2 ದಶಕದ ಬಳಿಕ ಕರ್ನಾಟಕದ ವಿದ್ಯಾರ್ಥಿ ಐಎಂಒಗೆ ಆಯ್ಕೆ


Team Udayavani, May 23, 2017, 1:04 PM IST

imo.jpg

ಮಂಗಳೂರು: ಬ್ರೆಝಿಲ್‌ನ ರಿಯೊ ಡಿ ಜನೈರೋದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮ್ಯಾತಮೆಟಿಕ್ಸ್‌ ಒಲಿಂಪಿಯಾಡ್‌ (ಐಎಂಒ)-2017ಗೆ 21 ವರ್ಷಗಳ ಬಳಿಕ ಮೊದಲ ಬಾರಿಗೆ ರಾಜ್ಯದಿಂದ ಮಂಗಳೂರಿನ ಸೆಂಟರ್‌ ಫಾರ್‌ ಅಡ್ವಾನ್ಸ್‌ಡ್‌ ಲರ್ನಿಂಗ್‌(ಸಿಎಫ್‌ಎಎಲ್‌) ನಲ್ಲಿ ತರಬೇತಿ ಪಡೆದ ಆದಿತ್ಯ ಪ್ರಕಾಶ್‌ ಆಯ್ಕೆಯಾಗಿದ್ದಾರೆ. ದೇಶದಿಂದ ಒಟ್ಟು 6 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಆ ಪಟ್ಟಿಯಲ್ಲಿ ದ.ಕ. ಜಿಲ್ಲೆಯ ವಿದ್ಯಾರ್ಥಿಯೂ ಇದ್ದಾರೆ.

100 ದೇಶ – 400 ಸ್ಪರ್ಧಿಗಳು
ಈ ಕುರಿತು ನಗರದ ಸಿಎಫ್‌ಎಎಲ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಸಂಸ್ಥೆಯ ಪ್ರೋಗ್ರಾಮ್‌ ಕೊ-ಆರ್ಡಿನೇಟರ್‌ ಸೆವ್ರಿನ್‌ ರೊಸಾರಿಯೊ ಮಾತನಾಡಿ, ಗಣಿತಕ್ಕೆ ಸಂಬಂಧಪಟ್ಟಂತೆ ಜಾಗತಿಕವಾಗಿ ನಡೆಯುವ ಈ ಸ್ಪರ್ಧೆಯಲ್ಲಿ ಸುಮಾರು 100 ದೇಶಗಳಿಂದ 400 ವಿದ್ಯಾರ್ಥಿಗಳು ಭಾಗವಹಿಸುತ್ತಾರೆ. ಜುಲೈ 17ರಿಂದ 23ರ ವರೆಗೆ ಈ ಸ್ಪರ್ಧೆ ನಡೆಯಲಿದೆ ಎಂದರು.

ಸ್ಪರ್ಧೆಯ ಆಯ್ಕೆಯ ಕುರಿತಂತೆ ಪ್ರಥಮ ಹಂತವಾಗಿ ಸುಮಾರು 50,000 ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಆಯ್ಕೆಯಾದ ಸುಮಾರು 900 ವಿದ್ಯಾರ್ಥಿಗಳನ್ನು 2ನೇ ಹಂತಕ್ಕೆ ಆಯ್ಕೆ ಮಾಡಲಾಗಿತ್ತು. 3ನೇ ಹಂತದಲ್ಲಿ 35ರಿಂದ 50 ವಿದ್ಯಾರ್ಥಿಗಳನ್ನು ಹೋಮಿ ಭಾಭಾ ಸೆಂಟರ್‌ ಫಾರ್‌ ಸೈನ್ಸ್‌ ಎಜುಕೇಶನ್‌ ಆಯ್ಕೆ ಮಾಡಿದ್ದು, ಅದರಲ್ಲಿ 6 ಮಂದಿಯನ್ನು ಐಎಂಒಗೆ ಆಯ್ಕೆ ಮಾಡಲಾಗಿದೆ ಎಂದರು.

ಚಿನ್ನ ಗೆಲ್ಲುವ ವಿಶ್ವಾಸ
ಸಿಎಫ್‌ಎಎಲ್‌ನ ಗಣಿತ ಪ್ರಾಧ್ಯಾಪಕ ಡಾ| ಶ್ರೀಕಾಂತ್‌ ಪೈ ಮಾತನಾಡಿ, ಐಎಂಒಗೆ ಆಯ್ಕೆಯಾಗಿರುವ ಆದಿತ್ಯ ಅವರು ಸದಾ ಭಿನ್ನವಾಗಿ ಯೋಚಿಸುವ ವಿದ್ಯಾರ್ಥಿ. ಅವರು ಗಣಿತದ ಯಾವುದೇ ಸಮಸ್ಯೆಯನ್ನು ತತ್‌ಕ್ಷಣದಲ್ಲಿ ಪರಿಹರಿಸುತ್ತಾರೆ. ಈ ಬಾರಿ ಆದಿತ್ಯ ಪ್ರಕಾಶ್‌ ಚಿನ್ನ ಗೆಲ್ಲುವ ಪೂರ್ಣ ವಿಶ್ವಾಸವಿದೆ. 21 ವರ್ಷಗಳ ಹಿಂದೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಅಜಯ್‌ ರಾಮದಾಸ್‌ ಅವರು ಚಿನ್ನದ ಪದಕ ಗೆದ್ದಿದ್ದು, ಪ್ರಸ್ತುತ ಅವರು ವಿಶ್ವದ ಪ್ರತಿಷ್ಠಿತ ವಿವಿಯೊಂದರಲ್ಲಿ ಪ್ರಾಧ್ಯಾಪಕರಾಗಿ ದುಡಿಯುತ್ತಿದ್ದಾರೆ. ಜಗತ್ತಿನಲ್ಲಿ ಪ್ರಸ್ತುತ ಇರುವ ಪ್ರತಿಷ್ಠಿತ ಗಣಿತ ತಜ್ಞರೆಲ್ಲರೂ ಕೂಡ ಐಎಂಒಗೆ ಆಯ್ಕೆಯಾದವರು ಎಂಬುದು ವಿಶೇಷವಾಗಿದೆ.

ಚೆನ್ನೈಯಲ್ಲಿ  ವ್ಯಾಸಂಗ
ಚೀನ ದೇಶವು ಈ ಸ್ಪರ್ಧೆಯಲ್ಲಿ ಪ್ರತಿ ಬಾರಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಇದರಲ್ಲಿ ಭಾರತಕ್ಕೆ 2012ರ ಬಳಿಕ ಯಾವುದೇ ಚಿನ್ನದ ಪದಕ ಬಂದಿಲ್ಲ. ಸ್ಪರ್ಧೆಗೆ ಆಯ್ಕೆಯಾಗುವ 3ನೇ ಹಂತದ ಐಎಂಒ ಟ್ರೈನಿಂಗ್‌ ಕ್ಯಾಂಪ್‌ನಲ್ಲಿ ಭಾಗವಹಿಸುವ 30 ವಿದ್ಯಾರ್ಥಿಗಳಿಗೆ ಚೆನ್ನೈ ಮ್ಯಾತಮೆಟಿಕಲ್‌ ಇನ್‌ಸ್ಟಿಟ್ಯೂಟ್‌ನಲ್ಲಿ ವಿದ್ಯಾರ್ಥಿ ವೇತನದೊಂದಿಗೆ ಉಚಿತ ಶಿಕ್ಷಣ ಲಭ್ಯವಾಗುತ್ತದೆ. ಆದಿತ್ಯ ಪ್ರಕಾಶ್‌ ಅವರು ಮುಂದಿನ ಶೈಕ್ಷಣಿಕ ವರ್ಷದಲ್ಲಿ ತಮ್ಮ ದ್ವಿತೀಯ ಪಿಯುಸಿ ಶಿಕ್ಷಣ ಮುಗಿಸಿ ಬಳಿಕ ಚೆನ್ನೈಯಲ್ಲಿ ವ್ಯಾಸಂಗಕ್ಕೆ ಅವಕಾಶ ಪಡೆಯಲಿದ್ದಾರೆ.

ಆದಿತ್ಯ ಪ್ರಕಾಶ್‌ ತನ್ನದೇ ಆಸಕ್ತಿಯಿಂದ ಸಿಎಫ್‌ಎಎಲ್‌ ಕೋಚಿಂಗ್‌ ಸೆಂಟರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಪ್ರಸ್ತುತ ಜಪಾನ್‌ನಲ್ಲಿ ನಡೆಯುತ್ತಿರುವ ಫಕುರಾ ತರಬೇತಿಯಲ್ಲಿ ಭಾಗವಹಿಸಿದ್ದು, ಐಎಂಒಗೆ ಆಯ್ಕೆಯಾಗಿರುವ ಕ್ರೆಡಿಟ್‌ ಸಿಎಫ್‌ಎಎಲ್‌ ಸಲ್ಲಬೇಕು ಎಂದು ಆದಿತ್ಯ ಪ್ರಕಾಶ್‌ ತಂದೆ, ಕಾರ್ಪೊರೇಶನ್‌ ಬ್ಯಾಂಕಿನ ಅಧಿಕಾರಿ ಓಂಪ್ರಕಾಶ್‌ ಬನ್ವಾìಲ್‌ ಸಂತಸ ವ್ಯಕ್ತಪಡಿಸಿದರು. 

ಪತ್ರಿಕಾಗೋಷ್ಠಿಯಲ್ಲಿ ಸಿಎಫ್‌ಎಎಲ್‌ನ ಪ್ರೋಗ್ರಾಮ್‌ ಕೊ-ಆರ್ಡಿನೇಟರ್‌ ವಿಜಯ್‌ ಮೊರಾಸ್‌, ಪ್ರಾಧ್ಯಾಪಕ ಪ್ರೊ| ಪಿ.ಎನ್‌. ಸುಬ್ರಹ್ಮಣ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.