ಪಿಯುಸಿ ವಿದ್ಯಾರ್ಥಿಗಳಿಗೆ ಆಲ್‌ ದಿ ಬೆಸ್ಟ್ 


Team Udayavani, Mar 1, 2018, 10:36 AM IST

1-Mar-3.jpg

ಮಹಾನಗರ: ರಾಜ್ಯದ ಪದವಿ ಪೂರ್ವ ಶಿಕ್ಷಣ ಇಲಾಖೆಯು ರಾಜ್ಯಾದ್ಯಂತ ಮಾ. 1ರಿಂದ ಎ. 17ರ ವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ನಡೆಸಲಿದ್ದು, ಜಿಲ್ಲೆಯ ಒಟ್ಟು 54 ಪರೀಕ್ಷಾ ಕೇಂದ್ರಗಳಲ್ಲಿ 38,633 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತ ಸಂಪೂ ರ್ಣ ಸಜ್ಜಾಗಿದ್ದು, ಈಗಾಗಲೇ ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಿಗೂ ಸಿಸಿ ಕೆಮರಾ ಅಳವಡಿಸಲಾಗಿದೆ. ಜತೆಗೆ ಎಲ್ಲ ಕೇಂದ್ರಗಳ ಸುತ್ತಲೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪ.ಪೂ. ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಸಂಬಂಧಪಟ್ಟ ಪರೀಕ್ಷಾ ಕೇಂದ್ರಗಳ ದಾಖಲೆಗಳನ್ನು ಈಗಾಗಲೇ ನಿಯೋಜಿತ ಅಧಿಕಾರಿಗಳು ಪಡೆದುಕೊಂಡಿದ್ದು, ಎಲ್ಲ ಕೇಂದ್ರಗಳಲ್ಲೂ ಸೂಕ್ತ ರೀತಿಯಲ್ಲಿ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ.

ಒಟ್ಟು 38,633 ವಿದ್ಯಾರ್ಥಿಗಳು
ಜಿಲ್ಲೆಯಲ್ಲಿ ಒಟ್ಟು 19,567 ಗಂಡು ಮಕ್ಕಳು ಹಾಗೂ 19,066 ಹೆಣ್ಣು ಮಕ್ಕಳು ಸೇರಿ ಒಟ್ಟು 38,633 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 34,863 ರೆಗ್ಯುಲರ್‌ ವಿದ್ಯಾರ್ಥಿಗಳು, 1,400 ಮಂದಿ ರಿಪೀಟರ್‌, 2,370 ಮಂದಿ ಖಾಸಗಿಯಾಗಿ ಪರೀಕ್ಷೆ ಬರೆಯಲಿದ್ದಾರೆ. ಕಲಾ ವಿಭಾಗದಲ್ಲಿ 4,901, ವಾಣಿಜ್ಯ ವಿಭಾಗದಲ್ಲಿ 17,045 ಹಾಗೂ ವಿಜ್ಞಾನ ವಿಭಾಗದಲ್ಲಿ 16,687 ವಿದ್ಯಾರ್ಥಿಗಳಿದ್ದಾರೆ. 

ಒಟ್ಟು 54 ಕೇಂದ್ರಗಳು
ಜಿಲ್ಲೆಯಲ್ಲಿ ಒಟ್ಟು 54 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ತಾಲೂಕುವಾರು ನೋಡುವುದಾದರೆ ಮಂಗಳೂರು 25, ಮೂಡಬಿದಿರೆ 5, ಬಂಟ್ವಾಳ 7, ಪುತ್ತೂರು 9, ಬೆಳ್ತಂಗಡಿ 5 ಹಾಗೂ ಸುಳ್ಯದ 3 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತದೆ.

ಹೊಸ ಸೇರ್ಪಡೆ
ಈ ಬಾರಿ ಮೂಡಬಿದಿರೆ ಎಕ್ಸಲೆಂಟ್‌ ಪ.ಪೂ. ಕಾಲೇಜು, ವಾಮಂಜೂರು ಸಂತ ರೇಮಂಡ್ಸ್‌ ಪ.ಪೂ. ಕಾಲೇಜು, ಬೆಳ್ತಂಗಡಿ ಗುರುದೇವ ಪ.ಪೂ.ಕಾಲೇಜುಹೊಸದಾಗಿ ಸೇರ್ಪಡೆಗೊಂಡ ಮೂರು ಪರೀಕ್ಷಾ ಕೇಂದ್ರಗಳಾಗಿವೆ.

ಗೊಂದಲ ಬಿಟ್ಟು ಪರೀಕ್ಷೆ ಬರೆಯಿರಿ

.ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ತೆರಳುವ ವೇಳೆ ಗೊಂದಲಗಳಿಗೆ ಆಸ್ಪದ ಕೊಡಬೇಡಿ. ಹಾಲ್‌ ಟಿಕೆಟ್‌ ಮರೆಯದಿರಿ.

.ಪ್ರಸ್ತುತ ಪರೀಕ್ಷೆಗಳು ಆರಂಭಗೊಂಡಿದ್ದು, ಕೊನೆಯ ಅವಧಿಯಲ್ಲಿ ಗೊಂದಲದಿಂದ ಎಲ್ಲವೂ ಮರೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ ಈ ರೀತಿ ಗೊಂದಲಕ್ಕೊಳಗಾಗಿ ನಿದ್ದೆ ಬಿಟ್ಟು ಓದುವುದು ಸರಿಯಲ್ಲ. ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ.

. ಬೆಳಗ್ಗೆ ಬೇಗ ಎದ್ದು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ. ಪರೀಕ್ಷೆಯು 10.15ಕ್ಕೆ ಆರಂಭಗೊಳ್ಳಲಿದ್ದು, ನಿಗದಿತ ಸಮಯಕ್ಕೆ ಮುಂಚಿತವಾಗಿ ಪರೀಕ್ಷಾ ಕೇಂದ್ರವನ್ನು ತಲುಪಿ. ಯಾವುದೇ ಕಾರಣಕ್ಕೂ ಪರೀಕ್ಷಾ ಸಮಯದಲ್ಲಿ ಮೊಬೈಲ್‌ ಬಳಕೆ ಬೇಡಿ.

. ಪೋಷಕರು ವಿದ್ಯಾರ್ಥಿಗಳಿಗೆ ವಿನಾಕಾರಣ ಕಿರುಕುಳ ನೀಡದೆ ಓದುವಂತೆ ಒತ್ತಡ ಹೇರಬಾರದು.ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾದರೆ ಪೋಷಕರು ಅವರನ್ನು ಮಾನಸಿಕ ತಜ್ಞರಲ್ಲಿ ತೋರಿಸುವುದು ಅಗತ್ಯ.

.ಪರೀಕ್ಷಾ ಸಮಯದಲ್ಲಿ ಮೆಡಿಟೇಶನ್‌ ಮಾಡುವ ಅಭ್ಯಾಸ ಹೊಂದಿರಬೇಕು. ಇದರಿಂದ ಮನಸ್ಸು ನಿರ್ಮಲವಾಗುವ ಜತೆಗೆ ಓದಿದ್ದು ಅರ್ಥವಾಗುತ್ತದೆ. ಪೋಷಕರು ಪರೀಕ್ಷಾ ದಿನಗಳು ಹತ್ತಿರ ಬಂದಾಗ ಇಂತಿಷ್ಟೇ ಅಂಕ ತೆಗೆಯಬೇಕು ಎಂಬ ಟಾರ್ಗೆಟ್‌ ಕೂಡ ನೀಡಬಾರದು.

. ವಿದ್ಯಾರ್ಥಿಗಳು ಹೆಚ್ಚು ಒತ್ತಡಕ್ಕೆ ಒಳಗಾದರೆ ಎದೆಬಡಿತ ಜಾಸ್ತಿಯಾಗುವ ಸಾಧ್ಯತೆ ಇರುತ್ತದೆ. ಇದರಿಂದ ಪದೇ ಪದೇ ಶೌಚಕ್ಕೆ ತೆರಳುವ ಸಮಸ್ಯೆ ಕಂಡುಬರುತ್ತದೆ. ಈ ಕುರಿತು ಹೆತ್ತವರು ಎಚ್ಚರಿಕೆಯಿಂದಿರುವುದು ಅಗತ್ಯ. 

ಪೂರ್ಣ ರೀತಿಯಲ್ಲಿ ಸಜ್ಜು
ಪಿಯುಸಿ ಪರೀಕ್ಷೆ ಆರಂಭಗೊಳ್ಳುತ್ತಿದ್ದು, 54 ಕೇಂದ್ರಗಳಲ್ಲಿ ನಡೆಯುತ್ತಿದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷೆ ಎದುರಿಸಲು ಇಲಾಖೆ ಪೂರ್ಣ ರೀತಿಯಲ್ಲಿ ಸಜ್ಜಾಗಿದೆ. ಜಿಲ್ಲಾಧಿಕಾರಿಗಳ ಮಾರ್ಗದರ್ಶದಂತೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬಿಇಒಗಳು, ಹಿರಿಯ ಪ್ರಾಂಶುಪಾಲರು, ತಹಶೀಲ್ದಾರ್‌ಗಳು ಪರೀಕ್ಷೆಯ ಜವಾಬ್ದಾರಿ ನೋಡಿಕೊಳ್ಳಲಿದ್ದಾರೆ.
ತಿಮ್ಮಯ್ಯ, ಉಪನಿರ್ದೇಶಕರು,
   ಪ.ಪೂ.ಶಿಕ್ಷಣ ಇಲಾಖೆ, ದ.ಕ.

ಆತ್ಮವಿಶ್ವಾಸ ತುಂಬಿ
ಪರೀಕ್ಷಾ ಸಮಯದಲ್ಲಿ 6 ಗಂಟೆಗಳ ನಿದ್ದೆ ಅಗತ್ಯವಾಗಿ ಬೇಕಿರುತ್ತದೆ. ಆಹಾರದ ಕುರಿತು ಗಮನಹರಿಸುವುದು ಅಗತ್ಯ. ಹೆತ್ತವರು ಯಾವುದೇ ಕಾರಣಕ್ಕೂ ಮಕ್ಕಳ ಮಾನಸಿಕತೆಯನ್ನು ಕುಗ್ಗಿಸದೆ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬುವ ಕಾರ್ಯ ಮಾಡಬೇಕು. ಯೋಗ, ಧ್ಯಾನ ಮಾಡಿದರೆ ಉತ್ತಮ. ನಿರಂತರವಾಗಿ ಓದುವ ವೇಳೆ 5 ನಿಮಿಷ ಬಿಡುವು ಪಡೆಯುವುದು ಉತ್ತಮ.
ಡಾ| ಕೇಶವ ಪೈ ಕೆ.
  ಮುಖ್ಯಸ್ಥರು, ಮನೋರೋಗ ವಿಭಾಗ
  ಕೆಎಂಸಿ ಮಂಗಳೂರು

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.