“ನಿರಾಶ್ರಿತರ ಕೇಂದ್ರಕ್ಕೆ ಪರ್ಯಾಯ ನಿವೇಶನ’


Team Udayavani, Jul 21, 2019, 5:27 AM IST

2007MLR40-LOKAYUKTHA

ಮಹಾನಗರ: ನಗರದ ಪಚ್ಚನಾಡಿಯ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ವಿಶಾಲವಾದ ಬೇರೆ ಜಮೀನು ಮಂಜೂರು ಮಾಡಲು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು ಸೂಚಿಸಿದ್ದಾರೆ.

ಅವರು ಶನಿವಾರ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಬಳಿಕ ಮಂಗಳೂರು ತಹಶೀಲ್ದಾರ್‌ಗೆ ಈ ಸೂಚನೆ ನೀಡಿದರು.

ಪ್ರಸಕ್ತ ನಿರಾಶ್ರಿತರ ಪರಿಹಾರ ಕೇಂದ್ರವು ಎರಡು ಎಕ್ರೆ ಜಾಗದಲ್ಲಿದ್ದು, ಸುಮಾರು 150ಕ್ಕೂ ಅಧಿಕ ಮಂದಿ ನಿರಾಶ್ರಿತರು ಇಲ್ಲಿ ವಾಸ್ತವ್ಯದಲ್ಲಿದ್ದಾರೆ. ನಿರಾಶ್ರಿತರಿಗೆ ವಾಸ್ತವ್ಯ ತಾಣವಲ್ಲದೇ, ಅವರಿಗೆ ಉಳಿದ ಸಮಯದಲ್ಲಿ ಕೃಷಿ, ತೋಟಗಾರಿಕೆ, ಗುಡಿ ಕೈಗಾರಿಕೆ ಸಹಿತ ವೃತ್ತಿ ಮಾಡಲು ವಿಶಾಲ ಜಮೀನು ಅಗತ್ಯವಿದೆ. ಈ ನಿಟ್ಟಿನಲ್ಲಿ ಮುಂದಿನ 15 ದಿನಗಳೊಳಗೆ 10-15 ಎಕ್ರೆ ಜಮೀನು ಮಂಜೂರು ಮಾಡಲು ಅವರು ತಿಳಿಸಿದರು.

ನಿರಾಶ್ರಿತ ಸೌಲಭ್ಯ ಒದಗಿಸುವುದು ಕರ್ತವ್ಯ
ಯಾವುದೋ ಕಾರಣದಿಂದ ಭಿಕ್ಷಾಟನೆ ಯಲ್ಲಿ ತೊಡಗಿದವರನ್ನು, ಯಾವುದೇ ಆಶ್ರಯವಿಲ್ಲದವರನ್ನು ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿಡಲಾಗಿದ್ದು, ಇವರಿಗೆ ಘನತೆಯಿಂದ ಜೀವಿಸಲು ಎಲ್ಲ ರೀತಿಯ ಸೌಲಭ್ಯ ಒದಗಿಸಿಕೊಡಬೇಕಾದುದು ನಮ್ಮ ಕರ್ತವ್ಯವಾಗಿದೆ ಎಂದರು.

ಲೋಕಾಯುಕ್ತ ನ್ಯಾಯಮೂರ್ತಿಗಳು ಪರಿಹಾರ ಕೇಂದ್ರದ ಎಲ್ಲ ಕಟ್ಟಡಗಳನ್ನು, ಅಡುಗೆ ಕೋಣೆ, ಶೌಚಾಲಯ, ಕೈತೋಟವನ್ನು ವೀಕ್ಷಿಸಿದರು. ಕೇಂದ್ರದ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿ, ಅವರ ಅಹವಾಲುಗಳನ್ನು ಆಲಿಸಿದರು.

ತಹಶೀಲ್ದಾರ್‌ ಗುರುಪ್ರಸಾದ್‌, ಲೋಕಾ ಯುಕ್ತ ಇನ್‌ಸ್ಪೆಕ್ಟರ್‌ ಭಾರತೀ, ಕಂದಾಯ ನಿರೀಕ್ಷಕ ಆಸೀಫ್‌ ಉಪಸ್ಥಿತರಿದ್ದರು.

ದುಡಿಮೆಗೆ ವೇತನ; ಪ್ರಸ್ತಾವ
ರಾಜ್ಯದಲ್ಲಿ 11 ನಿರಾಶ್ರಿತರ ಕೇಂದ್ರ ಗಳಿದ್ದು, ಈ ಪೈಕಿ ಬೆಂಗಳೂರು ಕೇಂದ್ರ ಉತ್ತಮ ಗುಣಮಟ್ಟದಲ್ಲಿದೆ. ಕೇಂದ್ರ ಕಾರಾಗೃಹಗಳಲ್ಲಿರುವ ಶಿಕ್ಷೆಗೊಳಗಾಗದ ಅಪರಾಧಿಗಳು, ಕಾರಾಗೃಹದಲ್ಲಿ ದುಡಿಮೆ ಮಾಡಿದರೆ ಪ್ರತೀ ದಿನ 175 ರೂ. ಮೊತ್ತ ಸರಕಾರದಿಂದ ವೇತನ ದೊರಕುತ್ತದೆ. ಇದೇ ಮಾದರಿಯಲ್ಲಿ ನಿರಾಶ್ರಿತರ ಕೇಂದ್ರಗಳಲ್ಲಿರುವವರಿಗೂ ಅವರ ದುಡಿಮೆಗೆ ವೇತನ ನೀಡುವ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸುವುದಾಗಿ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು ತಿಳಿಸಿದರು.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.