ಆಲಂಕಾರು ಪೇಟೆ: ಕುಡಿಯುವ ನೀರಿಗೂ ಹಾಹಾಕಾರ !


Team Udayavani, Feb 25, 2019, 5:38 AM IST

25-february-4.jpg

ಆಲಂಕಾರು : ಕಡಬ ತಾ| ನ ಬೆಳೆಯುತ್ತಿರುವ ಪಟ್ಟಣಗಳಲ್ಲಿ ಆಲಂಕಾರು ಗ್ರಾಮ ಮತ್ತು ಪೇಟೆ ಹಲವು ಗ್ರಾಮಗಳ ಸಂಪರ್ಕಕ್ಕೆ ರಹದಾರಿಯನ್ನೇ ನಿರ್ಮಿಸಿದೆ. ಇಂತಹ ಪಟ್ಟಣದಲ್ಲೇ ಸಾರ್ವಜನಿಕರು ಕುಡಿಯುವ ನೀರಿಗಾಗಿ ಬವಣೆ ಪಡುವಂತಾಗಿದೆ.

ಕುಮಾರಧಾರಾ ನದಿಗೆ ಶಾಂತಿಮೊಗರು ಸೇತುವೆ ಸಂಪರ್ಕಕ್ಕೆ ಮುಕ್ತವಾದ ಬಳಿಕ ಆಲಂಕಾರು ಪೇಟೆಯು ಹಲವು ಗ್ರಾಮಗಳನ್ನು ಸಂಪರ್ಕಿಸುವ ಕೇಂದ್ರವಾಗಿದೆ. ನೆಲ್ಯಾಡಿ, ಕುಂತೂರು, ಪೆರಾಬೆ ಮೊದಲಾದ ಪ್ರದೇಶಗಳಿಂದ ಪುತ್ತೂರಿಗೆ ಹೋಗುವ ಜನ ಆಲಂಕಾರು ಪೇಟೆಯಾಗಿಯೇ ಪ್ರಯಾಣ ಬೆಳೆಸುತ್ತಾರೆ. 

ಈ ಕಾರಣದಿಂದಾಗಿ ಆಲಂಕಾರು ಪೇಟೆಯು ಬೆಳಗ್ಗೆಯಿಂದ ಸಂಜೆವರೆಗೆ ಜನಸಂದಣಿಯಿಂದ ತುಂಬಿರುತ್ತದೆ. ಅವರು ಪೇಟೆಯಲ್ಲಿರುವ ಹೊಟೇಲ್‌ಗ‌ಳಿಗೆ ಧಾವಿಸಿ ನೀರು ಕುಡಿಯಬೇಕು ಅಥವಾ ಬಾಟಲಿ ನೀರು ಖರೀದಿಸಿ ಕುಡಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳಿಯಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.

ಟ್ಯಾಂಕ್‌ ನಿರ್ಮಾಣವಾಗಿಲ್ಲ
ಕೆಲ ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಲಂಕಾರು ಗ್ರಾಮದ ಒಕ್ಕೂಟಗಳು ಪೇಟೆ ಪ್ರವೇಶ ದ್ವಾರದ ಬಳಿ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್‌ ಅನ್ನು ನಿರ್ಮಿಸಿ ಜನತೆಗೆ ನೀಡಿತ್ತು. ಇದಕ್ಕೆ ಗ್ರಾಮ ಪಂಚಾಯತ್‌ ಉಚಿತ ನೀರಿನ ವ್ಯವಸ್ಥೆಯನ್ನು ಕಲ್ಪಿಸಿ ಯೋಜನೆಯ ಉದ್ದೇಶವನ್ನು ಯಶಸ್ವಿಗೊಳಿಸಿತ್ತು. ಆದರೆ ರಸ್ತೆ ದುರಸ್ತಿಯ ನೆಪದಲ್ಲಿ ತೆರವಾದ ಟ್ಯಾಂಕ್‌ ಅನ್ನು
ಮರು ಸ್ಥಾಪಿಸಲು ಯಾವ ಸಂಘಟನೆಯಾಗಲೀ, ಸ್ಥಳೀಯಾಡಳಿತ ಮಂಡಳಿಯಾಗಲೀ, ನೀರಿನ ಟ್ಯಾಂಕ್‌ ಅಳವಡಿಸಲು ಮುತುವರ್ಜಿ ವಹಿಸದಿರುವುದು ಸಮಸ್ಯೆಗೆ ಮೂಲ ಕಾರಣವಾಗಿದೆ. ಅಂದು ಇದ್ದ ನೂರು ಲೀಟರ್‌ನ ಸಿಂಟೆಕ್ಸ್‌ ಡ್ರಂ ಸಹ ಇಂದು ಮಾಯವಾಗಿದೆ.

ಮುಂದೆ ಬಾರದ ಸಂಘಟನೆಗಳು
ಆಲಂಕಾರು ವ್ಯಾಪ್ತಿಯಲ್ಲಿ ಕಾರ್ಯಾಚರಿಸುವ ವಿವಿಧ ಸಂಘಟನೆಗಳು ಸ್ಥಳೀಯಾಡಳಿತದೊಂದಿಗೆ ಸದಾ ಕೈ ಜೋಡಿಸಿಕೊಂಡು ಗ್ರಾಮದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿವೆ. ಆದರೆ ಈ ಸುಡು ಬಿಸಿಲಿನ ತಾಪಕ್ಕೆ ಆಲಂಕಾರು ಪೇಟೆಯನ್ನು ಸಂಪರ್ಕಿಸುವ ಸಾರ್ವಜನಿಕರು ಕುಡಿಯುವ ನೀರಿನ ವ್ಯವಸ್ಥೆಯಿಂದ ವಂಚಿತರಾಗಿದ್ದಾರೆ ಎನ್ನುವುದು ಯಾವ ಸಂಘಟನೆಗೂ ಇನ್ನೂ ಮನವರಿಕೆಯಾಗದಿರುವುದು ವಿಶೇಷವಾಗಿದೆ. ಈ ವಿಚಾರ ಆಲಂಕಾರಿನಲ್ಲಿ ಕಾರ್ಯಾಚರಿಸುವ ಯಾವುದೇ ಸಂಘಟನೆಗಳಿಗೆ ಈ ಮೊದಲೇ ತಿಳಿದಿದ್ದರೆ ಸ್ಥಳಿಯಾಡಳಿತವನ್ನು ಕಾಯದೆ ಯಾವಾಗಲೂ ನೀರಿನ ಟ್ಯಾಂಕ್‌ ನಿರ್ಮಾಣ ಆಗುತ್ತಿತ್ತು ಎಂದು ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

ನೀರಿನ ವ್ಯವಸ್ಥೆ: ಚರ್ಚೆ
ಪೇಟೆಯಲ್ಲಿ ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎನ್ನುವ ವಿಚಾರ ಮನವರಿಕೆಯಾಗಿದೆ. ಈಗಾಗಲೇ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣವಾಗಿದ್ದರೂ, ನೀರು ಪೂರೈಕೆಗೆ ಕಂಪೆನಿ ವಿಳಂಬ ನೀತಿ ಅನುಸರಿಸುತ್ತಿದೆ. ಯಾವುದೇ ಸಂಘ ಸಂಸ್ಥೆಗಳು ಟ್ಯಾಂಕ್‌ ಅಳವಡಿಕೆಗೆ ಮುಂದಾದರೆ ಗ್ರಾಮ ಪಂಚಾಯತ್‌ನಿಂದ ಉಚಿತ ನೀರು ಸರಬರಾಜು ಮಾಡಲಾಗುವುದು. ಅಲ್ಲದೆ ಈ ಬಗ್ಗೆ ಮುಂದಿನ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. 
– ಸುನಂದಾ ಬಾರ್ಕುಲಿ
ಆಲಂಕಾರು ಗ್ರಾ.ಪಂ. ಅಧ್ಯಕ್ಷೆ 

ಸದಾನಂದ ಆಲಂಕಾರು

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.