ಐಶ್ವರ್ಯಾ ರೈ ದೇವಾಲಯಗಳಿಗೆ ಭೇಟಿ
Team Udayavani, Apr 10, 2017, 4:05 PM IST
ಮಂಗಳೂರು: ಬಾಲಿವುಡ್ನ ಖ್ಯಾತ ನಟಿ ಐಶ್ವರ್ಯಾ ರೈ ಹಾಗೂ ಪುತ್ರಿ ಆರಾಧ್ಯಾ ರವಿವಾರ ಮಂಗಳೂರಿನ ವಿವಿಧ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಸಂಜೆ ಮುಂಬಯಿಗೆ ವಾಪಸಾದರು.
ಐಶ್ವರ್ಯಾ ಅವರ ತಂದೆ ಕೃಷ್ಣರಾಜ್ ರೈ ಅವರು ಇತ್ತೀಚೆಗೆ ಮುಂಬಯಿಯಲ್ಲಿ ನಿಧನ ಹೊಂದಿದ್ದು, ಅವರ ಪಿಂಡ ಪ್ರದಾನ ಕಾರ್ಯಾಕ್ರಮದಲ್ಲಿ ಭಾಗವಹಿಸಲು ಅವರು ಶನಿವಾರ ಬೆಳಗ್ಗೆ ಮಂಗಳೂರಿಗೆ ಆಗಮಿಸಿದ್ದರು.
ಉಪ್ಪಿನಂಗಡಿಯಲ್ಲಿ ಈ ಸಂಬಂಧ ವಿಧಿ ವಿಧಾನಗಳನ್ನು ನೆರವೇರಿಸಿ, ಶನಿವಾರ ರಾತ್ರಿ ಮಂಗಳೂರಿನ ಖಾಸಗಿ ಹೊಟೇಲ್ನಲ್ಲಿ ತಂಗಿದ್ದರು.
ರವಿವಾರ ಬೆಳಗ್ಗೆ ಸುಮಾರು 11 ಗಂಟೆಗೆ ಐಶ್ವರ್ಯಾ ರೈ, ಪುತ್ರಿ ಆರಾಧ್ಯಾ, ತಾಯಿ ಬೃಂದಾ ರೈ, ಸಹೋದರ ಆದಿತ್ಯ ರೈ ಜತೆಗೆ ಮಂಗಳೂರಿನ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಕ್ಷೇತ್ರದ ಕೆರೆಯ ಪಕ್ಕದಲ್ಲಿ ಕೃಷ್ಣರಾಜ್ ರೈ ಅವರ ಪಿಂಡ ಪ್ರದಾನ ಕಾರ್ಯಾಕ್ರಮದ ವಿಧಿವಿಧಾನಗಳನ್ನು ನೆರವೇರಿಸಿದರು. ಐಶ್ವರ್ಯಾ ಅವರ ಸಹೋದರ ಆದಿತ್ಯ ರೈ ನೇತೃತ್ವದಲ್ಲಿ ಕ್ರಮಗಳನ್ನು ನಡೆಸಲಾಯಿತು. ಅನಂತರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶರವು ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ತೆರಳಿದ ಐಶ್ವರ್ಯಾ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತಾವು ತಂಗಿದ್ದ ಖಾಸಗಿ ಹೊಟೇಲ್ಗೆ ತೆರಳಿ ಊಟ ಮುಗಿಸಿ ವಿಶ್ರಾಂತಿ ಪಡೆದರು. ಸಂಜೆ ಜೆಟ್ ಏರ್ವೆಸ್ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಬಯಿಗೆ ಮರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.