“ನಿರಾಶ್ರಿತರ ಕೇಂದ್ರಕ್ಕೆ ಪರ್ಯಾಯ ನಿವೇಶನ’
Team Udayavani, Jul 21, 2019, 5:27 AM IST
ಮಹಾನಗರ: ನಗರದ ಪಚ್ಚನಾಡಿಯ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ವಿಶಾಲವಾದ ಬೇರೆ ಜಮೀನು ಮಂಜೂರು ಮಾಡಲು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು ಸೂಚಿಸಿದ್ದಾರೆ.
ಅವರು ಶನಿವಾರ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಬಳಿಕ ಮಂಗಳೂರು ತಹಶೀಲ್ದಾರ್ಗೆ ಈ ಸೂಚನೆ ನೀಡಿದರು.
ಪ್ರಸಕ್ತ ನಿರಾಶ್ರಿತರ ಪರಿಹಾರ ಕೇಂದ್ರವು ಎರಡು ಎಕ್ರೆ ಜಾಗದಲ್ಲಿದ್ದು, ಸುಮಾರು 150ಕ್ಕೂ ಅಧಿಕ ಮಂದಿ ನಿರಾಶ್ರಿತರು ಇಲ್ಲಿ ವಾಸ್ತವ್ಯದಲ್ಲಿದ್ದಾರೆ. ನಿರಾಶ್ರಿತರಿಗೆ ವಾಸ್ತವ್ಯ ತಾಣವಲ್ಲದೇ, ಅವರಿಗೆ ಉಳಿದ ಸಮಯದಲ್ಲಿ ಕೃಷಿ, ತೋಟಗಾರಿಕೆ, ಗುಡಿ ಕೈಗಾರಿಕೆ ಸಹಿತ ವೃತ್ತಿ ಮಾಡಲು ವಿಶಾಲ ಜಮೀನು ಅಗತ್ಯವಿದೆ. ಈ ನಿಟ್ಟಿನಲ್ಲಿ ಮುಂದಿನ 15 ದಿನಗಳೊಳಗೆ 10-15 ಎಕ್ರೆ ಜಮೀನು ಮಂಜೂರು ಮಾಡಲು ಅವರು ತಿಳಿಸಿದರು.
ನಿರಾಶ್ರಿತ ಸೌಲಭ್ಯ ಒದಗಿಸುವುದು ಕರ್ತವ್ಯ
ಯಾವುದೋ ಕಾರಣದಿಂದ ಭಿಕ್ಷಾಟನೆ ಯಲ್ಲಿ ತೊಡಗಿದವರನ್ನು, ಯಾವುದೇ ಆಶ್ರಯವಿಲ್ಲದವರನ್ನು ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿಡಲಾಗಿದ್ದು, ಇವರಿಗೆ ಘನತೆಯಿಂದ ಜೀವಿಸಲು ಎಲ್ಲ ರೀತಿಯ ಸೌಲಭ್ಯ ಒದಗಿಸಿಕೊಡಬೇಕಾದುದು ನಮ್ಮ ಕರ್ತವ್ಯವಾಗಿದೆ ಎಂದರು.
ಲೋಕಾಯುಕ್ತ ನ್ಯಾಯಮೂರ್ತಿಗಳು ಪರಿಹಾರ ಕೇಂದ್ರದ ಎಲ್ಲ ಕಟ್ಟಡಗಳನ್ನು, ಅಡುಗೆ ಕೋಣೆ, ಶೌಚಾಲಯ, ಕೈತೋಟವನ್ನು ವೀಕ್ಷಿಸಿದರು. ಕೇಂದ್ರದ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿ, ಅವರ ಅಹವಾಲುಗಳನ್ನು ಆಲಿಸಿದರು.
ತಹಶೀಲ್ದಾರ್ ಗುರುಪ್ರಸಾದ್, ಲೋಕಾ ಯುಕ್ತ ಇನ್ಸ್ಪೆಕ್ಟರ್ ಭಾರತೀ, ಕಂದಾಯ ನಿರೀಕ್ಷಕ ಆಸೀಫ್ ಉಪಸ್ಥಿತರಿದ್ದರು.
ದುಡಿಮೆಗೆ ವೇತನ; ಪ್ರಸ್ತಾವ
ರಾಜ್ಯದಲ್ಲಿ 11 ನಿರಾಶ್ರಿತರ ಕೇಂದ್ರ ಗಳಿದ್ದು, ಈ ಪೈಕಿ ಬೆಂಗಳೂರು ಕೇಂದ್ರ ಉತ್ತಮ ಗುಣಮಟ್ಟದಲ್ಲಿದೆ. ಕೇಂದ್ರ ಕಾರಾಗೃಹಗಳಲ್ಲಿರುವ ಶಿಕ್ಷೆಗೊಳಗಾಗದ ಅಪರಾಧಿಗಳು, ಕಾರಾಗೃಹದಲ್ಲಿ ದುಡಿಮೆ ಮಾಡಿದರೆ ಪ್ರತೀ ದಿನ 175 ರೂ. ಮೊತ್ತ ಸರಕಾರದಿಂದ ವೇತನ ದೊರಕುತ್ತದೆ. ಇದೇ ಮಾದರಿಯಲ್ಲಿ ನಿರಾಶ್ರಿತರ ಕೇಂದ್ರಗಳಲ್ಲಿರುವವರಿಗೂ ಅವರ ದುಡಿಮೆಗೆ ವೇತನ ನೀಡುವ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸುವುದಾಗಿ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ