ಡ್ಯಾಂನಿಂದ ಕೃಷಿ ಭೂಮಿ ಮುಳುಗಡೆ 


Team Udayavani, Jul 21, 2018, 10:55 AM IST

21-july-3.jpg

ಪುಂಜಾಲಕಟ್ಟೆ: ಜೀವನದಿ ನೇತ್ರಾವತಿಗೆ ಶಂಭೂರುನಲ್ಲಿ ನಿರ್ಮಿಸ ಲಾದ ಎಎಂಆರ್‌ ಡ್ಯಾಂನಲ್ಲಿ ನೀರು ನಿಲುಗಡೆಯಿಂದ ಸರಪಾಡಿ ಗ್ರಾ.ಪಂ. ವ್ಯಾಪ್ತಿಯ ಸರಪಾಡಿ, ಮಠದಬೆಟ್ಟು ಪರಿಸರದಲ್ಲಿ ಕೃಷಿಭೂಮಿಯಲ್ಲಿ ನೀರು ನಿಂತು ಅಪಾರ ನಷ್ಟ ಭೀತಿಯಿದೆ ಎಂದು ರೈತರು ಆರೋಪಿಸಿದ್ದಾರೆ. ಮಠದಬೆಟ್ಟುವಿನ ಹರೀಶ್‌ ಅವರ ಸಹಿತ ಹಲವಾರು ಮಂದಿ ರೈತರ ಅಡಿಕೆ ತೋಟದಲ್ಲಿ ಕಳೆದ 18 ದಿನಗಳಿಂದ ನೀರು ನಿಂತಿದ್ದು, ಸಸಿಗಳು ಕೊಳೆಯುವ ಹಂತಕ್ಕೆ ತಲುಪಿವೆ. ಹರೀಶ್‌ ಅವರ ತೋಟದ 800 ವಿವಿಧ ಪ್ರಾಯದ ಅಡಿಕೆ ಸಸಿ, ಮರಗಳು, ಗದ್ದೆ ನೀರಿನಿಂದ ಮುಳುಗಡೆಯಾಗಿವೆ ಎಂದು ಅವರು ದೂರಿದ್ದಾರೆ. ಸರಪಾಡಿ ಪರಿಸರದಲ್ಲೂ ಕೆಲವರ ಕೃಷಿ ಭೂಮಿ ಮುಳುಗಡೆಯಾಗಿದೆ. ತೋಟ ಹಾಗೂ ಮುಳುಗಡೆ ಪ್ರದೇಶದಲ್ಲಿ ತೋಡುಗಳು ನೀರಿನಿಂದ ಆವೃತವಾಗಿ ರುವುದರಿಂದ ತೋಡು ದಾಟಿ ತಮ್ಮ ಗದ್ದೆ, ತೋಟಗಳಿಗೆ ಸಂಪರ್ಕ ಸಾಧಿಸಲು ಅಸಾಧ್ಯವಾಗಿ ಕೃಷಿ ಕಾರ್ಯ ಸ್ಥಗಿತ ಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಕಾರಣವೇನು?
ಮಳೆನೀರಿನಿಂದ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಇಳಿಕೆಯಾದರೂ ಈ ಭಾಗದ ಕೃಷಿ ಭೂಮಿಯಲ್ಲಿ ನೀರು ಯಥಾಸ್ಥಿತಿಯಲ್ಲಿ ನಿಂತಿತ್ತು. ಈ ಪರಿಸ್ಥಿತಿ ಉಂಟಾಗಲು ಶಂಭೂರು ಎಎಂಆರ್‌ ಅಣೆಕಟ್ಟು ಎತ್ತರ ಏರಿಕೆ ಕಾರಣವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಣೆಕಟ್ಟಿನ ಈಗಿರುವ ಎತ್ತರವನ್ನು ಮತ್ತೆ 3 ಅಡಿಯಷ್ಟು ಏರಿಕೆ ಮಾಡಿರುವ ಶಂಕೆ ವ್ಯಕ್ತಪಡಿಸಿರುವ ಸರಪಾಡಿ ಗ್ರಾಮ ಸ್ಥರು, ಇದರ ಪರಿಣಾಮವಾಗಿ ಕೃಷಿ ಭೂಮಿಯಲ್ಲಿ ನೀರು ನಿಲ್ಲಲು ಕಾರಣ ಎಂದು ಆರೋಪಿಸಿದ್ದಾರೆ. ಡ್ಯಾಂನಲ್ಲಿ ನೀರಿನ ಪ್ರಮಾಣ ಹೆಚ್ಚಾದಾಗ ಅದನ್ನು ಹೊರ ಬಿಡಲಾಗುತ್ತಿದ್ದರೂ ಸರಪಾಡಿ- ಮಠದಬೆಟ್ಟು ಪರಿಸರದಲ್ಲಿ ನದಿ ತೀರದ ಅಡಿಕೆ ತೋಟ, ಗದ್ದೆಯಲ್ಲಿ ನೀರು ಕಡಿಮೆಯಾಗುತ್ತಿಲ್ಲ ಎಂದು ಕೃಷಿಕರು ತಿಳಿಸಿದ್ದಾರೆ.

ಈ ಹಿಂದೆ ಇದೇ ಪರಿಸ್ಥಿತಿ ಉಂಟಾದಾಗ ಮುಳುಗಡೆಯಾದ ಆಯ್ದ ಕೆಲವು ಸಂತ್ರಸ್ತ ರೈತರಿಗೆ ಮಾತ್ರ ಪರಿಹಾರ ನೀಡಲಾಗಿತ್ತು. ಆದರೆ ತಮ್ಮನ್ನು ಕೈಬಿಟ್ಟಿರುವುದಾಗಿ ಹರೀಶ್‌ ಆರೋಪಿಸಿದ್ದಾರೆ.

ಇಲಾಖೆ ಕ್ರಮ ಕೈಗೊಳ್ಳಲಿ
ಇಂತಹ ಸಮಸ್ಯೆಗಳು ಪುನರಾವರ್ತನೆಗೊಳ್ಳುವುದರಿಂದ ತಾತ್ಕಾಲಿಕ ಪರಿಹಾರಗಳಿಂದ ಪ್ರಯೋಜನವಿಲ್ಲ. ಕೃಷಿಭೂಮಿ ಮುಳುಗಡೆ ಬಗ್ಗೆ ಗ್ರಾಮಸ್ಥರಿಗೆ ಸರಿಯಾದ ಮಾಹಿತಿ ನೀಡಿ ಪರಿಹಾರ ದೊರಕಿಸಿಕೊಡುವಲ್ಲಿ ಸಂಬಂಧಿತ ಇಲಾಖೆ ಕ್ರಮ ಕೈಗೊಳ್ಳಬೇಕು.
– ಧನಂಜಯ ಶೆಟ್ಟಿ
ಗ್ರಾ.ಪಂ. ಸದಸ್ಯ, ಸರಪಾಡಿ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.