ಆಧಾರ್ ನೋಂದಣಿದಾರರ ದಾಖಲೆಗಳ ನವೀಕರಣ ಕಡ್ಡಾಯ
Team Udayavani, Dec 22, 2022, 6:10 AM IST
ಮಂಗಳೂರು : ಕಳೆದ 10 ವರ್ಷಗಳಿಗೂ ಹಿಂದೆ ವಿಶಿಷ್ಟ ಗುರುತಿನ ಸಂಖ್ಯೆ ಪಡೆದ ಆಧಾರ್ ನೋಂದಣಿದಾರರು ತಮ್ಮ ದಾಖಲೆಗಳ ನವೀಕರಣ ಮಾಡಿಸಿ ಕೊಳ್ಳಬೇಕು ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ವು ಸೂಚಿಸಿದೆ.
ಯುಐಡಿಎಐ ಆಧಾರ್ ಕಾರ್ಡ್ಗೆ ನೀಡಲಾದ ಪ್ರಮುಖ ದಾಖಲೆ ಗಳಾದ ನಿವಾಸದ ವಿಳಾಸ ದೃಢೀ ಕರಣ ಪತ್ರ, ವ್ಯಕ್ತಿಯ ಗುರುತಿನ ದಾಖಲೆಗಳ ಜತೆಗೆ ಇತರ ಪ್ರಮುಖ ಮಾಹಿತಿಗಳನ್ನು ಸದ್ಯದ ದಾಖಲೆಗಳಿಗೆ ಅನುಗುಣ ವಾಗಿ ತಿದ್ದುಪಡಿ ಮಾಡಿಕೊಳ್ಳಬೇಕು. ಎಲ್ಲ ಹಳೆಯ ಆಧಾರ್ ನೋಂದಣಿ ದಾರರು ತಮ್ಮ ದಾಖಲೆಗಳಲ್ಲಿನ ವಿವರಗಳು ಲೇಟೆಸ್ಟ್ ಆಗಿರುವಂತೆ ನಿಗಾ ವಹಿಸಬೇಕಿವೆ.
ಕಳೆದ 10 ವರ್ಷಗಳಿಂದ ಸರಕಾರಿ ಸೌಲಭ್ಯಗಳನ್ನು ಪಡೆಯುವಲ್ಲಿ ಆಧಾರ್ ಸಂಖ್ಯೆಯು ಪ್ರಮುಖ ಪಾತ್ರ ವಹಿಸುತ್ತಿದೆ. ಆಧಾರ್ ಸಂಖ್ಯೆಗೆ ಬ್ಯಾಂಕ್ ಖಾತೆಯ ಜೋಡಣೆ ಯೊಂದಿಗೆ ವಿವಿಧ ಯೋಜನೆ ಗಳ ಸಹಾಯಧನವು ನೇರ ವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಲು ಸುಲಭವಾಗಿ ಸಾಧ್ಯವಾಗುತ್ತಿದೆ.
10 ವರ್ಷಗಳ ಮುನ್ನ ಆಧಾರ್ ಪಡೆದವರು ಒಂದು ವೇಳೆ ಮಧ್ಯದಲ್ಲಿ ದಾಖಲೆಗಳ ನವೀಕರಣ ಅಥವಾ ಪೂರಕ ಮಾಹಿತಿಗಳ ಪರಿಷ್ಕರಣೆ ಮಾಡಿಸಿದ್ದಲ್ಲಿ ಪುನಃ ನವೀಕರಣ ಮಾಡುವ ಅಗತ್ಯವಿಲ್ಲ. ಒಂದು ಬಾರಿಯೂ ಕೂಡ ದಾಖಲೆ, ಮಾಹಿತಿ ತಿದ್ದುಪಡಿ ಮಾಡಿಸದವರು ಮಾತ್ರ ಶೀಘ್ರದಲ್ಲಿ ಸಮೀಪದ ಆಧಾರ್ ನೋಂದಣಿ ಕೇಂದ್ರಗಳಿಗೆ ಭೇಟಿ ನೀಡಬೇಕು. ದಾಖಲೆಗಳ ನವೀಕರಣದ ನಿಗದಿತ ಶುಲ್ಕವನ್ನು ಕೂಡ ಪಾವತಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು