ಆಲಂಕಾರು: ಬಿಕೋ ಎನ್ನುತ್ತಿದೆ ಹಸಿಮೀನು ಮಾರುಕಟ್ಟೆ 


Team Udayavani, Jul 16, 2018, 11:09 AM IST

16-july-5.jpg

ಆಲಂಕಾರು: ಇಲ್ಲಿನ ಗ್ರಾಮ ಪಂಚಾಯತ್‌ ವತಿಯಿಂದ ನಿರ್ಮಾಣವಾಗಿರುವ ಹಸಿ ಮೀನು ಮಾರುಕಟ್ಟೆ ಇದೀಗ ವ್ಯಾಪಾರ- ವ್ಯವಹಾರವಿಲ್ಲದೆ ಬಿಕೋ ಎನ್ನುತ್ತಿದೆ. ಆಲಂಕಾರು ಪೇಟೆಯಲ್ಲಿ ಶುಚಿತ್ವವನ್ನು ಕಾಪಾಡುವ ಮಹತ್ತರ ಉದ್ದೇಶವನ್ನಿಟ್ಟುಕೊಂಡು ನಿರ್ಮಾಣವಾದ ಹಸಿ ಮೀನು ಮಾರುಕಟ್ಟೆ ಸದ್ಯ ನಾಯಿಗಳ ವಿಶ್ರಾಂತಿ ಧಾಮವಾಗಿ ಮಾರ್ಪಾಡಾಗಿದೆ. ಮೂರು ವರ್ಷಗಳ ಹಿಂದೆ ಆಲಂಕಾರು ಪೇಟೆಯಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಹಸಿ ಮೀನು ಮಾರುಕಟ್ಟೆ ನಿರ್ಮಿಸಿ, ಮೀನು ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಿ ಕೊಟ್ಟಿದ್ದರು. ಈ ಮಾರುಕಟ್ಟೆಯಿಂದ ಪೇಟೆಯಲ್ಲಿ ಶುಚಿತ್ವಕ್ಕೆ ತೊಡಕಾಗಿದೆ ಎಂಬ ಕಾರಣ ನೀಡಿ ಮಾರುಕಟ್ಟೆಯ ಪರವಾನಿಗೆಯನ್ನು ರದ್ದುಪಡಿಸಲಾಗಿತ್ತು. ಬಳಿಕ, ಗ್ರಾಮ ಪಂಚಾಯತ್‌ ತನ್ನ ಅಧೀನದ ಜಾಗದಲ್ಲಿ 2.15 ಲಕ್ಷ ರೂ. ವೆಚ್ಚದಲ್ಲಿ ಆಲಂಕಾರು ಎಪಿಎಂಸಿ ಕಟ್ಟಡದ ಬಳಿ ವ್ಯವಸ್ಥಿತ ನಾಲ್ಕು ಕೊಠಡಿಗಳ ಮಾರುಕಟ್ಟೆ ಕಟ್ಟಡವನ್ನು ನಿರ್ಮಿಸಿ ಟೆಂಡರ್‌ ಮೂಲಕ ವ್ಯಾಪಾರಕ್ಕೆ ಅನುವು ಮಾಡಿಕೊಟ್ಟಿತ್ತು.

ಸ್ಪರ್ಧಾತ್ಮಕ ಬಿಡ್‌
ಪ್ರಥಮ ವರ್ಷ ಮಾರುಕಟ್ಟೆಯು 1.20 ಲಕ್ಷ ರೂ.ಗೆ ಹರಜಾಗಿ, ಮೀನು ಮಾರಾಟವೂ ಸುಸೂತ್ರವಾಗಿ ನಡೆಯಿತು. 2017-18ನೇ ಸಾಲಿನ ವ್ಯಾಪಾರಕ್ಕೆ ಹರಾಜು ಪ್ರಕ್ರಿಯೆ ಸ್ಪರ್ಧಾತ್ಮಕವಾಗಿ ನಡೆದು ಕಟ್ಟಡದ ಎಲ್ಲ ಕೊಠಡಿಗಳನ್ನು ಒಬ್ಬರೇ ಬಿಡ್‌ದಾರರು ಬರೋಬ್ಬರಿ 5.20 ರೂ.ಗೆ ಹರಾಜಿನಲ್ಲಿ ಪಡೆದರು. ಕೆಲವು ದಿನಗಳಲ್ಲಿ ಪೆರಾಬೆ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಆಲಂಕಾರು ಪೇಟೆಯ ಸಮೀಪ ಖಾಸಗಿ ವ್ಯಕ್ತಿಯೊಬ್ಬರ ಜಾಗದಲ್ಲಿ ಹಸಿ ಮೀನು ಮಾರಾಟಕ್ಕೆ ಅವಕಾಶ ಕಲ್ಪಿಸಿದ ಪರಿಣಾಮ, ಮೀನು ಮಾರಾಟ ಜಿದ್ದಾಜಿದ್ದಿನಲ್ಲಿ ನಡೆಯಿತು. ಈ ದರ ಸಮರದಲ್ಲಿ ಮಾರುಕಟ್ಟೆಯ ವ್ಯಾಪಾರಿ ನಷ್ಟ ಅನುಭವಿಸಿ, ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸ್ಥಳೀಯ ಆಡಳಿತಕ್ಕೆ ಮನವಿ ಮಾಡಿದರು.

ತೆರೆದ ವಾಹನದಲ್ಲಿ ಮಾರಾಟ
ಮಾರುಕಟ್ಟೆಯ ವ್ಯಾಪಾರಿಯ ಮನವಿಗೆ ಸ್ಪಂದಿಸಿದ ಆಡಳಿತ ಮಂಡಳಿ, ಪೇಟೆಯ ಶುಚಿತ್ವದ ವಿಚಾರವನ್ನು ಮರೆತು ಆಲಂಕಾರು ಪೇಟೆಯಲ್ಲಿಯೇ ಎರಡು ವರ್ಷಗಳ ಬಳಿಕ ವಾಹನದಲ್ಲಿ ಮೀನು ಮಾರಾಟಕ್ಕೆ ಅನುವು ಮಾಡಿಕೊಟ್ಟಿತ್ತು. ಕೆಲವು ದಿನಗಳ ಅನಂತರ ಶೆಡ್‌ ನಿರ್ಮಿಸಿ, ಮೀನು ಮಾರಾಟಕ್ಕೆ ಅವಕಾಶ ಕಲ್ಪಿಸಿತು. ಲೋಕೋಪಯೋಗಿ ರಸ್ತೆ ಬದಿಯಲ್ಲಿ ಮೀನು ಮಾರಾಟ ಮಾಡುತ್ತಿದ್ದಾರೆ ಎಂಬ ವಿಚಾರ ತಿಳಿದ ತತ್‌ಕ್ಷಣ ಆರಂಭಶೂರತ್ವ ಪ್ರದರ್ಶಿಸಿದ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌, ಆಮೇಲೆ ತಣ್ಣಗಾದರು. ತಾತ್ಕಾಲಿಕ ಮಾರುಕಟ್ಟೆಯನ್ನು ತೆರವುಗೊಳಿಸುವುದಾಗಿ ಅಬ್ಬರಿಸಿದವರು ಜಾಣ ಮೌನಕ್ಕೆ ಜಾರಿದರು. ಈ ವರ್ತನೆ ಜನರಲ್ಲಿ ಸಂಶಯ ಮೂಡಿಸಿದೆ.

ಚರ್ಚಿಸಿ ಕ್ರಮ
ಆಗಸ್ಟ್‌ ತಿಂಗಳ ಅಂತ್ಯಕ್ಕೆ ಹಸಿ ಮೀನು ಮಾರುಕಟ್ಟೆಗೆ ಟೆಂಡರ್‌ ಕರೆಯಲಾಗುವುದು. ಪೇಟೆಯಲ್ಲಿ ಒಂದು ವರ್ಷದ ಅವಧಿಗಾಗಿ ಶೆಡ್‌ ನಿರ್ಮಿಸಿ ಮೀನು ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದು ತಾತ್ಕಾಲಿಕ ಮಾರುಕಟ್ಟೆ. ಮುಂದಿನ ದಿನಗಳಲ್ಲಿ ಪೇಟೆಯಲ್ಲಿ ಮೀನು ಮಾರಾಟ ಕೇಂದ್ರ ಮಾಡುವ ವಿಚಾರವಾಗಿ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು. ಮುಂದಿನ ಒಂದು ವರ್ಷಕ್ಕೆ ಇಡೀ ಆಲಂಕಾರು ಗ್ರಾಮದಲ್ಲಿ ತೆರೆದ ವಾಹನದಲ್ಲಿ ಮೀನು ಮಾರಾಟ ಮಾಡಲು ಅವಕಾಶ ಮಾಡಿಕೊಡುವ ಬಗ್ಗೆಯೂ ಚಿಂತಿಸಲಾಗಿದೆ.
 - ಜಗನ್ನಾಥ ಶೆಟ್ಟಿ, 
ಆಲಂಕಾರು ಗ್ರಾ.ಪಂ. ಅಭಿವೃದ್ದಿ ಅಧಿಕಾರಿ

 ಸದಾನಂದ ಆಲಂಕಾರು

ಟಾಪ್ ನ್ಯೂಸ್

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.