Adjustment ಅಶೋಕ್!: ವಿಪಕ್ಷ ನಾಯಕನ ಹೇಳಿಕೆ ವಿರುದ್ಧ ಬಜರಂಗದಳ ಆಕ್ರೋಶ
Team Udayavani, Feb 21, 2024, 5:09 PM IST
ಮಂಗಳೂರು: ಮಂಗಳೂರಿನ ಖಾಸಗಿ ಶಾಲೆಯ ಶಿಕ್ಷಕಿಯಿಂದ ಹಿಂದೂ ಧರ್ಮ ನಿಂದನೆ ,ಆ ಬಳಿಕ ಪ್ರತಿಭಟಿಸಿದ ಬಿಜೆಪಿ ಶಾಸಕರ ವಿರುದ್ಧ ಪ್ರಕರಣ ದಾಖಲಾದ ವಿಚಾರದ ಕುರಿತು ಸದನದಲ್ಲಿ ಕಾವೇರಿದ ಚರ್ಚೆಯ ವೇಳೆ ವಿಪಕ್ಷ ನಾಯಕ ಆರ್. ಅಶೋಕ್ ಅವರು ನೀಡಿದ ಹೇಳಿಕೆ ವಿರುದ್ಧ ಬಜರಂಗದಳ ಆಕ್ರೋಶ ಹೊರ ಹಾಕಿದೆ.
ಸದನದಲ್ಲಿ ಮಾತನಾಡುತ್ತಿದ್ದ ವೇಳೆ ಮಂಗಳೂರಿನ ಪಬ್ ದಾಳಿ ಸಂದರ್ಭದಲ್ಲಿ ಬಜರಂಗದಳದ ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಅಶೋಕ್ ಹೇಳಿಕೆ ನೀಡುವ ಮೂಲಕ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
”ನಾನು ಗೃಹ ಸಚಿವನಾಗಿದ್ದ ವೇಳೆ ನನ್ನ ಮೇಲೂ ಒತ್ತಡವಿತ್ತು, ನಾನು ಹಿಂದೆ ಮುಂದೆ ನೋಡಲಿಲ್ಲ. ಅವರೆಲ್ಲರ ಮೇಲೆ ಗೂಂಡಾ ಕಾಯ್ದೆ ಹಾಕಿದೆ. ಆ ತರ ನೀವು ನಿಲುವು ತೆಗೆದುಕೊಳ್ಳಬೇಕು” ಎಂದು ವಿಧಾನಸಭೆಯಲ್ಲಿ ಸರಕಾರಕ್ಕೆ ಆರ್. ಅಶೋಕ್ ಮಾರ್ಗದರ್ಶನ ನೀಡಿದ್ದರು. ಆ ಕುರಿತು ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಬಜರಂಗದಳ ಮುಖಂಡ ಪುನೀತ್ ಅತ್ತಾವರ ಫೇಸ್ ಬುಕ್ ಪೋಸ್ಟ್ ಮಾಡಿದ್ದು,ನೀವು ”ಅಡ್ಜಸ್ಟ್ ಮೆಂಟ್ ಅಶೋಕ್” ಎಂದು ಹೆಸರು ಬದಲಾಯಿಸಿ ಎಂದು ಆಕ್ರೋಶ ಹೊರ ಹಾಕಿ ದ್ದಾರೆ. ಸಂಘಪರಿವಾರದ ಹಲವು ಕಾರ್ಯಕರ್ತರು ಕೂಡ ಆಕ್ರೋಶ ಹೊರ ಹಾಕಿದ್ದಾರೆ.
2009 ಜನವರಿ 24ರಂದು, ಶ್ರೀರಾಮಸೇನೆ ಕಾರ್ಯಕರ್ತರು ಮಂಗಳೂರಿನ ಪಬ್ನಲ್ಲಿ ಯುವಕ ಯುವತಿಯರ ಗುಂಪಿನ ಮೇಲೆ ದಾಳಿ ನಡೆಸಿ ಹಲ್ಲೆ ನಡೆಸಿದ್ದ ವಿಚಾರ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ