ಸಂವಿಧಾನದ ಸಮರ್ಪಕ ಅನುಷ್ಠಾನ ಅಗತ್ಯ

"ಸಂವಿಧಾನ ಸಂಭ್ರಮ' ವಿಚಾರ ಸಂಕಿರಣದಲ್ಲಿ ನಾರಾಯಣ ಸ್ವಾಮಿ

Team Udayavani, Nov 28, 2021, 5:49 AM IST

ಸಂವಿಧಾನದ ಸಮರ್ಪಕ ಅನುಷ್ಠಾನ ಅಗತ್ಯ

ಸುಬ್ರಹ್ಮಣ್ಯ: ಭಾರತದ ಸಂವಿಧಾನ ತನ್ನದೇ ಆದ ಪ್ರಾಮುಖ್ಯ ಹಾಗೂ ವೈಶಿಷ್ಟ್ಯಹೊಂದಿದೆ. ಆದರೆ ಅದರ ಆಶಯಗಳ ಅನುಷ್ಠಾನ ಸರಿಯಾಗಿ ಆಗುತ್ತಿಲ್ಲ. ಕೆಲವೊಂದು ಪ್ರಕರಣಗಳು 30 ವರ್ಷ ಕಳೆದರೂ ತೀರ್ಪು ಬರುತ್ತಿಲ್ಲ. ಅಂದರೆ ನಮ್ಮ ಸಂವಿಧಾನ ಇನ್ನಷ್ಟು ಸದೃಢವಾಗಿ ಅನುಷ್ಠಾನವಾಗಬೇಕಿದೆ ಎಂದು ಕೇಂದ್ರ ಸರಕಾರದ ಸಾಮಾಜಿಕ ಮತ್ತು ಸಶಕ್ತೀಕರಣ ಸಹಾಯಕ ಸಚಿವ ಎ. ನಾರಾಯಣ ಸ್ವಾಮಿ ಹೇಳಿದರು.

ಸಂವಿಧಾನ ದಿನಾಚರಣೆ ಪ್ರಯುಕ್ತ ಸುಬ್ರಹ್ಮಣ್ಯದಲ್ಲಿ ಶನಿವಾರ ನಡೆದ “ಸಂವಿಧಾನ ಸಂಭ್ರಮ’ ವಿಚಾರ ಸಂಕಿರಣದಲ್ಲಿ ಅವರು ಪ್ರಮುಖ ಭಾಷಣ ಮಾಡಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಎಷ್ಟೋ ಮಂದಿ ಬಲಿದಾನ ಮಾಡಿದ್ದಾರೆ. ಸ್ವಾತಂತ್ರ್ಯ ಯಾರೋ ಕೊಟ್ಟ ಭಿಕ್ಷೆ ಅಲ್ಲ. ಅದರದ್ದೇ ಆದ ಮಹತ್ವ, ಹಿನ್ನೆಲೆ ಇದೆ. ದೇಶದಲ್ಲಿ ಆರ್ಥಿಕ ಅಸಮಾನತೆ, ವರ್ಗ ಭೇದ ಕಿತ್ತೂಗೆಯಬೇಕು ಎಂಬುದು ಸಂವಿಧಾನದ ನಿಲುವಾಗಿತ್ತು. ಆದರೆ ಇಂದಿಗೂ ಅದರ ಅನುಷ್ಠಾನ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ ಎಂದರು.

ದೇಶಕ್ಕೆ ಯಾಕೆ ಸ್ವಾತಂತ್ರ್ಯ ಬೇಕಿತ್ತು ಎಂಬುದು ಪ್ರಶ್ನಾತೀತ. ಆದರೆ 1947ರಲ್ಲಿ ದೇಶ ಯಾಕೆ ಇಬ್ಭಾಗವಾಯಿತು. ಅಂಬೇಡ್ಕರ್‌ ಅವರನ್ನು ಸೋಲಿಸಲು ಕುತಂತ್ರ ಮಾಡಲಾಯಿತು; ಸಂವಿಧಾನ ಶಿಲ್ಪಿಯನ್ನು ಸಂಸತ್‌ ಪ್ರವೇಶಿಸದಂತೆ ಮಾಡಲಾಯಿತು. ಆದರೆ ಈ ಗಂಭೀರ ವಿಚಾರದ ಬಗ್ಗೆ ಸಾರ್ವಜನಿಕವಾಗಿ ಯಾವುದೇ ಚರ್ಚೆಗಳು ನಡೆಯಲಿಲ್ಲ ಎಂದು ವಿಷಾದಿಸಿದರು.

ಇದನ್ನೂ ಓದಿ:ಹೊಸ ರೂಪಾಂತರಿಯಿಂದ ಆತಂಕ :  ಹಲವು ದೇಶಗಳಲ್ಲಿ ಕಟ್ಟೆಚ್ಚರ, ವಿಮಾನಯಾನಕ್ಕೆ ನಿಷೇಧ

ವ್ಯವಸ್ಥೆಯನ್ನು ತಿಧ್ದೋಣ
ರಾಜ್ಯದಲ್ಲಿ ಮೀಸಲಾತಿ ಹೋರಾಟ ದಿಕ್ಕು ತಪ್ಪುತ್ತಿದೆ. ಜಾಗೃತ ಸಮಾಜ ಒಟ್ಟು ವ್ಯವಸ್ಥೆಯನ್ನು ತಿದ್ದುವ ದಿಕ್ಕಿನಲ್ಲಿ ಹೋರಾಟ ನಡೆಸಬೇಕು ಎಂದರು.

ಸಚಿವ ಎಸ್‌. ಅಂಗಾರ ಮಾತನಾಡಿ, ಸಂವಿಧಾನದ ವಿಚಾರಧಾರೆ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯಗತ್ಯ. ಇದರಿಂದ ಬದುಕಿ ಔನ್ನತ್ಯ ಸಾಧ್ಯ. ಸಂವಿಧಾನದ ಮೇಲೆ ಸರ್ವರೂ ನಂಬಿಕೆ ಇಟ್ಟು ಪಾಲನೆ ಮಾಡಬೇಕು ಎಂದರು.

ಸಂವಾದ
ಸಚಿವ ಎ. ನಾರಾಯಣ ಸ್ವಾಮಿ ಅವರು ಸಾರ್ವಜನಿಕರು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಮಾಧ್ಯಮಗಳು ಸಂವಿಧಾನದ ಜಾಗೃತಿಯನ್ನು ಹೇಗೆ ಮಾಡಬಹುದು ಎಂದು ವಿದ್ಯಾರ್ಥಿನಿ ಚುಂಚನಾ ಪ್ರಶ್ನಿಸಿದರು. ಸಚಿವರು ಉತ್ತರಿಸಿ, ಸಂವಿಧಾನದ ಬಗ್ಗೆ ಚರ್ಚೆ ಮತ್ತು ಸಂವಾದಗಳ ಮೂಲಕ ಜನತೆಯಲ್ಲಿ ಮತ್ತು ಯುವ ಜನತೆಯಲ್ಲಿ ಸಂವಿಧಾನದ ಜಾಗೃತಿ ಮೂಡಿಸಬಹುದು ಎಂದರು.

ಸಮ್ಮಾನ
ಎ. ನಾರಾಯಣ ಸ್ವಾಮಿ ಅವರನ್ನು ಸಚಿವ ಎಸ್‌. ಅಂಗಾರ ಸಮ್ಮಾನಿಸಿದರು. ಇದೇ ವೇಳೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೌಕರರಿಗೆ 6ನೇ ವೇತನ ಜಾರಿಯಾಗುವಂತೆ ಮಾಡಿದ ಸಚಿವ ಎಸ್‌. ಅಂಗಾರ ಅವರನ್ನು ದೇವಸ್ಥಾನದ ಸಿಬ್ಬಂದಿಯ ಪರವಾಗಿ ಸಚಿವ ಎ. ನಾರಾಯಣ ಸ್ವಾಮಿ ಸಮಾನಿಸಿದರು.

ಕುಕ್ಕೆ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾ.ನಿರ್ವಹಣಾಧಿಕಾರಿ ಡಾ| ನಿಂಗಯ್ಯ, ಜಿ.ಪಂ. ಮಾಜಿ ಸದಸ್ಯ ಹರೀಶ್‌ ಕಂಜಿಪಿಲಿ ವೇದಿಕೆಯಲ್ಲಿದ್ದರು.
ಯತೀಶ್‌ ಅರ್ವಾರ ಸ್ವಾಗತಿಸಿ, ಎಸ್‌ಎಸ್‌ಪಿಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ್‌ ನಾಯಕ್‌ ವಂದಿಸಿದರು. ಉಪನ್ಯಾಸಕರಾದ ಆರತಿ ಮತ್ತು ಕುಮಾರ್‌ ಕಾರ್ಯಕ್ರಮ ನಿರೂಪಿಸಿದರು.

 

ಟಾಪ್ ನ್ಯೂಸ್

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.