ಸವಾಲಿನ ನಡುವೆಯೂ ಬಿಸಿಯೂಟ ಸಾಂಗ


Team Udayavani, Oct 22, 2021, 6:27 AM IST

ಸವಾಲಿನ ನಡುವೆಯೂ ಬಿಸಿಯೂಟ ಸಾಂಗ

ಮಂಗಳೂರು/ಉಡುಪಿ: ಕೊರೊನಾ ಕಾರಣದಿಂದ ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಶಾಲಾ ಮಕ್ಕಳ ಬಿಸಿಯೂಟ ಕಾರ್ಯಕ್ರಮ ಗುರುವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಆರಂಭವಾಗಿದೆ. 6ರಿಂದ 10ನೇ ತರಗತಿ ವರೆಗಿನ ಮಕ್ಕಳಿಗೆ ಮೊದಲ ದಿನದ ಮಧ್ಯಾಹ್ನದ ಬಿಸಿಯೂಟ ವಿತರಿಸಲಾಗಿದೆ.

ಈ ಬಾರಿ ಅಕ್ಕಿಯನ್ನು ಆಹಾರ ನಿಗಮದಿಂದ ನೀಡಲಾಗಿದ್ದು, ಉಳಿದ ಆಹಾರ ಧಾನ್ಯ, ಅಡುಗೆ ಅನಿಲ ಸೇರಿದಂತೆ ಇತರ ಪರಿಕರಗಳನ್ನು ಶಾಲೆಯವರೇ ತಾತ್ಕಾಲಿಕವಾಗಿ ಒಗ್ಗೂಡಿಸಿಕೊಳ್ಳಬೇಕಿತ್ತು.

ಶಿಕ್ಷಕರ ಕೊರತೆ, ಅನುದಾನದ ಸಮಸ್ಯೆ ಹಿನ್ನೆಲೆಯಲ್ಲಿ ಇದು ಶಿಕ್ಷಕರಿಗೆ ಸವಾಲಿನ ವಿಷಯವಾಗಿತ್ತು. ವಿಷಯ ಅರಿತ ಬಹುತೇಕ ಶಾಲೆಗಳ ಶಾಲಾಭಿವೃದ್ಧಿ ಸಮಿತಿ, ಸಂಘ-ಸಂಸ್ಥೆಯವರು, ದಾನಿಗಳು ಶಿಕ್ಷಕರ ಜತೆಗೆ ಸ್ಪಂದಿಸಿ ಬಿಸಿಯೂಟ ಯೋಜನೆ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ದೊರೆಯುವಲ್ಲಿ ಶ್ರಮಿಸಿರುವುದು ವಿಶೇಷವಾಗಿತ್ತು.

1ರಿಂದ 5ನೇ ತರಗತಿ ಮಕ್ಕಳಿಗೆ ಒಂದು ಮಗುವಿಗೆ ತಲಾ 4.97 ರೂ. ಹಾಗೂ 6ರಿಂದ 10ನೇ ತರಗತಿಯ ಒಂದು ವಿದ್ಯಾರ್ಥಿಗೆ 7.45 ರೂ. ಅಡುಗೆ ತಯಾರಿಕಾ ವೆಚ್ಚ ನಿಗದಿಪಡಿಸಲಾಗಿದೆ. ಒಟ್ಟು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ತರಕಾರಿ ಎಣ್ಣೆ, ಉಪ್ಪು, ಅಡುಗೆ ಅನಿಲ, ಸಾಂಬಾರ್‌ ಪುಡಿಯನ್ನು ಶಾಲೆಯವರೇ ಖರೀದಿಸಬೇಕಾಗಿದೆ.

ದ.ಕ.: 68,944 ಮಕ್ಕಳಿಗೆ ಊಟ :

ಶಿಕ್ಷಣ ಇಲಾಖೆಯ ಮೂಲಗಳ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ 1,140 ಶಾಲೆಗಳ 68,944 ವಿದ್ಯಾರ್ಥಿಗಳು ಮೊದಲ ದಿನ ಬಿಸಿಯೂಟ ಸವಿದಿದ್ದಾರೆ. ಶಾಲೆಗಳಲ್ಲೇ ಬಿಸಿಯೂಟ ತಯಾರಿಸಿ ನೀಡಿರುವುದನ್ನು ಹೊರತುಪಡಿಸಿ, ಇಸ್ಕಾನ್‌ ಸಂಸ್ಥೆಯಿಂದ 133 ಶಾಲೆಗಳಿಗೆ ಹಾಗೂ ಸುಬ್ರಹ್ಮಣ್ಯ ದೇವಸ್ಥಾನದಿಂದ ಸ್ಥಳೀಯ ಶಾಲೆಗಳಿಗೆ ಬಿಸಿಯೂಟ ಪೂರೈಸಲಾಗಿದೆ. ಬಂಟ್ವಾಳ ತಾಲೂಕಿನಲ್ಲಿ 18,514, ಬೆಳ್ತಂಗಡಿಯಲ್ಲಿ 19,056, ಮಂಗಳೂರು 23,179, ಪುತ್ತೂರು 12,296 ಮತ್ತು ಸುಳ್ಯದಲ್ಲಿ 4,899 ವಿದ್ಯಾರ್ಥಿಗಳು ಬಿಸಿಯೂಟ ಸೇವಿಸಿದ್ದಾರೆ.

ಉಡುಪಿ: 32,841 ಮಕ್ಕಳಿಗೆ ಊಟ :

ಉಡುಪಿ ಜಿಲ್ಲೆಯ ಒಟ್ಟು 32,841 ವಿದ್ಯಾರ್ಥಿಗಳಿಗೆ ಗುರುವಾರ ಬಿಸಿಯೂಟ ಉಣ ಬಡಿಸಲಾಯಿತು. ಉಡುಪಿ ವಲಯದ 93 ಹಿ.ಪ್ರಾ. ಹಾಗೂ 47 ಪ್ರೌಢಶಾಲೆಗಳಲ್ಲಿ ಒಟ್ಟು 9,505 ವಿದ್ಯಾರ್ಥಿಗಳು, ಕಾರ್ಕಳ ವಲಯದಲ್ಲಿ 110 ಹಿ.ಪ್ರಾ. ಶಾಲೆ ಹಾಗೂ 38 ಪ್ರೌಢಶಾಲೆಯಲ್ಲಿ ಒಟ್ಟು 6,737 ವಿದ್ಯಾರ್ಥಿಗಳು, ಕುಂದಾಪುರ ಹಾಗೂ ಬೈಂದೂರಿನಲ್ಲಿ ಒಟ್ಟು 244 ಪ್ರೌಢ ಹಾಗೂ ಹಿ.ಪ್ರಾ. ಶಾಲೆಯಲ್ಲಿ 16,599 ವಿದ್ಯಾರ್ಥಿಗಳು ಬಿಸಿಯೂಟ ಉಂಡಿದ್ದಾರೆ.

3 ತಿಂಗಳಿಂದ  ಗೌರವಧನ ಬಂದಿಲ್ಲ :

ಕಳೆದ 3 ತಿಂಗಳಿನಿಂದ ಅಕ್ಷರ ದಾಸೋಹದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆ ಸಿಬಂದಿ, ಸಹಾ ಯಕ ಅಡುಗೆ ಸಿಬಂದಿಗೆ ಗೌರವಧನ ಪಾವತಿಯಾಗಿಲ್ಲ. ಹೀಗಾಗಿ ಕೋವಿಡ್‌ ಸಂಕಷ್ಟದ ನಡುವೆ ಗೌರವಧನ ರಹಿತವಾಗಿ ಕೆಲಸ ನಿರ್ವಹಿಸಬೇಕಾದ ಸ್ಥಿತಿ ಉಂಟಾ ಗಿರುವ ಅಂಶವು ಬೆಳಕಿಗೆ ಬಂದಿದೆ.

ಬಿಸಿಯೂಟ ಸವಿದ ಬಿಇಒ :

ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌ ಅವರು ಡಾ| ಶಿವರಾಮ ಕಾರಂತ ಪ್ರೌಢ ಶಾಲೆ, ಮೌಲಾನ ಆಜಾದ್‌ ಪ್ರೌಢ ಶಾಲೆ, ಪೆರ್ಲಂಪಾಡಿ ಸ.ಹಿ.ಪ್ರಾ. ಶಾಲೆಗೆ ಭೇಟಿ ನೀಡಿ ಬಿಸಿಯೂಟ ಪರಿಶೀಲಿಸಿದರು. ಪೆರ್ಲಂಪಾಡಿ ಶಾಲೆಯಲ್ಲಿ ವಿದ್ಯಾರ್ಥಿಗಳ ಜತೆಗೂಡಿ ಬಿಸಿಯೂಟ ಸವಿದರು. ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ಅವರು ಸಂಪಾಜೆ ಶಾಲೆಗೆ ತೆರಳಿ ಬಿಸಿಯೂಟದ ಬಗ್ಗೆ ಪರಿಶೀಲಿಸಿ ವಿದ್ಯಾರ್ಥಿಗಳ ಜತೆ ಮಾಹಿತಿ ಪಡೆದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.