ಸ್ವಚ್ಛ ಪುತ್ತೂರು ನಿರ್ಮಾಣಕ್ಕೆ  ಸರ್ವ ಪ್ರಯತ್ನ


Team Udayavani, Dec 13, 2018, 11:38 AM IST

13-december-5.gif

ನಗರ: ಬಗೆದಷ್ಟು ಹೊರಗೆ ಬರುತ್ತಿರುವ ತ್ಯಾಜ್ಯಗಳ ರಾಶಿಗೆ ಮುಕ್ತಿ ನೀಡುವುದು ಸವಾಲೇ ಸರಿ. ಸ್ವಚ್ಛತಾ ಕಾರ್ಯಕ್ರಮ, ತ್ಯಾಜ್ಯ ವಿಲೇವಾರಿ ಹೊರತುಪಡಿಸಿ, ಸಾರ್ವಜನಿಕರು ಜಾಗೃತರಾಗದೇ ಹೋದರೆ ಸ್ವಚ್ಛ ಪುತ್ತೂರು ಕನ್ನಡಿಯೊಳಗಿನ ಗಂಟಾದೀತು.

ಕೆಲ ಸಮಯಗಳ ಹಿಂದೆ ಪುತ್ತೂರು ಪೇಟೆಯ ಹಲವು ಕಡೆಗಳಲ್ಲಿ ತ್ಯಾಜ್ಯಗಳ ರಾಶಿಯೇ ಕಂಡುಬರುತ್ತಿತ್ತು. ಆಗಿನ ಸ್ಥಳೀಯಾಡಳಿತ ತ್ಯಾಜ್ಯ ಸಂಗ್ರಹಕ್ಕಾಗಿ ಅಲ್ಲಲ್ಲಿ ಇಟ್ಟಿದ್ದ ಡಬ್ಬಗಳು ತುಂಬಿ ತುಳುಕುತ್ತಿದ್ದವು. ಇದರ ವಿಲೇವಾರಿಗೆ ಏನೆಲ್ಲ ಕಸರತ್ತು ನಡೆಸಿದರೂ ಯಾವೊಂದು ಕೆಲಸವೂ ಫಲಪ್ರದವಾಗಲಿಲ್ಲ. ಕೊನೆಗೆ ತ್ಯಾಜ್ಯ ಡಬ್ಬಗಳನ್ನೇ ತೆಗೆದು ಬದಿಗಿರಿಸಲಾಯಿತು. ಡಬ್ಬ ಇಲ್ಲದಿದ್ದರೂ ತ್ಯಾಜ್ಯ ಎಸೆದು ರೂಢಿಯಾಗಿದ್ದ ಜನರು ಮತ್ತೆ ಅಲ್ಲಿಯೇ ತ್ಯಾಜ್ಯ ಸುರಿಯಲಾರಂಭಿಸಿದರು. ಇದನ್ನು ತಡೆಗಟ್ಟಲು ಎಚ್ಚರಿಕೆ ಫಲಕ ಹಾಕುವುದು ಅನಿವಾರ್ಯವಾಯಿತು.

ಸೂಚನೆ ಕೊಟ್ಟರೂ ಕ್ಯಾರೇ ಇಲ್ಲ
ಸದ್ಯದ ಪರಿಸ್ಥಿತಿಯಲ್ಲಿ ಪುತ್ತೂರು ಪೇಟೆಯ ಅಲ್ಲಲ್ಲಿ ಎಚ್ಚರಿಕೆ ಫಲಕಗಳು ರಾರಾಜಿಸುತ್ತಿವೆ. ಆದರೆ ತ್ಯಾಜ್ಯ ರಾಶಿ ಹಾಕುವ ಪ್ರಸಂಗ ಹೆಚ್ಚುತ್ತಲೇ ಇದೆ. ಇದಕ್ಕೆ ಕಡಿವಾಣ ಹಾಕಲು ಮನೆ, ಅಂಗಡಿ ಬಾಗಿಲಿನಿಂದ ತ್ಯಾಜ್ಯ ಸಂಗ್ರಹಿಸುವ ಪ್ರಕ್ರಿಯೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಜಾರಿಯಾಗಿಲ್ಲ.

ದಿನ ಬಿಟ್ಟು ದಿನ ತ್ಯಾಜ್ಯ ಸಂಗ್ರಹ ಮಾಡಲಾಗುತ್ತಿದೆ. ಇದಕ್ಕೆ ಪೂರಕವಾಗಿ ತ್ಯಾಜ್ಯ ವಿಂಗಡಣೆಗಾಗಿ ತಂದಿರಿಸಿದ ಬಕೆಟ್‌ಗಳನ್ನು ಎಲ್ಲ ಮನೆಗಳಿಗೆ ಹಂಚುವ ಕೆಲಸ ಇನ್ನೂ ಪೂರ್ಣ ಪ್ರಮಾಣದಲ್ಲಿ ನಡೆದಿಲ್ಲ.

ಕೆಲ ವಾರ್ಡ್‌ಗಳಲ್ಲಿ ತ್ಯಾಜ್ಯ ಸಮಸ್ಯೆ ಹೆಚ್ಚುತ್ತಿದ್ದಂತೆ, ಸ್ಥಳೀಯ ವಾರ್ಡ್‌ ಸದಸ್ಯರಿಗೆ ದೂರು ನೀಡಿದ್ದಾರೆ. ತತ್‌ ಕ್ಷಣ ಅಧಿಕಾರಿಗಳನ್ನು ಸಂಪರ್ಕಿಸಿ, ನೇರವಾಗಿ ತ್ಯಾಜ್ಯ ವಿಂಗಡಣೆಯ ಬಕೆಟ್‌ ಹಸ್ತಾಂತರಿಸುವ ಕೆಲಸ ನಡೆದಿದೆ. ಇನ್ನೂ ಕೆಲ ವಾರ್ಡ್‌ಗಳಲ್ಲಿ ಇದನ್ನೇ ಅನುಕರಿಸಲಾಗಿದೆ. ಅಂದರೆ ವಾರ್ಡ್‌ ಸದಸ್ಯರೇ ಮುಂದಾಗಿ ಬಕೆಟ್‌ಗಳನ್ನು ವಿತರಿಸುತ್ತಿರುವುದು ಕಂಡುಬರುತ್ತಿದೆ.

ನಾಗರಿಕರಿಗೆ ಹಂಚಲೆಂದು ಪುತ್ತೂರು ನಗರಸಭೆ ತಂದಿರಿಸಿದ 11 ಸಾವಿರ ಬಕೆಟ್‌ ಗಳ ಪೈಕಿ 6 ಸಾವಿರದಷ್ಟು ಬಕೆಟ್‌ಗಳನ್ನು ವಿತರಿಸಲಾಗಿದೆ. ಉಳಿದ ಬಕೆಟ್‌ಗಳು ಗೋದಾಮಿನಲ್ಲೇ ರಾಶಿ ಬಿದ್ದುಕೊಂಡಿವೆ.

ನಾಗರಿಕರು ಎಚ್ಚೆತ್ತುಕೊಳ್ಳಿ
ಮನೆ ಹಾಗೂ ಅಂಗಡಿಗಳಿಂದ ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ ಮಾಡಿದ ಮಾತ್ರಕ್ಕೆ ಪುತ್ತೂರು ಸ್ವಚ್ಛ ಆಗುತ್ತದೆ ಎಂದು ಭಾವಿಸಿದರೆ ತಪ್ಪಾದೀತು. ಯಾಕೆಂದರೆ ಪುತ್ತೂರಿನ ಅಲ್ಲಲ್ಲಿ ಕಾಣಸಿಗುವ ತ್ಯಾಜ್ಯಕ್ಕೆ ನಾಗರಿಕರು ಕಾರಣ. ಅಲ್ಲಲ್ಲಿ ತ್ಯಾಜ್ಯ ಎಸೆಯುತ್ತಿರುವುದು, ಶುಚಿತ್ವಕ್ಕೆ ಗಮನ ಕೊಡದೇ ಇರುವುದು ಇತ್ಯಾದಿ. ಇದರಿಂದಾಗಿ ದಿನನಿತ್ಯ ಎಲ್ಲೆಂದರಲ್ಲಿ ತ್ಯಾಜ್ಯ ಕಾಣಸಿಗುತ್ತದೆ. ಇದಕ್ಕೆ ಪೂರ್ಣವಿರಾಮ ಹಾಕಬೇಕಾದರೆ ಸ್ವತಃ ಜನರಿಗೇ ಅರಿವು ಮೂಡಬೇಕಷ್ಟೇ.

ಎಸೆಯುವುದು ಕಡಿಮೆಯಾಗಿಲ್ಲ
ಪೇಟೆಯ ಆಯಕಟ್ಟಿನ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವ ಪ್ರಕರಣಗಳು ನಡೆಯುತ್ತಿವೆ. ಪುತ್ತೂರು- ಉಪ್ಪಿನಂಗಡಿ ರಸ್ತೆ, ಪುತ್ತೂರು ಮುಖ್ಯರಸ್ತೆಯ ಅಲ್ಲಲ್ಲಿ ತ್ಯಾಜ್ಯ ರಾಶಿ ಕಂಡುಬರುತ್ತಿದೆ. ಇಂತಹ ವಾತಾವರಣ ದೂರ ಆಗಬೇಕಿದೆ.

ಉಳಿದ ಬಕೆಟ್‌ ವಿತರಿಸುತ್ತೇವೆ
ತ್ಯಾಜ್ಯ ವಿಲೇವಾರಿ ನಡೆಯುತ್ತಿದೆ. ಗುತ್ತಿಗೆ ವಹಿಸಿಕೊಂಡ ಸಂಸ್ಥೆ ಕೆಲಸ ನಿರ್ವಹಿಸುತ್ತಿದೆ. ಕಸ ವಿಂಗಡಣೆ ಮಾಡಿ ಕೊಡಲು ಈಗಾಗಲೇ ಸುಮಾರು 6 ಸಾವಿರದಷ್ಟು ಬಕೆಟ್‌ಗಳನ್ನು ವಿತರಿಸಲಾಗಿದೆ. ಉಳಿದದ್ದನ್ನು ವಿತರಿಸುತ್ತೇವೆ.
– ರೂಪಾ ಶೆಟ್ಟಿ, ಪೌರಾಯುಕ್ತೆ, ಪುತ್ತೂರು ನಗರಸಭೆ

ವಿಶೇಷ ವರದಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.