ಆಯುಷ್ಮಾನ್‌ ಭಾರತ್‌ ರಾಜ್ಯದ ನಕಲು: ಖಾದರ್‌ ಆರೋಪ


Team Udayavani, Feb 22, 2019, 12:30 AM IST

utt.jpg

ಬೆಳ್ತಂಗಡಿ: ಕೇಂದ್ರ ಸರಕಾರವು ಚುನಾವಣೆ ಸಮೀಪಿಸುತ್ತಿದ್ದಂತೆ ಜನರಿಗೆ ಸುಳ್ಳು ಮಾಹಿತಿ ನೀಡಿ ವಿವಿಧ ಯೋಜನೆಗಳನ್ನು ತರುತ್ತಿದೆ. ಆಯುಷ್ಮಾನ್‌ ಭಾರತ್‌ ಯೋಜನೆಯು ರಾಜ್ಯ ಸರಕಾರದ ಆರೋಗ್ಯಶ್ರೀ ಯೋಜನೆಯ ನಕಲು ಎಂದು ಸಚಿವ ಯು.ಟಿ. ಖಾದರ್‌ ಆರೋಪಿಸಿದ್ದಾರೆ.

ಅವರು ಗುರುವಾರ ಬೆಳ್ತಂಗಡಿ ನಿರೀಕ್ಷಣಾ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿರುವ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ಈಗ ಜನರ ನೆನಪಾಗುತ್ತಿದೆ. ಹೀಗಾಗಿ ರಾಜ್ಯದ ಸರಕಾರದ ಪಾಲೂ ಇರುವ ಯೋಜನೆಗಳನ್ನು ತನ್ನದೇ ಎಂಬಂತೆ ಸುಳ್ಳು ಮಾಹಿತಿ ನೀಡುತ್ತಿದೆ ಎಂದು ಆರೋಪಿಸಿದರು.

ಜಮ್ಮು ಕಾಶ್ಮೀರದಲ್ಲಿ ಯೋಧರ ಮೇಲೆ ನಡೆದ ದಾಳಿಯು ಇಡೀ ದೇಶದ ಮೇಲಿನ ದಾಳಿ. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುವುದು ಅಗತ್ಯ. ಅಧಿಕಾರಕ್ಕೆ ಬಂದಾಗ ಪಾಕಿಸ್ಥಾನಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದವರು ಏನು ಮಾಡಿದ್ದಾರೆ? ಪಾಕ್‌ಗೆ ಹೋಗಿ ಚಹಾ ಕುಡಿದುಬಂದ ಪ್ರಧಾನಿ ಇದ್ದರೆ ಅದು ಮೋದಿ ಮಾತ್ರ ಎಂದು ವ್ಯಂಗ್ಯವಾಡಿದರು.

ದೇಶದ ಗಡಿಯಿಂದ ಸ್ಫೋಟಗೊಂಡ ಸ್ಥಳಕ್ಕೆ 300 ಕೆ.ಜಿ. ಆರ್‌ಡಿಎಕ್ಸ್‌ ಪೂರೈಕೆ ಮಾಡಬೇಕಾದರೆ ಮೂರು ದಿನಗಳು ಬೇಕು. ಹಾಗಾದರೆ ನಮ್ಮ ದೇಶದ ಬೇಹುಗಾರಿಕೆ ಏನು ಮಾಡುತ್ತಿದೆ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ ಎಂದರು.

ದೇಶದಲ್ಲಿ ನಾಲ್ಕು ಜಡ್ಜ್ಗಳು ಪತ್ರಿಕಾಗೋಷ್ಠಿ ನಡೆಸಿ ನಮಗೆ ಕೆಲಸ ಮಾಡಲು ಆಗುತ್ತಿಲ್ಲ ಎಂಬ ಹೇಳಿಕೆ ನೀಡುತ್ತಿದ್ದಾರೆ, ನೀತಿ ಆಯೋಗದ ಅಧ್ಯಕ್ಷರು ರಾಜೀನಾಮೆ ನೀಡಿದ್ದಾರೆ, ಸಿಬಿಐನ ಮುಖ್ಯಸ್ಥರಿಗೆ ರಾತ್ರೋರಾತ್ರಿ ಅನಿರ್ದಿಷ್ಟಾವಧಿ ರಜೆ ನೀಡಲಾಗಿದೆ, ರಿಸರ್ವ್‌ ಬ್ಯಾಂಕಿನ ಗವರ್ನರ್‌ ರಾಜೀನಾಮೆ ಕೊಟ್ಟು ತೆರಳಿದ್ದಾರೆ ಎಂದಾದರೆ ದೇಶದ ಪರಿಸ್ಥಿತಿ ಯಾವ ಹಂತಕ್ಕೆ ಬಂದು ತಲುಪಿದೆ ಎಂಬುದು ತಿಳಿಯುತ್ತದೆ ಎಂದೂ ಖಾದರ್‌ ಹೇಳಿದರು. ಉಜ್ವಲ ಯೋಜನೆಯನ್ನು ಬಿಜೆಪಿಯು ಪಕ್ಷದ ಕಾರ್ಯಕ್ರಮವಾಗಿ ಬಿಂಬಿಸಿದೆ ಎಂದರು. 

ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ಈ ಹಿಂದೆಯೇ ಮಂಜೂರುಗೊಳಿಸಿದ್ದ ಬೆಳ್ತಂಗಡಿ ತಾಲೂಕಿನ ಎರಡು ಕಿಂಡಿ ಅಣೆಕಟ್ಟುಗಳು ಪಶ್ಚಿಮವಾಹಿನಿ ಯೋಜನೆಯಲ್ಲಿ ಅನುಷ್ಠಾನಗೊಳ್ಳುತ್ತಿವೆ. ಡಿಸಿ ಮನ್ನಾ ಭೂಮಿ ವಿತರಣೆಯ ಕುರಿತು ಚರ್ಚಿಸಿ ಸಂಬಂಧಪಟ್ಟ ಸಂಘಟನೆಗಳಿಗೆ ಮಾಹಿತಿ ನೀಡುವ ಕಾರ್ಯ ಮಾಡಲಾಗುವುದು. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ತಾಲೂಕಿನಲ್ಲಿ 27 ಕೋತಿಗಳು ಮೃತಪಟ್ಟಿದ್ದು, ಮುಂಜಾಗ್ರತೆ ಕೈಗೊಳ್ಳಲಾಗಿದೆ ಎಂದರು.  ಬಾಂಜಾರುಮಲೆ ಮಲೆಕುಡಿಯ ಕುಟುಂಬಗಳು ಜಮೀನು ಕಳೆದುಕೊಳ್ಳುವ ಭೀತಿಯಿಂದ ಹೊರಬರಲು ರಾಜ್ಯ ಸರಕಾರವು ನ್ಯಾಯಾಲಯಕ್ಕೆ ಸಲ್ಲಿಸಿರುವ ರಿಟ್‌ ಅರ್ಜಿ ಹಿಂಪಡೆಯಬೇಕು ಎಂದು ಸ್ಥಳೀಯ ನಿವಾಸಿಗಳು ಸಚಿವರಿಗೆ ಮನವಿ ನೀಡಿದರು. 

ಕಂದಾಯ ಸಚಿವರ ಜತೆ ಚರ್ಚಿಸುವುದಾಗಿ ಖಾದರ್‌ ಭರವಸೆ ನೀಡಿದರು. ಮಾಜಿ ಶಾಸಕ ಕೆ.ವಸಂತ ಬಂಗೇರ, ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ಜಿ.ಪಂ. ಸದಸ್ಯರಾದ ಧರಣೇಂದ್ರಕುಮಾರ್‌, ಶಾಹುಲ್‌ ಹಮೀದ್‌, ಶೇಖರ ಕುಕ್ಕೇಡಿ, ನಮಿತ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಾಜಶೇಖರ ಅಜ್ರಿ, ಯುವ ಕಾಂಗ್ರೆಸ್‌ ಅಧ್ಯಕ್ಷ ಅಭಿನಂದನ್‌, ಮುಂದಾಳು ರಾಜಶೇಖರ ಶೆಟ್ಟಿ ಇದ್ದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.