರೆ ಈಗ ವಾರ ಕಳೆದರೂ ವರದಿ ಸಿಗುತ್ತಿಲ್ಲ.

ವೆನ್ಲಾಕ್‌ನಲ್ಲಿ ಕಾರ್ಯಾರಂಭಿಸಿದ 3ನೇ ಹೆಚ್ಚುವರಿ ಪರೀಕ್ಷಾ ಯಂತ್ರ  :

ವೆನ್ಲಾಕ್‌ ಜಿಲ್ಲಾಸ್ಪತ್ರೆಯ ಪ್ರಯೋಗಾಲಯದಲ್ಲಿ ಕೋವಿಡ್ ಸ್ವ್ಯಾಬ್‌ ಟೆಸ್ಟ್‌ ಮಾಡಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಹೆಚ್ಚಿದ ಕಾರ್ಯದೊತ್ತಡದಿಂದಾಗಿ ಟೆಸ್ಟಿಂಗ್‌ ವ್ಯವಸ್ಥೆ ನಿಧಾನ ವಾಗುತ್ತಿತ್ತು. ಸ್ವ್ಯಾಬ್‌ ತೆಗೆದು 7-8 ದಿನಗಳಾದರು ವರದಿ ದೊರಕದೆ ವಿಳಂಬವಾಗುತ್ತಿತ್ತು ಎಂಬ ದೂರು ಕೇಳಿಬಂದಿತ್ತು. ಹೀಗಾಗಿ ಕೊರೊನಾ ಪರೀಕ್ಷೆಯ ಫಲಿತಾಂಶ ವಿಳಂಬವಿಲ್ಲದೇ ದೊರೆಯಬೇಕು ಎಂಬ ಉದ್ದೇಶದಿಂದ ಜಿಲ್ಲಾ ವೆನ್ಲಾಕ್‌ ಆಸ್ಪತ್ರೆಯಲ್ಲಿ 3ನೇ ಹೆಚ್ಚುವರಿ ಪರೀಕ್ಷಾ ಯಂತ್ರವನ್ನು ಬುಧವಾರ ಹೊಸದಾಗಿ ತರಿಸಲಾಗಿದೆ. ಹೀಗಾಗಿ ಮುಂದೆ ಪ್ರತೀದಿನಕ್ಕೆ 3500 ಸ್ವ್ಯಾಬ್‌ ಟೆಸ್ಟ್‌ ಮಾಡಿ 24 ಅಥವಾ 36 ಗಂಟೆಯೊಳಗೆ ವರದಿ ನೀಡಲು ಸಾಧ್ಯವಾಗಲಿದೆ.

ದ.ಕ. ಜಿಲ್ಲೆಯಲ್ಲಿ ಕೊರೊನಾ ಪರೀಕ್ಷೆಯ ಹೆಚ್ಚುವರಿ ಸ್ವ್ಯಾಬ್‌ಗಳ ವರದಿಯನ್ನು ಶೀಘ್ರ ನೀಡುವ ನಿಟ್ಟಿನಲ್ಲಿ ಖಾಸಗಿ ಮೆಡಿಕಲ್‌ ಕಾಲೇಜಿನಿಂದಲೇ ವರದಿ ನಡೆಸಲು ಅನುಮತಿ ಕೇಳಿ ಆರೋಗ್ಯ ಸಚಿವರನ್ನು ಕೋರಲಾಗಿದೆ. ಒಂದೆರಡು ದಿನದಲ್ಲಿ ಅನುಮತಿ ದೊರೆಯುವ ನಿರೀಕ್ಷೆಯಿದೆ. ಜತೆಗೆ ವೆನ್ಲಾಕ್‌ನಲ್ಲಿ 3ನೇ ಹೆಚ್ಚುವರಿ ಪರೀಕ್ಷಾ ಯಂತ್ರವು ಬುಧವಾರದಿಂದ ಕಾರ್ಯಾರಂಭಿಸಿದ್ದು, ವರದಿ ಬೇಗ ದೊರೆಯಲಿದೆ.  ಕೋಟ ಶ್ರೀನಿವಾಸ ಪೂಜಾರಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರು

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.