ಕುಕ್ಕೆ ದೇಗುಲದ ಪ್ರಮುಖ ಹುದ್ದೆಗಳೆಲ್ಲ ಖಾಲಿ

ಸಿಇಒ ಇಲ್ಲ, ಇಒ ಇಲ್ಲ, ಪ್ರಧಾನ ಅರ್ಚಕರು ಕೂಡ ಪ್ರಭಾರ!

Team Udayavani, Oct 24, 2019, 5:33 AM IST

q-32

ಸುಬ್ರಹ್ಮಣ್ಯ: ಪ್ರವಾಸಿಗರ ಮೊದಲ ಆದ್ಯತೆ ದೇಗುಲಗಳು. ಅವರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು, ಸಿಬಂದಿ ಅಗತ್ಯ. ಆದರೆ ರಾಜ್ಯದ ಪ್ರಮುಖ ದೇವಸ್ಥಾನಗಳ ಆಡಳಿತ ಮಂಡಳಿಯ ಪ್ರಮುಖ ಹುದ್ದೆಗಳೆಲ್ಲ ಖಾಲಿ ಬಿದ್ದಿವೆ. ಆದಾಯದಲ್ಲಿ ನಂಬರ್‌ ಒನ್‌ ದೇಗುಲ ಎನಿಸಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಂತೂ ಮುಖ್ಯಕಾರ್ಯ ನಿರ್ವಹಣಾಧಿಕಾರಿ, ಆಡಳಿತಾಧಿ ಕಾರಿ ಇಲ್ಲ; ಆಡಳಿತ ಸಮಿತಿಯೂ ಇಲ್ಲ. ಪ್ರಧಾನ ಅರ್ಚಕ ಹುದ್ದೆಯೂ ಪ್ರಭಾರ ನೆಲೆಯಲ್ಲಿದೆ!

ದೀಪಾವಳಿ ಸಮೀಪಿಸುತ್ತಿದೆ. ವಾರ್ಷಿಕ ಜಾತ್ರೆ ಮತ್ತು ಪರ್ವ ದಿನಗಳು ಆರಂಭಗೊಳ್ಳುತ್ತಿದ್ದು, ಭಕ್ತರ ದಂಡು ದೇಗುಲಗಳಿಗೆ ಹರಿದು ಬರಲಾರಂಭಿಸಿದೆ. ಇಂತಹ ಸಂದರ್ಭದಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ ರಾಜ್ಯದ ಬಹುತೇಕ ದೇಗುಲಗಳಿಗೆ ಕಾರ್ಯನಿರ್ವಹಣಾಧಿಕಾರಿಗಳೇ ಇಲ್ಲ. ಕೆಲವೆಡೆ 3ರಿಂದ 5 ದೇಗುಲಗಳಿಗೆ ಒಬ್ಬರೇ ಅಧಿಕಾರಿಯಿದ್ದು, ಎರಡೆರಡು ಕಡೆ ಸಮರ್ಪಕವಾಗಿ ಕೆಲಸ ನಿರ್ವಹಿಸಲಾಗುತ್ತಿಲ್ಲ.
ರಾಜ್ಯದಲ್ಲಿ ಇಲಾಖೆ ವ್ಯಾಪ್ತಿಯಲ್ಲಿ 36 ಸಾವಿರ ದೇಗುಲ, ಛತ್ರಗಳಿವೆ. ಕೇವಲ 200 ಆಸುಪಾಸಿನ ಸಂಖ್ಯೆಯಲ್ಲಿ ಇರುವ ಕಾರ್ಯನಿರ್ವಾಹಕ ಅಧಿಕಾರಿಗಳು ವಿವಿಧ
ದೇಗುಲಗಳ ಜವಾಬ್ದಾರಿ ನಿರ್ವಹಿಸು ತ್ತಿದ್ದಾರೆ. ಕೆಲವು ದೇಗುಲಗಳಲ್ಲಿ ಅಧಿಕಾರಿಗಳಿದ್ದರೂ ಬೇರೆ ಇಲಾಖೆ ಯಿಂದ ಎರವಲು ಬಂದವರು. ಭಡ್ತಿ, ವರ್ಗಾವಣೆಗಳಿಂದಾಗಿ ಹುದ್ದೆ ಗಳು ಖಾಲಿ ಬಿದ್ದಿವೆ. ಕೆಲವರು ಮಾತೃ ಇಲಾಖೆಯ ಜವಾಬ್ದಾರಿ ಜತೆಗೆ ಹೆಚ್ಚುವರಿಯಾಗಿ ಸಿಇಒ ಹುದ್ದೆಯನ್ನು ನಿರ್ವಹಿಸಬೇಕಾಗಿದೆ. ಇದರಿಂದ ದೇಗುಲಗಳ ಅಭಿವೃದ್ಧಿ ಕುಂಠಿತವಾಗಿದೆ. ಮುಜರಾಯಿ ಇಲಾಖೆಯ ಅವಧಿ ಮುಗಿದ ಇತರ ಎ, ಬಿ, ಸಿ  ಗ್ರೇಡ್‌ ದೇವಸ್ಥಾನಗಳಿಗೂ ನಾಮ ನಿರ್ದೇಶಿತ ಸದಸ್ಯರ ನೇಮಕವಾಗಿಲ್ಲ.

ಸಮಸ್ಯೆಗಳೇನು?
ಧಾರ್ಮಿಕ ದತ್ತಿ ಇಲಾಖೆಯ ದೇಗುಲಗಳಲ್ಲಿ ಕಾಲಕಾಲಕ್ಕೆ ನಡೆಯಬೇಕಾದ ಹುಂಡಿ ಹಣ ಎಣಿಕೆ, ರಥೋತ್ಸವ, ಅನ್ನದಾಸೋಹ, ಪ್ರಸಾದ ವಿನಿಯೋಗ, ಅಭಿವೃದ್ಧಿ ಕಾಮಗಾರಿ, ಗಣ್ಯರ ಭೇಟಿ ಸಂದರ್ಭ ವಹಿಸಬೇಕಾದ ಮುಂಜಾಗ್ರತ ಕ್ರಮಗಳಿಗೆಲ್ಲ ಸಿಇಒ ಹುದ್ದೆ ಖಾಲಿಯಾಗಿರುವುದರಿಂದ ಅನನುಕೂಲವಾಗುತ್ತಿದೆ. ಆಡಳಿತ ಸಮರ್ಪಕವಾಗಲು ಕಾರ್ಯನಿರ್ವಹಣಾಧಿಕಾರಿ ಅಗತ್ಯ. ಆ ಹುದ್ದೆ ಖಾಲಿ ಇರುವುದರಿಂದ ದೇವಸ್ಥಾನಗಳ ಚರಾಸ್ಥಿ, ಆಭರಣಗಳಿಗೆ ಭದ್ರತೆಯ ಕೊರತೆ ಕಂಡುಬರುತ್ತದೆ. ಹುಂಡಿ ಹಣ ಸಾರ್ವಜನಿಕ ಸೊತ್ತಾಗಿರುವುದರಿಂದ ಅದರ ರಕ್ಷಣೆಯ ಪ್ರಶ್ನೆಯೂ ಎದುರಾಗುತ್ತದೆ.

ಕುಕ್ಕೆ ದೇಗುಲಕ್ಕೆ ಸರಕಾರ ನೇಮಿಸಿದ್ದ ನಾಮನಿರ್ದೇಶಿತ ಸದಸ್ಯರ ಸಮಿತಿ ಅವಧಿ ಅ. 15ಕ್ಕೆ ಮುಗಿದಿದೆ. ಸಿಇಒ ರವೀಂದ್ರ ಎಂ.ಎಚ್‌. ಅವರು ನಂಜನಗೂಡಿಗೆ ವರ್ಗವಾಗಿದ್ದಾರೆ. ಪುತ್ತೂರಿನ ಎಸಿ ಇಲ್ಲಿನ ಆಡಳಿತಾಧಿಕಾರಿ. ಅವರ ವರ್ಗಾವಣೆಯಿಂದಾಗಿ ಈ ಹುದ್ದೆಯೂ ಖಾಲಿ ಇದೆ. ಡಿಸೆಂಬರ್‌ ಮೊದಲ ವಾರದಲ್ಲಿ ಚಂಪಾಷಷ್ಠಿ ಮಹೋತ್ಸವ ನಡೆಯಲಿದ್ದು, ಅಧಿಕಾರಿಗಳಿಲ್ಲದೆ ಸಿದ್ಧತೆಗೆ ತೊಡಕಾಗಿದೆ.

ಕುಕ್ಕೆ ದೇಗುಲಕ್ಕೆ ವಾರದೊಳಗೆ ತೆರಳಿ ಶಾಸಕರ ಸಮ್ಮುಖ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸುವೆ. ಸಿಇಒ ನಿಯೋಜನೆ ಸಹಿತ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವೆ.
– ಕೋಟ ಶ್ರೀನಿವಾಸ ಪೂಜಾರಿ, ಮುಜರಾಯಿ ಸಚಿವರು

– ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.