ಕೋರಿಕೆಗೆ ಸ್ಪಂದಿಸಿದ ಅಮ್ಮಂದಿರು: ಎದೆಹಾಲಿಲ್ಲದೆ ಕಂಗೆಟ್ಟಿದ್ದ ತಾಯಿಗೆ ನೆರವು!


Team Udayavani, May 19, 2022, 7:00 AM IST

thumb 4

ಸಾಂದರ್ಭಿಕ ಚಿತ್ರ.

ಮಂಗಳೂರು: ಎದೆಹಾಲು ಬತ್ತಿ ಎಳೆಯ ಶಿಶುವಿಗೆ ಪೌಷ್ಟಿಕ ಆಹಾರ ನೀಡಲಾಗದೆ ಕಂಗೆಟ್ಟಿದ್ದ ತಾಯಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಹಲವು ತಾಯಂದಿರು ತಮ್ಮ ಎದೆಹಾಲು ನೀಡುವ ಮೂಲಕ ಸಾಂತ್ವನ ನೀಡಿದ್ದಾರೆ!

ಮಂಗಳೂರಿನ ರಥಬೀದಿ ನಿವಾಸಿ ಅನುಷಾ ಎರಡು ತಿಂಗಳ ಹಿಂದೆ ಮಗುವಿಗೆ ಜನ್ಮನೀಡಿದ್ದರು.

ಗರ್ಭಿಣಿಯಾಗಿದ್ದಾಗ ಪ್ರಿಕ್ಲಾಂಪ್ಸಿಯಾ ಎಂಬ ಆರೋಗ್ಯ ಸಮಸ್ಯೆ ಎದುರಾಗಿದ್ದು ತಾಯಿ, ಮಗು ಇಬ್ಬರಿಗೂ ಅಪಾಯಕಾರಿಯಾಗಿ ಪರಿಣಮಿಸಿತ್ತು. ಆದ್ದರಿಂದ ಏಳು ತಿಂಗಳ ಗರ್ಭಿಣಿಯಾದಾಗಲೇ ಅನಿವಾರ್ಯವಾಗಿ ಶಸ್ತ್ರಕ್ರಿಯೆ ನಡೆಸಿ ಮಗುವನ್ನು ಹೊರತೆಗೆಯ ಬೇಕಾಯಿತು.

ಕನಿಷ್ಠ 2.5 ಕೆ.ಜಿ ತೂಕ ಇರಬೇಕಿದ್ದ ಮಗು 90 ಗ್ರಾಂ ಮಾತ್ರವೇ ಇತ್ತು. ಎರಡು ದಿನ ಹಿಂದೆ ಮಗುವನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವಾಗ ತುಸು ಚೇತರಿಸಿಕೊಂಡು ತೂಕ 1.4 ಕೆ.ಜಿಗೆ ಏರಿಕೆಯಾಗಿತ್ತು. ಎಳೆ ಕಂದನಿಗೆ ಅಗಾಗ ಸ್ತನ್ಯಪಾನ ಅತ್ಯಾವಶ್ಯಕ. ಆದರೆ ಅವಧಿಪೂರ್ವ ಹೆರಿಗೆಯಿಂದಾಗಿ ತಾಯಿಗೆ ಎದೆಹಾಲಿನ ಕೊರತೆ ಕಾಡುತ್ತಿತ್ತು.

ಪ್ರತೀ 2 ಗಂಟೆಗೊಮ್ಮೆ 30 ಮಿಲಿ ಲೀಟರ್‌ ಎದೆಹಾಲು ಕುಡಿಸಲೇಬೇಕು, ಹಾಗಿದ್ದರೆ ಮಾತ್ರ ಮಗು ಆರೋಗ್ಯಯುತವಾಗಿ ಬೆಳವಣಿಗೆ ಸಾಧಿಸಬಹುದು ಎಂದು ವೈದ್ಯರು ತಿಳಿಸಿದ್ದರು. ಬೇರೆ ವಿಧಿಯಿಲ್ಲದೆ ಅನುಷಾ ಹಾಗೂ ಕುಟುಂಬದವರು ಮಂಗಳೂರಿನ ಲೇಡಿಗೋಶನ್‌ ಆಸ್ಪತ್ರೆಯಲ್ಲಿ ಇತ್ತೀಚೆಗೆ ಪ್ರಾರಂಭಿಸಲಾದ ಎದೆಹಾಲು ಬ್ಯಾಂಕನ್ನು ಸಂಪರ್ಕಿಸಿದರು.

ಅಲ್ಲೂ ಹೆಚ್ಚುವರಿ ಹಾಲು ಲಭ್ಯವಿಲ್ಲದ ಕಾರಣ ಸಹಾಯ ಸಿಗಲಿಲ್ಲ. ಕೊನೆಯಲ್ಲಿ ಅವರಿಗಿದ್ದ ಆಯ್ಕೆ ಬೆಂಗಳೂರಿಗೆ ಹೋಗುವುದು; ಆದರೆ ಆಗಲೇ ಅನುಷಾ ಆಸ್ಪತ್ರೆ ಖರ್ಚು ಹೆಚ್ಚಿದ್ದರಿಂದ ಕಷ್ಟಕರವಾಗಿತ್ತು.

ಜಾಲತಾಣದಿಂದ ನೆರವು
ಕೊನೆಯ ಪ್ರಯತ್ನವೆಂಬಂತೆ ಅನುಷಾ ಹಾಗೂ ಕುಟುಂಬದವರು ಸಾಮಾಜಿಕ ಜಾಲತಾಣ ಮುಖೇನ ತಮ್ಮ ಸಂಕಷ್ಟ ಹಾಗೂ ಮನವಿಯನ್ನು ಹಂಚಿಕೊಂಡರು. ಮಂಗಳೂರಿನ ಪ್ರಮುಖ ಪೇಜ್‌ಗಳಲ್ಲೊಂದಾದ ಮಂಗಳೂರು ಮೇರಿಜಾನ್‌ ಮೂಲಕವೂ ಕೋರಿಕೆ ಹಂಚಲ್ಪಟ್ಟಿತು.

ಇದಾಗಿ 24 ಗಂಟೆಗಳಲ್ಲೇ ಅನುಷಾಗೆ 25ರಷ್ಟು ಕರೆಗಳು ದ.ಕ., ಉಡುಪಿ ಜಿಲ್ಲೆಯಿಂದ ಬಂದವು. ಕೆಲವು ತಾಯಂದಿರು ಹೆಚ್ಚುವರಿ ಎದೆಹಾಲನ್ನು ಹಂಚಿಕೊಳ್ಳುವುದಕ್ಕೆ ಸಿದ್ಧರಾಗಿದ್ದರು.

ಮೊದಲ ಹಂತದ ಎದೆಹಾಲನ್ನು ಪುತ್ತೂರು, ಕಾರ್ಕಳದಿಂದ ಪಡೆದುಕೊಳ್ಳಲಾಯಿತು. ಪ್ರಸ್ತುತ ಮಂಗಳೂರಿನಲ್ಲೇ ಐವರು ತಾಯಂದಿರು ತಮ್ಮ ಎದೆಹಾಲನ್ನು ಸಂಗ್ರಹಿಸಿ ನೀಡುತ್ತಿದ್ದಾರೆ. ಅನುಷಾ ಅವರ ಪತಿ ಈ ತಾಯಂದಿರ ಮನೆಗಳಿಗೆ ಹೋಗಿ ಎದೆಹಾಲು ತರುತ್ತಾರೆ. ಮಗುವಿಗೆ ಅದನ್ನು ನೀಡುವ ಮೊದಲು ಸರಿಯಾಗಿ ತಪಾಸಣೆ ನಡೆಸಲಾಗುತ್ತದೆ.

ಈ ರೀತಿ ಅನಿರೀಕ್ಷಿತವಾಗಿ ಸಿಕ್ಕಿರುವ ನೆರವಿಗೆ ಅನುಷಾ ಖುಷಿ ವ್ಯಕ್ತಪಡಿಸಿದ್ದಾರೆ.

 

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.