ಎಳನೀರಿನಿಂದ ಮಲವಂತಿಗೆಗೆ ವ್ಯಾಪಿಸಿದ ಅಡಿಕೆ ಎಲೆಚುಕ್ಕಿ, 15,000ಕ್ಕೂ ಅಧಿಕ ಗಿಡಕ್ಕೆ ಹಾನಿ


Team Udayavani, Nov 5, 2022, 9:19 AM IST

ಎಳನೀರಿನಿಂದ ಮಲವಂತಿಗೆಗೆ ವ್ಯಾಪಿಸಿದ ಅಡಿಕೆ ಎಲೆಚುಕ್ಕಿ

ಬೆಳ್ತಂಗಡಿ : ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯದಿಂದ ಕೊಲೆಟೋಟ್ರಿಕಮ್‌ ಗ್ಲೋಯೋನ್ಪೊರಿಯೊಯಿಡ್ಸ್‌ ಎಂಬ ಶಿಲೀಂಧ್ರದಿಂದ ಉಂಟಾದ ಅಡಿಕೆ ಎಲೆಚುಕ್ಕಿ ರೋಗ ಇದೀಗ ಬೆಳ್ತಂಗಡಿ ತಾಲೂಕಿನ ಎಳನೀರಿನ ಕೆಳಭಾಗಕ್ಕೂ ಹರಡಿದೆ.

ಶಿವಮೊಗ್ಗ, ಚಿಕ್ಕಮಗಳೂರು, ದ.ಕ., ಉತ್ತರ ಕನ್ನಡ ಹಾಗೂ ಹಾಸನ ಜಿಲ್ಲೆಗಳ 2,0534.50 ಹೆಕ್ಟೇರ್‌ ಪ್ರದೇಶದಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕಿ ರೋಗ ಈಗಾಗಲೇ ಬಾಧಿಸಿದೆ. ಈ ಮಧ್ಯೆ ಸಂಸೆ ಆಸುಪಾಸಿನ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ವ್ಯಾಪ್ತಿಯ ಬಡಾಮನೆ, ಗುತ್ಯಡ್ಕ, ಬಂಗಾರಪಲ್ಕೆ, ಕುಕ್ಕಡದ 150ರಿಂದ 200 ಎಕ್ರೆಗೂ ಅಧಿಕ ಅಡಿಕೆ ಕೃಷಿಗೆ ಎಲೆ ಚುಕ್ಕಿರೋಗ ಬಾಧಿಸಿ ರೈತರು ಸಂಪೂರ್ಣ ಅಡಿಕೆ ಕೃಷಿಯನ್ನೇ ಕಳೆದುಕೊಂಡಿದ್ದಾರೆ. ಎಳನೀರು ಪ್ರದೇಶ ದಟ್ಟ ಕಾಡಿನ ಮಧ್ಯೆ ಇರುವುದರಿಂದ ಅತೀ ಸೂಕ್ಷ್ಮವಾಗಿ ಪರಿಗಣಿಸಬೇಕೆಂದು ವಿಜ್ಞಾನಿಗಳೇ ತಿಳಿಸಿದ್ದರು.

15,000ಕ್ಕೂ ಅಧಿಕ ಅಡಿಕೆ ಗಿಡಕ್ಕೆ ಹಾನಿ
ಎಳನೀರು ಭಾಗದಿಂದ 6 ಕಿ.ಮೀ. ಕೆಳಗಿರುವ ಮಲವಂತಿಗೆ ಗ್ರಾಮದ ಹೊಳೆಕೆರೆ, ಕೆಮ್ಮಟೆ, ಕುಕ್ಕಿಮಾರು, ಬಾಳೆಹಿತ್ಲು, ಓಣಿಯೇಲು, ನೇತ್ರಕೊಡಂಗೆ, ಪೈಯೆ, ಕೂರ ಸುತ್ತಮುತ್ತಲಿನ 25 ಕೃಷಿಕರ 40 ಎಕರೆಯಲ್ಲಿ ಒಂದೂವರೆ ತಿಂಗಳಿಂದ ಎಲೆಚುಕ್ಕಿ ರೋಗದ ಲಕ್ಷಣ ಕಂಡುಬಂದಿದೆ. ಈ ಗ್ರಾಮದ ಸಮೀಪದ ಮಿತ್ತಬಾಗಿಲು, ಕಡಿರುದ್ಯಾವರ ಮೊದಲಾದ ಗ್ರಾಮಗಳಲ್ಲೂ ಅಡಿಕೆ ತೋಟ ಇದ್ದು ಆತಂಕ ಎದುರಾಗಿದೆ.

4 ಕೋ.ರೂ. ಘೋಷಿಸಿದ್ದ ಸರಕಾರ
ಕಳೆದ ತಿಂಗಳಷ್ಟೇ ಸರಕಾರವು ರೋಗ ನಿಯಂತ್ರಣಕ್ಕೆ ಶಿಲೀಂಧ್ರ ನಾಶಕಗಳನ್ನು ಖರೀದಿಸಲು ಪ್ರತೀ ಹೆಕ್ಟೇರ್‌ಗೆ 4 ಸಾವಿರ ರೂ.ಗಳಂತೆ ಆರಂಭದಲ್ಲಿ 10 ಸಾವಿರ ಹೆಕ್ಟೇರ್‌ ಪ್ರದೇಶಕ್ಕೆ ಮೊದಲನೇ ಸಿಂಪರಣೆಗೆ 4 ಕೋ.ರೂ. ಅನುದಾನ ನೀಡಲು ಸಮ್ಮತಿಸಿತ್ತು. ಅದರಲ್ಲಿ ಬೆಳ್ತಂಗಡಿ ತಾಲೂಕಿನ ಎಳನೀರು ಭಾಗದ 150 ಕುಟುಂಬಗಳ ಪೈಕಿ 59 ಕುಟುಂಬಗಳ 69 ಹೆಕ್ಟೇರ್‌ ಪ್ರದೇಶವನ್ನು ಸೇರಿತ್ತು.

ಅಧಿಕ ತೇವಾಂಶವೇ ಕಂಟಕ
ಅಡಿಕೆ ಮರಗಳಿಗೆ ಸಮರ್ಪಕವಾಗಿ ಬಿಸಿಲು, ಮಳೆ ಬೀಳಬೇಕು. ಆದರೆ ಮಲವಂತಿಗೆಯ ಸುತ್ತ ರಾಷ್ಟ್ರೀಯ ಉದ್ಯಾನವನವಿರುವುದರಿಂದ ವರ್ಷಪೂರ್ತಿ ನೀರಿನ ಹರಿವಿರುತ್ತದೆ. ತೇವಾಂಶ ಹೆಚ್ಚಿರುವುದರಿಂದ ಎಲೆಚುಕ್ಕಿ ರೋಗ ಬೇಗನೆ ಹರಡುತ್ತಿದೆ. ಹಿಂಗಾರ, ಎಲೆಗಳು ಕೆಂಪುಬಣ್ಣಕ್ಕೆ ತಿರುಗಿ ಮರಗಳು ಸಾಯಲಾರಂಭಿಸಿವೆ. ಸರಕಾರ ಇದರ ಗಂಭೀರತೆಯನ್ನು ಮನಗಾಣಬೇಕಿದೆ ಎಂದು ಮಲವಂತಿಗೆ ಕೆಮ್ಮಟಿಯ ಕೃಷಿಕ ಸೀನಪ್ಪ ಗೌಡ ಆಗ್ರಹಿಸಿದ್ದಾರೆ.

ನಿವಾರಣೆ ಹೇಗೆ?
ಮುಂದಿನ ಎರಡು ವರ್ಷಗಳಲ್ಲಿ ಎಲೆಚುಕ್ಕಿ (ರೆಡ್‌ ಮೈಟ್‌) ರೋಗ ಸಂಪೂರ್ಣ ಹತೋಟಿಗೆ ತರುವ ಸಲುವಾಗಿ ಸರಕಾರ ಗಂಭೀರ ಚಿಂತನೆ ನಡೆಸಿದೆ. ಇದಕ್ಕಾಗಿ ರೈತರು ಹೆಕ್ಸ್‌ಕೊನೊಜಾಲ್‌ (Hexconozole)ಅಥವಾ ಪ್ರೊಪಿಕೊಜಾಲ್‌ (Propicozole)ದ್ರಾವಣವನ್ನು ಒಂದು ಲೀಟರ್‌ ನೀರಿಗೆ 1 ಎಂ.ಎಲ್‌. ನಷ್ಟು ಬೆರೆಸಿ ಸೋಗೆ ಪೂರ್ತಿ ಆವರಿಸುವಂತೆ ಸಿಂಪಡಿಸುವಂತೆ ಸಲಹೆ ನೀಡಲಾಗಿದೆ ಎಂದು ಬೆಳ್ತಂಗಡಿಯ ಹಿರಿಯ ತೋಟಗಾರಿಕೆ ನಿರ್ದೇಶಕ ಕೆ.ಎಸ್‌. ಚಂದ್ರಶೇಖರ್‌ ತಿಳಿಸಿದ್ದಾರೆ.

– ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.