ಬರಡು ಭೂಮಿಯಲ್ಲಿ ಕೃಷಿಗೆ ಯೋಜನೆ ಅಗತ್ಯ: ಖಾದರ್
Team Udayavani, Feb 15, 2018, 1:45 PM IST
ಮಂಗಳೂರು: ಗ್ರಾಮೀಣ ಪ್ರದೇಶದ ಬರಡು ಭೂಮಿಯನ್ನು ಕೃಷಿಭೂಮಿಯನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಸರಕಾರ ಗ್ರಾಮ ಪಂಚಾಯತ್ಗಳ ಮೂಲಕ ಹೊಸ ಯೋಜನೆ ರೂಪಿಸಬೇಕಿದೆ. ಇಂತಹ ಕೃಷಿ ಕಾರ್ಯಗಳಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ತೊಡ ಗಿಸಿ ಕೊಂಡಾಗ ಯುವ ಜನಾಂಗ ಕೃಷಿ ಕುರಿತು ಜಾಗೃತಗೊಳ್ಳುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಅವರು ಹೇಳಿದರು.
ಅವರು ಬುಧವಾರ ನಗರದ ರಥಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳೇ ಬೆಳೆದ ಅಕ್ಕಿಯಿಂದ ಅನುಷ್ಠಾನಗೊಳಿಸಲಾದ ಬಿಸಿಯೂಟ ಯೋಜನೆಗೆ ಚಾಲನೆ ನೀಡಿದರು.
ರೈತರ ಕಷ್ಟಗಳನ್ನು ಅರಿಯುವುದು ಹಾಗೂ ಸಂಸ್ಕೃತಿಯನ್ನು ತಿಳಿಯುವ ಉದ್ದೇಶದಿಂದ ರಥಬೀದಿ ಕಾಲೇಜಿನ ವಿದ್ಯಾರ್ಥಿಗಳ ಪ್ರಯತ್ನ ಶ್ಲಾಘನೀಯ. ಇದಕ್ಕೆ ಸಹಕರಿಸಿದ ಪ್ರಾಂಶುಪಾಲರು, ಉಪನ್ಯಾಸಕರ ಪ್ರಯತ್ನ ಅಭಿನಂದನಾರ್ಹ ಎಂದರು.
239 ಕೋ.ರೂ. ಮೀಸಲು
ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜಾ ಮಾತನಾಡಿ, ರಾಜ್ಯ ಸರಕಾರವು ಬಜೆಟ್ನಲ್ಲಿ ಶೇ. 30ರಷ್ಟನ್ನು ಶಿಕ್ಷಣಕ್ಕಾಗಿ ಮೀಸ ಲಿಡು ತ್ತಿದ್ದು, ಒಂದೂವರೆ ಲಕ್ಷ ವಿದ್ಯಾರ್ಥಿ ಗಳಿಗೆ ಲ್ಯಾಪ್ಟಾಪ್ ನೀಡುವುದ
ಕ್ಕಾಗಿ 239 ಕೋ.ರೂ. ಮೀಸಲಿಟ್ಟಿದೆ ಎಂದು ಹೇಳಿದರು.
ಶಾಸಕ ಜೆ.ಆರ್. ಲೋಬೊ ಮಾತ ನಾಡಿ, ನಾವೇ ಕಷ್ಟಪಟ್ಟು ದುಡಿದು ತಿನ್ನುವುದರಲ್ಲಿ ಹೆಚ್ಚು ತೃಪ್ತಿ ಸಿಗುತ್ತದೆ. ಜತೆಗೆ ವಿದ್ಯಾರ್ಥಿಗಳು ಗದ್ದೆಗೆ ಹೋಗಿ ದುಡಿದಾಗ ರೈತರ ಕಷ್ಟದ ಕುರಿತು ಕೂಡ ಅವರಿಗೆ ಅರಿವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಗಳಿಗೆ ಕೆಎಂಸಿಯ ಆರೋಗ್ಯ ಕಾರ್ಡ್, ಸರಕಾರದ ಲ್ಯಾಪ್ಟಾಪ್ ಹಾಗೂ ಡಾ| ಪಿ. ದಯಾನಂದ ಪೈ ಪ್ರಾಯೋಜಿತ ಪ್ರೋತ್ಸಾಹಧನ ವಿತರಿಸಲಾಯಿತು. ಜತೆಗೆ ಅವರ ಹಡೀಲು ಗದ್ದೆಯ ಭತ್ತದ ನಾಟಿಯ ಕಿರುಚಿತ್ರ ಬಿಡುಗಡೆ ಗೊಳಿಸಲಾಯಿತು.
ವೇದಿಕೆಯಲ್ಲಿ ಮಂಗಳೂರು ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ| ಆನಂದ್ ವೇಣುಗೋಪಾಲ್, ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಜೆ.ಪಾಂಡುರಂಗ ನಾಯಕ್, ಪ್ರಾಧ್ಯಾಪಕಿ ಡಾ| ನಾಗವೇಣಿ ಮಂಚಿ, ಕೆಎಂಸಿಯ ಪಿಆರ್ಒ ರಾಕೇಶ್ ಮೊದಲಾದವರು ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ಪ್ರೊ| ರಾಜಶೇಖರ್ ಹೆಬ್ಟಾರ್ ಸ್ವಾಗತಿಸಿ ದರು. ಪ್ರಾಧ್ಯಾಪಕ ನವೀನ್ ಕೋಣಾಜೆ ನಿರ್ವಹಿಸಿದರು.
ಗಂಜಿಯೂಟ ಸವಿದ ಖಾದರ್
ವಿದ್ಯಾರ್ಥಿಗಳಿಗೆ ಬಿಸಿಯೂಟ ಯೋಜನೆ ಬಡಿಸಿ ಬಳಿಕ ಸಚಿವ ಯು.ಟಿ. ಖಾದರ್ ಅವರು ವಿದ್ಯಾರ್ಥಿ ಗಳ ಜತೆಗೆ ಕೂತು ಚಟ್ನಿ ಯೊಂದಿಗೆ ಗಂಜಿಯೂಟ ಸವಿ ದರು. ಆರಂಭದಲ್ಲಿ ವಿದ್ಯಾರ್ಥಿ ಗಳ ಗದ್ದೆ ನಾಟಿ ಕಾರ್ಯಕ್ಕೂ ಖಾದರ್ ಅವರೇ ಚಾಲನೆ ನೀಡಿದ್ದು, ಇದೀಗ ಬಿಸಿಯೂಟ ಯೋಜನೆಗೂ ಅವರೇ ಚಾಲನೆ ನೀಡಿರುವುದು ವಿಶೇಷವಾಗಿತ್ತು.
ವಿದ್ಯಾರ್ಥಿಗಳೇ ಬೆಳೆದ ಅಕ್ಕಿ
ವಿದ್ಯಾರ್ಥಿಗಳು ಕೊಣಾಜೆಯ ಗದ್ದೆಯಲ್ಲಿ 8.5 ಕ್ವಿಂಟಾಲ್ ಅಕ್ಕಿ ಬೆಳೆದಿದ್ದು, ಸುಮಾರು 250 ವಿದ್ಯಾರ್ಥಿ ಗಳು ಬಿಸಿಯೂಟ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ