ಅಲೋಶಿಯಸ್ ಕೌಶಲಾಭಿವೃದ್ಧಿ ಕೇಂದ್ರ ಉದ್ಘಾಟನೆ
Team Udayavani, Oct 27, 2017, 12:59 PM IST
ಮಹಾನಗರ: ದೇಶದಲ್ಲಿ ಕೈಗಾರಿಕ ವಲಯಕ್ಕೆ ಬೇಡಿಕೆ ಹೆಚ್ಚುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳನ್ನು ಸಾರ್ವಜನಿಕರು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಕೆಸಿಸಿಸಿ ಕಾರ್ಯದರ್ಶಿ ಮಮತಾ ಗಟ್ಟಿ ತಿಳಿಸಿದರು.
ಸಂತ ಅಲೋಶಿಯಸ್ ಕೈಗಾರಿಕ ತರಬೇತಿ ಸಂಸ್ಥೆಯು ಜಾಗ್ವಾರ್ ಗ್ರೂಪ್ ಸಹಭಾಗಿತ್ವದಲ್ಲಿ ಗುರುವಾರ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸಂತ ಅಲೋಶಿಯಸ್ ಕೌಶಲಾಭಿವೃದ್ಧಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಮಾನವ ಸಂಪನ್ಮೂಲಗಳಿದ್ದರೂ, ಅದನ್ನು ಉಪಯೋಗಿಸುವ ಶಕ್ತಿ ನಮ್ಮಲ್ಲಿಲ್ಲ. ಅನುದಾನಗಳು ಕಡಿಮೆ ಇದ್ದು, ಬುದ್ಧಿವಂತರು ಹೆಚ್ಚಿದ್ದಾರೆ. ಅವರನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲು ಮಾರ್ಗದರ್ಶನ ನೀಡುವವರ ಸಂಖ್ಯೆ ಹೆಚ್ಚಾಗಬೇಕಿದೆ ಎಂದರು.
ಶಾಲಾ ಕಾಲೇಜುಗಳಲ್ಲಿ ಉತ್ತಮ ಶಿಕ್ಷಕರ ಅನಿವಾರ್ಯತೆ ಇದೆ. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರೆ ಅವರ ಜೀವನ ರೂಪಿಸಲು ಸಹಾಯ ಮಾಡಿದಂತಾಗುತ್ತದೆ. ಪದವಿ, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮಾತ್ರ ಕೆಲಸ ಎನ್ನುವ ಕೆಲ ಕಾಲೇಜುಗಳ ಪೈಕಿ, 8ನೇ ತರಗತಿಯಲ್ಲಿ ಅನುತ್ತೀರ್ಣರಾದೂ ಅವರಿಗೆ ತರಬೇತಿ ನೀಡುವ ಅಲೋಶಿಯಸ್ ಕೈಗಾರಿಕ ಸಂಸ್ಥೆ ಮಾದರಿಯಾಗಿದೆ ಎಂದು ತಿಳಿಸಿದರು.
ಸಮಾಜಕ್ಕೆ ಕೊಡುಗೆ ನೀಡಿ
ಎನ್ಎಂಪಿಟಿ ಟ್ರಸ್ಟಿ ಶೇಖರ ಪೂಜಾರಿ ಮಾತನಾಡಿ, ಒಳ್ಳೆಯ ಕೆಲಸವನ್ನು ನಿರ್ವಹಿಸುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು. ಕೈಗಾರಿಕ ಸಂಸ್ಥೆಗಳಲ್ಲಿ ಕಡಿಮೆ ಅವಧಿಯ ಕೋರ್ಸ್ ಮಾಡಿ, ಉತ್ತಮ ಕೆಲಸ ನಿರ್ವಹಿಸುತ್ತಿರುವ ಅನೇಕ ಉದಾಹರಣೆಗಳಿವೆ. ಕೆಲಸದ ಮೇಲೆ ಶ್ರದ್ಧೆ ಇರಬೇಕೇ ವಿನಾ ಎಂದಿಗೂ ಹಣದ ಹಿಂದೆ ಹೋಗಬಾರದು ಎಂದು ಕಿವಿಮಾತು ಹೇಳಿದರು.
ಜಾಗ್ವಾರ್ ಸಂಸ್ಥೆಯ ಗ್ಲೋಬಲ್ ಹೆಡ್ ಅಜಯ್ ಮಹಾಜನ್ ಮಾತನಾಡಿ, ಭಾರತ ಅಭಿವೃದ್ಧಿ ಹೊಂದುತ್ತಿದ್ದು, ಆರ್ಥಿಕ ಪರಿಸ್ಥಿತಿಯೂ ಚೇತರಿಕೆ ಕಾಣುತ್ತಿದೆ. ಇಂದು ವಿಜ್ಞಾನ ಕ್ಷೇತ್ರದಲ್ಲಿ ಅನೇಕ ಸಂಶೋಧನೆಗಳಾಗಿದೆ. ಹೊಸ ತಂತ್ರಜ್ಞಾನದ ಯಂತ್ರಗಳು ಮಾರುಕಟ್ಟೆಗೆ ಕಾಲಿಟ್ಟಿದ್ದು, ಮಾನವನ ದೈಹಿಕ ಕೆಲಸ ಕಡಿಮೆಯಾಗುತ್ತಿದೆ ಎಂದು ವಿವರಿಸಿದರು.
ಸಂತ ಅಲೋಶಿಯಸ್ ಸಮೂಹ ಸಂಸ್ಥೆಯ ರೆಕ್ಟರ್ ರೆ| ಫಾ| ಡೈನೀಶಿಯಸ್ ವಾಸ್, ಜಾಗ್ವಾರ್ ಸಂಸ್ಥೆಯ ದಕ್ಷಿಣ ವಿಭಾಗದ ಮುಖ್ಯಸ್ಥ ದೇವನಾಯಂಗಮ್, ಕರ್ನಾಟಕ ಬ್ರ್ಯಾಂಚ್ ಮುಖ್ಯಸ್ಥ ಸತ್ಯರಾಜನ್ ಬಿಸ್ವಾಲ್, ಜಾಗ್ವಾರ್ ಕಂಪೆನಿ ಏರಿಯಾ ಸೇಲ್ಸ್ ಮ್ಯಾನೇಜರ್ಲಕ್ಷ್ಮೀಕಾಂತ್ ಪೂಜಾರಿ ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ