ಕೃಷಿ , ಸಾಹಿತ್ಯ ಮಾನವ ಜೀವನದ ಅವಿಭಾಜ್ಯ ಅಂಗ
Team Udayavani, Nov 19, 2017, 3:18 PM IST
ಕೆದಂಬಾಡಿ : ಕೃಷಿ ಮತ್ತು ಸಾಹಿತ್ಯ ಮಾನವ ಜೀವನದ ಅವಿಭಾಜ್ಯ ಅಂಗ. ಆದರೆ ಯುವಜನಾಂಗ ಇವೆರಡರಿಂದಲೂ ವಿಮುಖರಾಗುತ್ತಿದ್ದಾರೆ. ಹಾಗಾಗಿ ಕೃಷಿ ಮತ್ತು ಸಾಹಿತ್ಯವನ್ನು ಉಳಿಸುವ, ಬೆಳೆಸುವ ಕಾರ್ಯ ಆಗಬೇಕು ಎಂದು ಕಸಾಪ ತಾಲೂಕು ಘಟಕದ ಮಾಜಿ ಅಧ್ಯಕ್ಷ, ಕಾರ್ಕಳ ಸ.ಪ. ಕಾಲೇಜಿನ ಪ್ರಾಂಶುಪಾಲ ಡಾ| ವರದರಾಜ ಚಂದ್ರಗಿರಿ ಹೇಳಿದರು.
ಜಿಲ್ಲಾ ಕಸಾಪ ಪುತ್ತೂರು ಘಟಕದ ವತಿಯಿಂದ ಕೆದಂಬಾಡಿ ಸುಭಾಷ್ ರೈ ಅವರ ಕಿಲ್ಲೆ ನಿವಾಸದಲ್ಲಿ ನಡೆದ ಮನೆ-ಮನೆ ಸಾಹಿತ್ಯ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಹಿರಿಯ ಸಾಹಿತಿ, ನಿವೃತ್ತ ಪ್ರಾಧ್ಯಾಪಕ ಪ್ರೊ| ವಿ.ಬಿ ಅರ್ತಿಕಜೆ ಉದ್ಘಾಟಿಸಿ ಮಾತನಾಡಿ, ಹಸಿರು ಪರಿಸರದಲ್ಲಿ ಸಾಹಿತ್ಯದ
ಕಾರ್ಯ ಅರ್ಥಪೂರ್ಣವಾಗಿ ಮೂಡಿ ಬಂದಿದೆ ಎಂದರು.
ಆಸಕ್ತಿ ಮುಖ್ಯ
ಪ್ರಗತಿಪರ ಕೃಷಿಕ ಎ.ಕೆ. ಜಯರಾಮ ರೈ ಮಾತನಾಡಿ, ಕೃಷಿಯಲ್ಲಿ ಪ್ರಗತಿ ಸಾಧಿಸಬೇಕಾದರೆ ಆಸಕ್ತಿ ಮುಖ್ಯ. ಕೃಷಿ
ನಮಗೆ ಖುಷಿ ನೀಡುತ್ತದೆ ಎಂದರು. ತಾಲೂಕು ಕಸಾಪ ಅಧ್ಯಕ್ಷ ಐತ್ತಪ್ಪ ನಾಯ್ಕ ಮಾತನಾಡಿ, ಜನರಲ್ಲಿ ಓದುವ ಹವ್ಯಾಸವನ್ನು ಮೂಡಿಸುವ ಪ್ರಯತ್ನವನ್ನು ಸಾಹಿತ್ಯ ಪರಿಷತ್ ಮಾಡುತ್ತಿದೆ ಎಂದರು.
ಇದೇ ಸಂದರ್ಭ ಕಡಮಜಲು ಸುಭಾಷ್ ರೈ ದಂಪತಿಯನ್ನು ಸಮ್ಮಾನಿಸಲಾಯಿತು. ಎನ್.ಎಸ್. ಕಿಲ್ಲೆ ಪ್ರತಿಷ್ಠಾನದ ಅಧ್ಯಕ್ಷ
ಕಡಮಜಲು ಸುಭಾಷ್ ರೈ ಸ್ವಾಗತಿಸಿದರು. ಕಸಾಪ ಗೌರವ ಕೋಶಾಧಿಕಾರಿ ಎನ್.ಕೆ ಜಗನ್ನಿವಾಸ್ರಾವ್ ವಂದಿಸಿದರು. ಗೌರವ ಕಾರ್ಯದರ್ಶಿ ಡಾ| ಎಚ್.ಜಿ. ಶ್ರೀಧರ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು