ಅಡಿಗರ ಕಾವ್ಯಗಳ ಮರು ಓದು ಅವಶ್ಯ: ವಿವೇಕ ರೈ
Team Udayavani, Oct 5, 2017, 3:58 PM IST
ಬಂಟ್ವಾಳ: ಶತಮಾನದ ಸಾಹಿತಿ ಗೋಪಾಲಕೃಷ್ಣ ಅಡಿಗರ ಕಾವ್ಯಗಳ ಮರು ಓದು ಅಗತ್ಯ ಎಂದು ಹಂಪಿ ಕನ್ನಡ
ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ| ಬಿ.ಎ.ವಿವೇಕ ರೈ ಹೇಳಿದರು.ಬಿ.ಸಿ. ರೋಡ್ನ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಜರಗಿದ ಮೊಗೇರಿ ಗೋಪಾಲಕೃಷ್ಣ ಅಡಿಗ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಅಡಿಗರ ಬರಹ ಧ್ಯಾನಸ್ಥ ಮನಸ್ಸಿನಿಂದ ಮತ್ತು ಚಿಕಿತ್ಸಕ ಪ್ರಜ್ಞೆಯಿಂದ ಮೂಡಿದೆ. ಓದಿನಲ್ಲೂ ಹೊಸತನದ ಸಾಧ್ಯತೆಯನ್ನು ನೀಡಬಲ್ಲ ಸಾಮರ್ಥಯವಿದೆ. ಅವರ ಸಾಹಿತ್ಯವನ್ನು ಅಧ್ಯಯನಶೀಲರಾಗಿ ಓದುವುದೇ ಹೊಸ ತಲೆಮಾರು ನೀಡುವ ಗೌರವವಾಗುತ್ತದೆ ಎಂದು ಅವರು ಹೇಳಿದರು.
ಇದೇ ಸಂದರ್ಭ ಗೋಪಾಲಕೃಷ್ಣ ಅಡಿಗ ಅವರ ಸಂಬಂಧಿ, ಹಿರಿಯ ಪತ್ರಕರ್ತ ಜಯರಾಮ ಅಡಿಗ ಅವರನ್ನು ಗೌರವಿಸಲಾಯಿತು. ಅಡಿಗ ಜನ್ಮ ಶತಮಾನೋತ್ಸವ ಪ್ರಯುಕ್ತ ಏರ್ಪಡಿಸಲಾದ ಪ್ರಬಂಧ ಸ್ಪರ್ಧೆಯಲ್ಲಿ
ವಿಜೇತರಿಗೆ ಪ್ರಮಾಣಪತ್ರ ವಿತರಿಸಲಾಯಿತು.
ವಿಚಾರಗೋಷ್ಠಿಗಳಲ್ಲಿ ಎಸ್.ಆರ್. ವಿಜಯಶಂಕರ್ ಅಡಿಗರ ಕಾವ್ಯದ ಕುರಿತು ಹಾಗೂ ಡಾ| ವರದರಾಜ ಚಂದ್ರಗಿರಿ
ಅವರು ‘ಅಡಿಗರು ಮತ್ತು ಪ್ರಕೃತ ನಮ್ಮ ಸಾಹಿತ್ಯ ಧರ್ಮ’ ಕುರಿತು ವಿಚಾರ ಮಂಡಿಸಿದರು.
ಬಳಿಕ ಯಕ್ಷಗಾನ ತಾಳಮದ್ದಳೆ ‘ವಾಲಿಮೋಕ್ಷ’ ನಡೆಯಿತು. ಕಲಾವಿದರಾದ ಸಿರಿಬಾಗಿಲು ರಾಮಕೃಷ್ಣ ಮಯ್ಯ, ಸೀತಾರಾಮ ತೋಳ್ಪಡಿತ್ತಾಯ, ಜನಾರ್ದನ ತೋಳ್ಪಡಿತ್ತಾಯ, ಡಾ| ಎಂ.ಪ್ರಭಾಕರ ಜೋಷಿ, ಕೆ.ಮೋಹನ
ರಾವ್ ಮತ್ತು ಭಾಸ್ಕರ ರೈ ಕುಕ್ಕುವಳ್ಳಿ ಭಾಗವಹಿಸಿದರು. ಸಮಿತಿಯ ಉಪಾಧ್ಯಕ್ಷ ವಿಶ್ವನಾಥ ಬಂಟ್ವಾಳ ಕಲಾವಿದರನ್ನು
ಗೌರವಿಸಿದರು.
ಈ ಸಂದರ್ಭ ಸಮಿತಿಯ ಕೋಶಾಧಿಕಾರಿ ಬಿ.ತಮ್ಮಯ್ಯ, ಕಾರ್ಯದರ್ಶಿ ಡಾ| ಅಜಕ್ಕಳ ಗಿರೀಶ ಭಟ್ಟ ಮತ್ತಿತರರು
ಉಪಸ್ಥಿತರಿದ್ದರು.ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಡಾ| ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಸ್ವಾಗತಿಸಿ, ರೇಷ್ಮಾ ಜಿ. ಭಟ್ ವಂದಿಸಿದರು. ಡಾ| ಯೋಗೀಶ ಕೈರೋಡಿ ಕಾರ್ಯಕ್ರಮ ನಿರೂಪಿಸಿದರು.
ಅಭಿರುಚಿ ಜೋಡುಮಾರ್ಗ, ನಮ್ಮ ಬಂಟ್ವಾಳ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಬಂಟ್ವಾಳ ತಾಲೂಕು ಕನ್ನಡ
ಸಾಹಿತ್ಯ ಪರಿಷತ್ತು ಸಂಘಟನೆಯವರು ಕಾರ್ಯಕ್ರಮಕ್ಕೆ ಸಹಕರಿಸಿದರು.
ಸರಿಯಾದ ಕ್ರಮವಲ್ಲ
ಯಾವುದೇ ಸಾಹಿತ್ಯದ ಬಿಡಿ ಸಾಲನ್ನು ಗಮನಿಸಿ ಕವಿಯನ್ನು ಅಥವಾ ಆತನ ಕೃತಿಯನ್ನು ತೀರ್ಮಾನಿಸುವುದು ಸರಿಯಾದ ಕ್ರಮವಲ್ಲ. ಅಡಿಗರ ಒಟ್ಟು ಕಾವ್ಯ ಸಂಪುಟವನ್ನು ಮಹಾಕಾವ್ಯವೆಂದು ಪರಿಗಣಿಸಬಹುದು.
ಡಾ| ಕೆ. ಚಿನ್ನಪ್ಪ ಗೌಡ, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ
ವಿಶ್ರಾಂತ ಕುಲಪತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ