ಸಂಸ್ಕಾರ ಅಳವಡಿಸಿಕೊಳ್ಳಿ: ಜಯಂತ


Team Udayavani, Nov 24, 2017, 2:36 PM IST

24-Nov-11.jpg

ಪುತ್ತೂರು: ಸಂಸ್ಕಾರ ಎಂದು ಬಾಯಲ್ಲಿ ಹೇಳಿದರೆ ಸಾಲದು, ಅದನ್ನು ಧಾರ್ಮಿಕ ನೆಲೆಗಟ್ಟಿನಲ್ಲಿ ಅಳವಡಿಸಿಕೊಳ್ಳಬೇಕಾದ್ದು ಮುಖ್ಯ ಎಂದು ರೋಟರಿ ಕ್ಲಬ್‌ ಪುತ್ತೂರು ಪೂರ್ವ ಅಧ್ಯಕ್ಷ ಜಯಂತ ನಡುಬೈಲು ಹೇಳಿದರು.

ಗುರುವಾರ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ-ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವದ ಅಂಗವಾಗಿ ಏರ್ಪಡಿಸಿದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ನೂತನ ಸಭಾ ವೇದಿಕೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜ ಸೇವೆಯಲ್ಲಿ ದೇವರನ್ನು ಕಾಣುವ ಮೂಲಕ ದೇವಸ್ಥಾನಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕು. ಜಗತ್ತಿನಲ್ಲಿ ಮನುಷ್ಯನದ್ದು ಏನೂ ಇಲ್ಲ. ದೈವ-ದೇವರುಗಳಲ್ಲಿ ನಾವು ಇಡುವ ಭಕ್ತಿಯ ಮೂಲಕ ದೇವರು ಕೊಡುಗೆ ನೀಡುವ ಶಕ್ತಿಯನ್ನು ನೀಡಿದ್ದಾನೆ. ಇದನ್ನು ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಪೂಜಾರಿ ಬಲ್ನಾಡು ಅವರು ಮಾಡುವ ಮೂಲಕ ಅಲ್ಪ ಸಮಯದಲ್ಲೇ ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿದ್ದಾರೆ ಎಂದು ಹೇಳಿದರು.

ಇನ್ನೋರ್ವ ಮುಖ್ಯ ಅತಿಥಿ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ದೇವಸ್ಥಾನದ ಸಮಿತಿ ಪ್ರಾಮಾಣಿಕ ಪ್ರಯತ್ನ ಮಾಡಿದೆ. ದೇವರ ಮಹಿಮೆ ಇದ್ದಲ್ಲಿ ಮನುಷ್ಯನ ಪ್ರಯತ್ನ ಇದೆ ಎಂಬುದಕ್ಕೆ ಇಲ್ಲಿ ನಡೆದಿರುವ ಅಭಿವೃದ್ಧಿ ಸಾಕ್ಷಿ ಎಂದು ಹೇಳಿದರು.

ಹಾಸುಕಲ್ಲು ಮೇಲ್ಛಾವಣಿ ಉದ್ಘಾಟನೆ
ಹಾಸುಕಲ್ಲು ಹಾಗೂ ಮೇಲ್ಛಾವಣಿಯನ್ನು ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯ ಜಗನ್ನಿವಾಸ ರಾವ್‌ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ನಗರಸಭಾ ಅಧ್ಯಕ್ಷೆ ಜಯಂತಿ ಬಲ್ನಾಡು, ಸದಸ್ಯ ಬಾಲಚಂದ್ರ, ಉದ್ಯಮ ನಾಗೇಶ ರಾವ್‌ ಅತ್ತಾಳ, ಕ್ಯಾಂಪ್ಕೋ ಸಂಸ್ಥೆಯ ಎಜಿಎಂ ಕರುಣಾಕರ ಶೆಟ್ಟಿಗಾರ್‌ ಪಾಲ್ಗೊಂಡು ಶುಭ ಹಾರೈಸಿದರು.

ಸಹಾಯಕ ಅಚಕ ಸುಬ್ರಾಯ ಅಂಗಿತ್ತಾಯ, ವಿವಿಧ ಸೇವೆ ಸಲ್ಲಿಸಿದ ಮೋನಪ್ಪ ಗೌಡ, ಚಂದ್ರಶೇಖರ ಗೌಡ, ಕೇಶವ ಪೈ ಅವರನ್ನು, ಕ್ಷೇತ್ರದ ಅಭಿವೃದ್ಧಿಗೆ ಧನ ಸಹಾಯ ನೀಡಿದವರನ್ನು ಗೌರವಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಪೂಜಾರಿ ಬೆದ್ರಾಳ ಸ್ವಾಗತಿಸಿದರು. ಶಶಿಧರ ಕಿನ್ನಿಮಜಲು ವಂದಿಸಿದರು. ಸಮಿತಿ ಸದಸ್ಯರಾದ ಪ್ರಧಾನ ಅರ್ಚಕ ಕೆ. ವೆಂಕಟೇಶ, ಉದಯ ಕುಮಾರ ಕೆ.ಕೆ., ನಾರಾಯಣ ನಾಯ್ಕ, ಪಿ. ಚಂದ್ರಪ್ರಭಾ ಸತೀಶ್‌, ಆಶಾಲತಾ, ಮಹೇಶ್‌ ಬಿ., ಸೂರಪ್ಪ ಗೌಡ ಬಿ., ಬಾಲಕೃಷ್ಣ ಪೂಜಾರಿ ಕೋಲಾಡಿ ಅತಿಥಿಗಳನ್ನು ಗೌರವಿಸಿದರು.

ದೇವರ ನಾಡು
ಮುಖ್ಯ ಅತಿಥಿ ಕ್ಯಾಂಪ್ಕೋ ಮಾಜಿ ನಿರ್ದೇಶಕ ಸಂಜೀವ ಮಠಂದೂರು ಮಾತನಾಡಿ, ನಾಗಾರಾಧನೆ, ಭೂತಾರಾಧನೆ, ಗುರುವಿನ ಆರಾಧನೆ ಮೂಲಕ ದಕ್ಷಿಣ ಕನ್ನಡ ದೇವರ ನಾಡು ಎಂದೆನಿದೆ. ಇದಕ್ಕೆ ಈ ಜಿಲ್ಲೆಯ ಜನರು ಇಟ್ಟ ನಂಬಿಕೆ, ಭಕ್ತಿಯಿಂದ ಆರಾಧನೆಯಲ್ಲಿ ಪರಂಪರೆ ಬೆಳೆಸಿರುವುದೇ ಕಾರಣ. ಮುಂದೆ ಈ ಕ್ಷೇತ್ರ ಇನ್ನಷ್ಟು ಅಭಿವೃದ್ಧಿ ಕಾಣಲಿ ಎಂದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.