ಆಲಂಕಾರು ಪೇಟೆ: ದಿನನಿತ್ಯ ಟ್ರಾಫಿಕ್‌ ಜಾಮ್‌!


Team Udayavani, Jan 19, 2019, 5:11 AM IST

19-january-2.jpg

ಆಲಂಕಾರು : ಹೋಬಳಿ ಕೇಂದ್ರ ವಾಗಿ ಬೆಳೆಯುತ್ತಿರುವ ಆಲಂಕಾರು ಪೇಟೆ ಯಲ್ಲಿ ಇದೀಗ ದಿನನಿತ್ಯವೂ ಟ್ರಾಫಿಕ್‌ ಜಾಮ್‌ ಸಮಸ್ಯೆ ಎದುರಾಗಿದೆ. ಶಾಂತಿ ಮೊಗರು ಕುಮಾರಧಾರಾ ನೂತನ ಸೇತುವೆ ಸಂಚಾರಕ್ಕೆ ಮುಕ್ತವಾದ ಬಳಿಕ ಆಲಂಕಾರನ್ನು ಸಂಪರ್ಕಿಸುವ ವಾಹನಗಳ ಸಂಖ್ಯೆ ಗಣನೀ ಯವಾಗಿ ಹೆಚ್ಚಾಗಿದೆ. ಈ ಕಾರಣದಿಂದ ಆಲಂಕಾರು ಪೇಟೆಯಲ್ಲಿ ನಿತ್ಯವೂ ಟ್ರಾಫಿಕ್‌ ಸಮಸ್ಯೆ ಉದ್ಭವಿಸಿದೆ.

ಕಷ್ಟಪಡುತ್ತಿರುವ ವಿದ್ಯಾರ್ಥಿಗಳು
ತೀರಾ ಗ್ರಾಮೀಣ ಪ್ರದೇಶವಾದರೂ ಬೆಳೆಯುತ್ತಿರುವ ಪಟ್ಟಣವಾಗಿರುವುದರಿಂದ ಈಗಾಗಲೇ ದೂರದ ಊರುಗಳಿಂದ ಈ ಭಾಗದಲ್ಲಿರುವ ವಿದ್ಯಾ ಸಂಸ್ಥೆಗಳಿಗೆ ವಿದ್ಯಾರ್ಥಿಗಳು ವಿದ್ಯಾರ್ಜನೆಗೆ ಬರುತ್ತಿ ದ್ದಾರೆ. ಹೆಚ್ಚಾಗಿ ಬಸ್ಸನ್ನು ಆಶ್ರಯಿಸಿಯೇ ಆಲಂಕಾರಿಗೆ ಬರುತ್ತಾರೆ. ಆದರೆ ಬೆಳಗ್ಗೆ ಮತ್ತು ಸಂಜೆ ವೇಳೆ ಉಂಟಾಗುವ ಟ್ರಾಫಿಕ್‌ ಜಾಮ್‌ನಿಂದ ಮಕ್ಕಳಿಗೆ ತೊಂದರೆ ಯುಂಟಾಗಿದೆ. ಜತೆಗೆ ಪುಟ್ಪಾತ್‌ ಗಳನ್ನು ಕೆಲವೊಂದು ಅಂಗಡಿ ವ್ಯಾಪಾರ ಸ್ಥರು ಆಕ್ರಮಿಸಿಕೊಂಡು ತರಕಾರಿ ಬುಟ್ಟಿ ಗಳನ್ನು ಇಟ್ಟಿರುವುದರಿಂದ ಶಾಲೆ ಬಿಡುವ ಸಂಧರ್ಭ ವಿದ್ಯಾರ್ಥಿಗಳು, ಸಾರ್ವಜನಿಕರು ರಸ್ತೆಯಲ್ಲೇ ನಡೆದಾಡು ವಂತಾಗಿದೆ ಎನ್ನುವುದು ಗ್ರಾಮಸ್ಥರ ಆರೋಪ.

ನೋ-ಪಾರ್ಕಿಂಗ್‌: ಡಿಸಿ ಆದೇಶ ಬೇಕು
ಆಲಂಕಾರು ಪೇಟೆಯಲ್ಲಿ ಉಂಟಾಗು ತ್ತಿರುವ ಸಮಸ್ಯೆಗೆ ಸ್ಥಳೀಯಾಡಳಿತ ಈಗಾಗಲೇ ನೋ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಜ್ಜಾಗಿದೆ. ಇದಕ್ಕೆ ಕಾನೂನಿನ ತೊಡಕಿದೆ. ಗ್ರಾಮೀಣ ಪ್ರದೇಶದಲ್ಲಿಯೂ ನೋ- ಪಾರ್ಕಿಂಗ್‌ ವ್ಯವಸ್ಥೆ ಜಾರಿಗೊಳಿಸ ಬೇಕಾದರೆ ಸ್ಥಳೀಯಾಡಳಿತವು ತನ್ನ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಿ ಅದನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ಅವರಿಂದ ಆದೇಶ ಪಡೆದುಕೊಳ್ಳಬೇಕು. ಅನಂತರ ನೋ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಪೊಲೀಸ್‌ ಇಲಾಖೆ ಸಹಕಾರ ನೀಡುತ್ತದೆ. ಈ ರೀತಿಯ ಕಾನೂನಿನ ತೊಡಕಿರುವುದರಿಂದಲೇ ಆಲಂಕಾರು ಗ್ರಾ.ಪಂ.ನ ಆಡಳಿತ ಮಂಡಳಿ ನಿರ್ಣಯಿಸಿರುವ ನೋ-ಪಾರ್ಕಿಂಗ್‌ ವ್ಯವಸ್ಥೆ ಯನ್ನು ಜಾರಿಗೊಳಿಸುವಲ್ಲಿ ವಿಳಂಬ ವಾಗಿದೆ. ಈ ಬಗ್ಗೆ ಗ್ರಾ.ಪಂ. ತುರ್ತು ಸಾಮಾನ್ಯ ಸಭೆ ನಡೆಸಿದ್ದು, ಜಿಲ್ಲಾಧಿಕಾರಿ ಗಳಿಗೆ ನಿರ್ಣಯದ ಪ್ರತಿಯನ್ನು ಕಳುಹಿಸಿ ಕೊಟ್ಟಿದೆ. ಕೆಲವೇ ದಿನಗಳಲ್ಲಿ ಜಿಲ್ಲಾಧಿ ಕಾರಿಗಳಿಂದ ಪರವಾನಿಗೆ ಆದೇಶ ಬರುವ ನಿರೀಕ್ಷೆಯಲ್ಲಿದೆ.

ಮುಳುವಾಗುತ್ತಿದೆ ಅಶಿಸ್ತಿನ ಪಾರ್ಕಿಂಗ್‌
ಅಂಗಡಿ ಮುಂಗಟ್ಟುಗಳು ಸಹಿತ ಬಸ್‌ ನಿಲ್ದಾಣದ ಸುತ್ತಮುತ್ತ ಎಲ್ಲೆಂದರಲ್ಲಿ ವಾಹನ ಗಳನ್ನು ಬೇಕಾಬಿಟ್ಟಿ ನಿಲ್ಲಿಸುತ್ತಿರುವುದೇ ಟ್ರಾಫಿಕ್‌ ಜಾಮ್‌ಗೆ ಮೂಲ ಕಾರಣವಾಗಿದೆ.

ಮುಖ್ಯವಾಗಿ ಅಂಗಡಿ ಮಾಲಕರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಾಗಿದೆ. ತಮ್ಮ ವಾಹನಗಳನ್ನು ಅಂಗಡಿ ಮುಂಭಾಗದಲ್ಲೇ ಬೆಳಗ್ಗೆಯಿಂದ ರಾತ್ರಿಯವರೆಗೆ ಪಾರ್ಕಿಂಗ್‌ ಮಾಡುವುದನ್ನು ನಿಲ್ಲಿಸಿ ಅನತಿ ದೂರದಲ್ಲಿ ಪಾರ್ಕಿಂಗ್‌ಗೆ ಅವಕಾಶವಿರುವ ಜಾಗದಲ್ಲಿ ನಿಲುಗಡೆ ಮಾಡಬೇಕು. ಈ ಮೂಲಕ ಗ್ರಾಹಕರಿಗೆ ತಮ್ಮ ಅಂಗಡಿ ಮುಂಭಾಗದಲ್ಲಿ ಪಾರ್ಕಿಂಗ್‌ಗೆ ಅವಕಾಶ ಮಾಡಿಕೊಟ್ಟು ವಾಹನ ದಟ್ಟನೆಯನ್ನು ನಿಯಂತ್ರಿಸಲು ಸಹಕರಿಸಬೇಕು ಎಂಬ ಆಗ್ರಹವೂ ವ್ಯಕ್ತವಾಗಿದೆ.

ಬಾರಿಕೇಡ್‌ ಅಳವಡಿಕೆಗೆ ಚಿಂತನೆ
ಆಲಂಕಾರು ಶಾಂತಿಮೊಗರು ರಸ್ತೆ ಬದಿಯಲ್ಲಿ ಎರಡು ವಿದ್ಯಾ ಸಂಸ್ಥೆಗಳಿದ್ದು, ವಿದ್ಯಾರ್ಥಿಗಳ ಸುರಕ್ಷತೆಗಾಗಿ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಬಾರಿಕೇಡ್‌ಗಳನ್ನು ಅಳವಡಿಸಲು ತಯಾರಿ ನಡೆಸಿಕೊಂಡಿದೆ. ಗ್ರಾ.ಪಂ.ನಿಂದ ಹಸಿರು ನಿಶಾನೆ ಸಿಕ್ಕಿದ ತತ್‌ಕ್ಷಣ ಅಳವಡಿಸಲಾಗುತ್ತದೆ. ಆಲಂಕಾರು ಹಿಂದೂ ಜಾಗರಣ ವೇದಿಕೆಯು ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಗೆ ಎರಡು ಬಾರಿಕೇಡ್‌ಗಳನ್ನು ಅಳವಡಿಸಲು ಚಿಂತನೆ ನಡೆಸುತ್ತಿದೆ.

ಪೇಟೆಯಲ್ಲಿ ಒನ್‌ ವೇ
ಟ್ರಾಫಿಕ್‌ ಸಮಸ್ಯೆ ಆಲಂಕಾರಿನಲ್ಲಿ ಹೆಚ್ಚಾಗುತ್ತಿದೆ. ಈ ಬಗ್ಗೆ ಸಾಕಷ್ಟು ದೂರುಗಳು ಸಾರ್ವಜನಿಕರಿಂದ ಬಂದಿವೆ. ಮುಖ್ಯವಾಗಿ ಬೆಳಗ್ಗೆ ಹಾಗೂ ಸಂಜೆ ಈ ಸಮಸ್ಯೆ ವಿದ್ಯಾರ್ಥಿಗಳನ್ನು ಹಾಗೂ ಸಾರ್ವಜನಿಕರನ್ನು ಸಾಕಷ್ಟು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಆಲಂಕಾರು ಪೇಟೆಯಲ್ಲಿ ಹಾದು ಹೋಗುವ ರಸ್ತೆಯನ್ನು ಒನ್‌ ವೇ (ಏಕಮುಖ ಸಂಚಾರ) ಮಾಡಲಾಗುವುದು. ಘನ ವಾಹನಗಳು ಈ ರಸ್ತೆಯಲ್ಲಿ ಸಂಚರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು. ಘನ ವಾಹನಗಳಿಗೆ ಸಿ.ಎ. ಬ್ಯಾಂಕ್‌ನ ಬಳಿಯಿಂದ ಗ್ರಾ.ಪಂ. ಎದುರಿನಲ್ಲಿ ಹಾದು ಹೋಗುವ ರಸ್ತೆಯಲ್ಲಿ ಮಾತ್ರ ಸಂಚರಿಸಲು ಅವಕಾಶ ನೀಡಲಾಗುವುದು.
-ಸದಾನಂದ ಆಚಾರ್ಯ,
ಗ್ರಾ.ಪಂ. ಉಪಾಧ್ಯಕ್ಷರು

ಸದಾನಂದ ಆಲಂಕಾರು

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.