ದೇಗುಲ ಹಣ ಹಿಂದೂ ಸಮಾಜೋದ್ಧಾರಕ್ಕಿರಲಿ

ವಿಹಿಂಪ ಕೇಂದ್ರೀಯ ಕಾರ್ಯಾಧ್ಯಕ್ಷ ಅಲೋಕ್‌ ಕುಮಾರ್‌

Team Udayavani, Oct 24, 2021, 6:57 AM IST

ದೇಗುಲ ಹಣ ಹಿಂದೂ ಸಮಾಜೋದ್ಧಾರಕ್ಕಿರಲಿ

ಬೆಳ್ತಂಗಡಿ: ಸರಕಾರಗಳು ಹಿಂದೂ ದೇವಸ್ಥಾನಗಳ ಮೇಲಿನ ಹಿಡಿತವನ್ನು ಬಿಟ್ಟು ಮರಳಿ ಹಿಂದೂ ಸಮಾಜಕ್ಕೆ ಒಪ್ಪಿಸಬೇಕು. ಅಲ್ಲಿ ಸಂಗ್ರಹ ವಾಗುವ ಹಣವನ್ನು ಹಿಂದೂ ಸಮಾಜದ ಏಳಿಗೆಗೆ ವಿನಿಯೋಗಿಸುವಂತಾಗಬೇಕು ಎಂದು ವಿಶ್ವ ಹಿಂದೂ ಪರಿಷತ್‌ನ ಕೇಂದ್ರೀಯ ಕಾರ್ಯಾಧ್ಯಕ್ಷ ಅಲೋಕ್‌ ಕುಮಾರ್‌ ಅಭಿಪ್ರಾಯಪಟ್ಟಿದ್ದಾರೆ.

ಧರ್ಮಸ್ಥಳದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಸರಕಾರಗಳು ಮಸೀದಿ, ಚರ್ಚ್‌, ಗುರುದ್ವಾರಗಳ ಮೇಲೆ ಹಿಡಿತವನ್ನು ಹೊಂದಿಲ್ಲವೋ ಅದೇ ರೀತಿ ಹಿಂದೂ ದೇವಸ್ಥಾನಗಳ ಮೇಲಿನ ಹಿಡಿತ ವನ್ನು ಬಿಟ್ಟು ಬಿಡಬೇಕು. ಇದಕ್ಕಾಗಿ ಕೇಂದ್ರೀಯ ಕಾನೂನನ್ನು ರಚಿಸಬೇಕು ಎಂದು ಕೇಂದ್ರ ಸರಕಾರವನ್ನು ಆಗ್ರಹಿಸು ತ್ತೇವೆ. ವಿಹಿಂಪ ದೇಶಾದ್ಯಂತ ಜನಜಾಗರಣ ಅಭಿಯಾನವನ್ನು ಶೀಘ್ರವೇ ಕೈಗೊಳ್ಳಲಿದೆ ಎಂದು ಪ್ರಕಟಿಸಿದರು.

ಕಾಶ್ಮೀರದ ಅಖಂಡತೆ ಅಮರ
ಕಾಶ್ಮೀರದಲ್ಲಿ 370ನೇ ವಿಧಿಯನ್ನು ತೆಗೆದ ಮೇಲೆ ಶಾಂತಿ ನೆಲೆಸಿದೆ ಎಂದುಕೊಂಡಿದ್ದೆವು. ಆದರೆ ಕಳೆದ 20 ದಿನಗಳಲ್ಲಿ 3 ದಾಳಿಗಳು ನಡೆದಿದ್ದು 11 ನಾಗರಿಕರ ಹತ್ಯೆಯಾಗಿದೆ. ಇದು ಚಿಂತೆಗೆ ಕಾರಣವಾಗಿದೆ. ಅಲ್ಲಿ ಹಿಂದೂ, ಸಿಕ್ಖರು, ವಲಸಿಗರು ಮತ್ತು ಸರಕಾರದೊಂದಿಗೆ ನಿಷ್ಠೆಯಿಂದ ದುಡಿಯುವ ಮುಸಲ್ಮಾನ ರಿಗೂ ಭಯ ಉಂಟಾಗಿದೆ. ಭಯೋತ್ಪಾದ ಕರ ಹೇಡಿತನದ ಕೃತ್ಯಗಳು ಭಾರತದ ಇಚ್ಛಾಶಕಿ ¤ಯನ್ನು, ಸಂಕಲ್ಪವನ್ನು ಎಂದಿಗೂ ದುರ್ಬಲಗೊಳಿಸಲಾರದು. ನಾವು ಒಂದಾಗಿಯೇ ಇರಲಿದ್ದೇವೆ ಮತ್ತು ಕಾಶ್ಮೀರದ ಅಖಂಡತೆಯನ್ನು ಉಳಿಸಿಕೊಳ್ಳಲಿದ್ದೇವೆ ಎಂದರು.

ಬಾಂಗ್ಲಾ ದೇಶದಲ್ಲಾದ ಹಿಂದೂಗಳ ಮೇಲಿನ ದಾಳಿ ಬಗ್ಗೆ ಚಿಂತೆ ವ್ಯಕ್ತಪಡಿಸಿದ ಅವರು, ಅಲ್ಲಿನ ಸಂವಿಧಾನದ ಪ್ರಕಾರ ಇಸ್ಲಾಂ ರಾಜಧರ್ಮವಾಗಿದ್ದರೂ ಅಲ್ಲಿನ ಹಿಂದೂ, ಬೌದ್ಧ, ಸಿಕ್ಖ್, ಜೈನ, ಕ್ರೈಸ್ತರಿಗೆ ಸಮಾನ ಅಧಿಕಾರ ಹಾಗೂ ಸುರಕ್ಷೆಯನ್ನು ಪ್ರದಾನಿಸಲಾಗಿದೆ. ಆದರೆ ಬಾಂಗ್ಲಾ ಸರಕಾರ ಅದನ್ನು ನಿಭಾಯಿಸುವಲ್ಲಿ ವಿಫಲವಾಗಿದೆ. ಕೇಂದ್ರ ಸರಕಾರವು ಪಾಕಿಸ್ಥಾನ ಮತ್ತು ಬಾಂಗ್ಲಾದ ಮೇಲೆ ರಾಜತಾಂತ್ರಿಕ ಒತ್ತಡ ತಂದು ಅಲ್ಲಿನ ಅಲ್ಪಸಂಖ್ಯಾಕರ ಬಗ್ಗೆ ಕಾಳಜಿ ವಹಿಸುವಂತೆ ಮಂಡಲವು ಆಗ್ರಹಿಸಿದೆ ಎಂದರು.

ಇದನ್ನೂ ಓದಿ:ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಕೇಂದ್ರೀಯ ಸಹ ಪ್ರ.ಕಾರ್ಯದರ್ಶಿ ಕೋಟೇಶ್ವರ ಶರ್ಮ, ಪ್ರಾಂತ ಸಂಘಟನ ಕಾರ್ಯದರ್ಶಿ ಬಸವರಾಜ್‌, ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣಮೂರ್ತಿ, ವಿಭಾಗ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌, ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ| ಪ್ರಸನ್ನ ಕೆ., ಕಾರ್ಯಾಧ್ಯಕ್ಷ ಭಾಸ್ಕರ ಧರ್ಮಸ್ಥಳ, ಕಾರ್ಯದರ್ಶಿ ಸತೀಶ್‌, ತಾಲೂಕು ಅಧ್ಯಕ್ಷ ದಿನೇಶ್‌ ಚಾರ್ಮಾಡಿ, ಕಾರ್ಯದರ್ಶಿ ಮೋಹನ್‌ ಬೆಳ್ತಂಗಡಿ, ಸಂತೋಷ್‌ ಅತ್ತಾಜೆ, ಸಂಕೇತ್‌ ಉಪಸ್ಥಿತರಿದ್ದರು.

ಮರಳಿ ಮಾತೃಧರ್ಮಕ್ಕೆ ಅಭಿಯಾನ
ದೇಶದಲ್ಲಿ ಅನುಸೂಚಿತ ಪಂಗಡಗಳನ್ನು ಗುರಿಯಾಗಿಸಿ ಮತಾಂತರ ಮಾಡಲಾಗುತ್ತಿದೆ. ಇದನ್ನು ತಡೆಯಲು ಮತ್ತು ಅವರನ್ನು ಮರಳಿ ಮಾತೃಧರ್ಮಕ್ಕೆ ಕರೆತರಲು ವಿಹಿಂಪ ದೊಡ್ಡಮಟ್ಟದ ಅಭಿಯಾನ ಹಮ್ಮಿಕೊಳ್ಳಲಿದೆ. ಉತ್ತರ ಪ್ರದೇಶ, ಗುಜರಾತ್‌, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಅಸ್ಸಾಂ, ಉತ್ತಾರಖಂಡ ರಾಜ್ಯಗಳಲ್ಲಿರುವಂತಂತೆ ಕರ್ನಾಟಕದ ಬಿಜೆಪಿ ಸರಕಾರವೂ ಮತಾಂತರ ಮತ್ತು ಲವ್‌ ಜೆಹಾದ್‌ ಬಗ್ಗೆ ಪರಿಣಾಮಕಾರಿ ಕಾನೂನ್ನು ತರುವ ಬದ್ಧತೆಯನ್ನು ಪ್ರದರ್ಶಿಸಬೇಕು. ಈ ಬಗ್ಗೆ ದೀಪಾವಳಿಯ ಬಳಿಕ ನಾಡಿನ ಸಂತರೊಡಗೂಡಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಲಾಗುವುದು ಎಂದು ಅಲೋಕ್‌ ಕುಮಾರ್‌ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಹೆಗ್ಗಡೆ ಅವರು ಸಂತರಾಗಿದ್ದುಕೊಂಡು 54 ವರ್ಷಗಳ ಕಾಲ ಮಹಿಳೆಯರ ಸಶಕ್ತೀಕರಣ, ಕೃಷಿಪರ ಯೋಜನೆ, ಶಿಕ್ಷಣ ಕ್ರಾಂತಿ, ಹಿಂದೂ ಸಮಾಜದ ಒಳಿತಿಗಾಗಿ ಅವರು ವ್ಯಕ್ತಿರೂಪದ ವ್ಯವಸ್ಥೆಯಾಗಿ ಕರ್ತವ್ಯ ನಿಭಾಯಿಸಿದ್ದಾರೆ.
– ಅಲೋಕ್‌ ಕುಮಾರ್‌,
ವಿಹಿಂಪ ಕೇಂದ್ರೀಯ ಕಾರ್ಯಾಧ್ಯಕ್ಷ

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.