ವೆನ್ಲಾಕ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ
ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚನೆ
Team Udayavani, Oct 27, 2021, 6:19 AM IST
ಮಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ವೆನ್ಲಾಕ್ ಆಸ್ಪತ್ರೆಗೆ ಆಗಮಿಸಿ ಒಂದು ಗಂಟೆ ಕಾಲ ಕಾಯುವಂತೆ ಮಾಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತಂತೆ ಡಿಎಂಒ ಅವರು ಸಮಗ್ರ ತನಿಖೆ ನಡೆಸಿ 4 ಗಂಟೆಯೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಸೂಚನೆ ನೀಡಿದ್ದಾರೆ. ಶಾಸಕ ಡಿ. ವೇದವ್ಯಾಸ ಕಾಮತ್ ಕೂಡ ಮಂಗಳವಾರ ವೆನ್ಲಾಕ್ ಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕಾಸರಗೋಡು ಮೂಲದ ಮಹಿಳೆಯೊಬ್ಬರು ಉರಿಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದರು. ಸೋಮವಾರ ಏಕಾಏಕಿ ಉಸಿರಾಟದ ತೊಂದರೆ ಉಂಟಾಗಿತ್ತು. ಅಲ್ಲಿನ ಜಿಲ್ಲಾಸ್ಪತ್ರೆಗೆ ಹೋದಾಗ ಮಂಗಳೂರಿಗೆ ಕರೆದೊಯ್ಯುವಂತೆ ವೈದ್ಯರು ಸಲಹೆ ನೀಡಿದ್ದರು. ಅದರಂತೆ ಸಂಜೆ ವೆನ್ಲಾಕ್ ಗೆ ಬಂದಿದ್ದರು. ಅಗ ನಿರ್ಲಕ್ಷ್ಯ ತೋರಿದ ಸಿಬಂದಿ “ಐಸಿಯು ಖಾಲಿ ಇಲ್ಲ; ಹೊಸ ಬ್ಲಾಕ್ನಲ್ಲಿ ವಿಚಾರಿಸಿ’ ಎಂದರು ಎನ್ನಲಾಗಿದೆ.
ಹೊಸ ಬ್ಲಾಕ್ನಲ್ಲಿ 1 ಗಂಟೆ ಕಾದರೂ ಅಲ್ಲಿಯೂ ಐಸಿಯು ಖಾಲಿ ಇಲ್ಲ; ಬೇರೆ ಆಸ್ಪತ್ರೆಗೆ ಕರೆದೊಯ್ಯಿರಿ ಎನ್ನಲಾಗಿತ್ತು. ರೋಗಿಯ ಜತೆಗಿದ್ದ
ವರು ತರಾಟೆಗೆ ತೆಗೆದುಕೊಂಡ ಬಳಿಕ ದಾಖಲಿಸಿಕೊಂಡರೂ 1 ಗಂಟೆಯ ಬಳಿಕ ಮೃತಪಟ್ಟಿದ್ದರು. ಇದಕ್ಕೆ ಸಿಬಂದಿಯ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಲಾಗಿದೆ.”ಪತ್ನಿಗೆ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ವೆನ್ಲಾಕ್ ಗೆ ಕರೆತರಲಾಗಿತ್ತು. ಎಷ್ಟು ಹೊತ್ತು ಕಾದರೂ ದಾಖಲಿಸಿಕೊಳ್ಳಲಿಲ್ಲ. ಬಳಿಕ ಶಾಸಕ ವೇದವ್ಯಾಸ ಕಾಮತ್ ಅವರ ಗಮನಕ್ಕೆ ತಂದಿದ್ದು, ಬಳಿಕವಷ್ಟೇ ವೆಂಟಿಲೇಟರ್ ಸೌಲಭ್ಯ ದೊರೆತಿದೆ. ಆದರೆ ಉಳಿಸಿಕೊಳ್ಳಲಾಗಲಿಲ್ಲ’ ಎಂದು ಪತಿ ಆರೋಪಿಸಿದ್ದಾರೆ.
ಇದನ್ನೂ ಓದಿ:ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಆದೇಶ ಮರುಪರಿಶೀಲನೆಗೆ ಹೈಕೋರ್ಟ್ ಸೂಚನೆ
ಇನ್ನೊಂದು ಪ್ರಕರಣ
ಇನ್ನೊಂದು ಪ್ರಕರಣದಲ್ಲಿ ಕಾರ್ಕಳದ ನಿವಾಸಿಯೊಬ್ಬರು ಬಿದ್ದು ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣ ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ವೆನ್ಲಾಕ್ ಗೆ ಕರೆತರಲಾಗಿತ್ತು. ಆಗಲೂ ಸಿಬಂದಿ ಸರಿಯಾಗಿ ಸ್ಪಂದಿಸಿಲ್ಲ ಎಂದು ಮೃತರ ಪತ್ನಿ ಅಳಲು ತೋಡಿಕೊಂಡಿದ್ದಾರೆ.
ಸಮಗ್ರ ತನಿಖೆಗೆ ಸೂಚನೆ
ಘಟನೆ ಬಗ್ಗೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ “ಉದಯವಾಣಿ’ಗೆ ಪ್ರತಿಕ್ರಿಯಿಸಿದ್ದು, “ಮಾಹಿತಿ ಬಂದಾಕ್ಷಣ ವೈದ್ಯಾಧಿಕಾರಿಗಳ ಬಳಿ ವಿಚಾರಿಸಿದ್ದು, ರೋಗಿಯನ್ನು ಕರೆತರುವಾಗಲೇ ಸ್ಥಿತಿ ಹದಗೆಟ್ಟಿತ್ತು ಎಂದ್ದಾರೆ. ಆದರೆ ಆಸ್ಪತ್ರೆಯಲ್ಲಿ ದಾಖಲಿಸಲು ವಿಳಂಬಿಸಿದ್ದರಿಂದ ಹೀಗಾಗಿದೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿರುವುದರಿಂದ ಸಮಗ್ರ ತನಿಖೆ ನಡೆಸುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದಿದ್ದಾರೆ.
ನಿರ್ಲಕ್ಷ್ಯ ತೋರಿಲ್ಲ
“ರೋಗಿಗಳ ವಿಚಾರದಲ್ಲಿ ನಿರ್ಲಕ್ಷ್ಯ ತೋರಿಲ್ಲ. ಕಾಸರಗೋಡಿನ ರೋಗಿ ಬಂದಾಗ ಇತರ ಮೂವರು ರೋಗಿಗಳನ್ನು ದಾಖಲಿಸಲಾಗುತ್ತಿತ್ತು. ಅವರಿಗೆ ವ್ಯವಸ್ಥೆ ಕಲ್ಪಿಸಿ ಇವರಿಗೆ ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿತ್ತು’ ಎಂದು ವೆನ್ಲಾಕ್ ನ ವೈದ್ಯಕೀಯ ಅಧೀಕ್ಷಕ ಡಾ| ಸದಾಶಿವ ಶಾನುಭಾಗ್ ತಿಳಿಸಿದ್ದಾರೆ.
ಸಿಸಿ ಕೆಮರಾ ಅಳವಡಿಕೆ
ಶಾಸಕ ವೇದವ್ಯಾಸ ಕಾಮತ್ ಪ್ರತಿಕ್ರಿಯಿಸಿ, “ವೈದ್ಯರು, ವೈದ್ಯಾಧಿಕಾರಿಗಳು, ರೋಗಿಯ ಸಂಬಂಧಿಕರಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಕಾರ್ಕಳದ ವ್ಯಕ್ತಿಯ ಚಿಕಿತ್ಸೆಗೆ ತೊಂದರೆಯಾದ ಆರೋಪ ಬಂದಾಗಲೂ ಡಿಎಂಒ ಜತೆ ಮಾತನಾಡಿ ದಾಖಲಾತಿಗೆ ಸೂಚಿಸಿದ್ದೆ. ಇಂತಹ ಘಟನೆಗಳನ್ನು ತಪ್ಪಿಸಲು ವೆನ್ಲಾಕ್ ಹಳೆ ಕಟ್ಟಡದ ಕಾರಿಡಾರ್ ಸೇರಿದಂತೆ ಅಲ್ಲಲ್ಲಿ ಸಿಸಿ ಕೆಮರಾ ಅಳವಡಿಸಲಾಗುವುದು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ