ಮೈತ್ರಿ ಅಭ್ಯರ್ಥಿ ಮಿಥುನ್ ರೈ ರೋಡ್ ಶೋ
ದೇಗುಲ, ಮಸೀದಿ, ಚರ್ಚ್ಗಳಿಗೆ ಭೇಟಿ, ಪ್ರಾರ್ಥನೆ
Team Udayavani, Apr 17, 2019, 6:00 AM IST
ಉಪ್ಪಿನಂಗಡಿ: ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಿಥುನ್ ರೈ ಅವರು ಎ. 16ರಂದು ಉಪ್ಪಿನಂಗಡಿಯ ಪ್ರಮುಖ ಬೀದಿಯಲ್ಲಿ ರೋಡ್ ಶೋ ನಡೆಸಿ ಮತಯಾಚಿಸಿದರು. ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಸ್ ನಿಲ್ದಾಣದ ಬಳಿಯಿಂದ ಹೊರಟು, ಹಳೆ ಬಸ್ ನಿಲ್ದಾಣ, ಬ್ಯಾಂಕ್ ರಸ್ತೆಯಾಗಿ ಗಾಂಧಿಪಾರ್ಕ್ ತನಕ ತೆರಳಿ ಸಮಾಪನಗೊಳಿಸಿದರು.
ರೋಡ್ ಶೋಗೆ ಮುನ್ನ ಮಿಥುನ್ ರೈ ಅವರು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ, ಉಪ್ಪಿನಂಗಡಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ, ಉಪ್ಪಿನಂಗಡಿ ಮಾಲಿಕ್ದೀನಾರ್ ಜುಮಾ ಮಸೀದಿ, ಉಪ್ಪಿನಂಗಡಿ ದೀನರ ಕನ್ಯಾ ಮಾತೆ ಚರ್ಚ್, ನೆಕ್ಕಿಲಾಡಿ ಉಮರುಲ್ ಫಾರೂಕ್ ಜುಮಾ ಮಸೀದಿಗೆ ಭೇಟಿ ನೀಡಿದರು.
ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ, ಉಪಾಧ್ಯಕ್ಷ ಅಶ್ರಫ್ ಬಸ್ತಿಕ್ಕಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಯು.ಟಿ. ತೌಶೀಫ್, ಜಿಲ್ಲಾ ಕಾಂಗ್ರೆಸ್ ಸದಸ್ಯ ದೇವಿದಾಸ ರೈ, ಯು.ಕೆ. ಇಬ್ರಾಹಿಂ, ಮಾಣಿಕ್ಯ ರಾಜ್ ಪಡಿವಾಳ್, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಶಬ್ಬೀರ್ ಕೆಂಪಿ, ನಝೀರ್ ಮಠ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ದಾಸರಮೂಲೆ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪ್ರವೀಣ್ಚಂದ್ರ ಆಳ್ವ, ಮುರಳೀಧರ ರೈ, ಪಕ್ಷದ ಮುಖಂಡರಾದ ಯು.ಕೆ. ಅಯ್ಯೂಬ್, ನಿರಂಜನ ರೈ ಮಠಂತಬೆಟ್ಟು, ಜಮಾಲ್ ಕೆಂಪಿ, ನೌಫಲ್ ಮಠ, ಅಶ್ರಫ್ ಅಂಬೋಟ್ಟು ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…