ವಿಶ್ವ ಜಾಂಬೂರಿಯಲ್ಲಿ “ಕಾಂತಾರ’ ಗದ್ದಲ!
Team Udayavani, Dec 26, 2022, 7:40 AM IST
ಮೂಡುಬಿದಿರೆ: ವಿಶ್ವದೆಲ್ಲೆಡೆ ಅಬ್ಬರದ ಪ್ರದರ್ಶನ ಕಂಡಿರುವ”ಕಾಂತಾರ’ ಚಿತ್ರ ವಿಶ್ವ ಜಾಂಬೂರಿ ಯಲ್ಲೂ ಮೋಡಿ ಮಾಡಿದೆ. ಚಿತ್ರ ವೀಕ್ಷಣೆ ಅವಕಾಶಕ್ಕಾಗಿ ಆಗ್ರಹಿಸಿ ಶಿಬಿರಾ ರ್ಥಿಗಳು ಹಾಗೂ ಶಿಕ್ಷಕರು ಗಲಾಟೆ ಮಾಡಿದ ಪ್ರಸಂಗವೂ ನಡೆಯಿತು!
ಆಳ್ವಾಸ್ ಕ್ಯಾಂಪಸ್ನಲ್ಲಿ ಜಾಂಬೂರಿಯ ಶಿಬಿರಾರ್ಥಿಗಳು ಹಾಗೂ ಅವರ ಶಿಕ್ಷಕರಿಗಾಗಿ ಕಾಂತಾರ, ಭಜರಂಗಿ ಭಾಯಿಜಾನ್, ಅಪ್ಪು, ಚಾರ್ಲಿ 777 ಚಲನಚಿತ್ರಗಳ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಜಾಂಬೂರಿಯ ಆರಂಭದ ದಿನದಿಂದಲೂ ಶಿವರಾಮ ಕಾರಂತ ಹಾಗೂ ಕುವೆಂಪು ಥಿಯೇಟರ್ಗಳಲ್ಲಿ ಚಲನಚಿತ್ರಗಳ ಪ್ರದರ್ಶನ ನಡೆಯುತ್ತಿದೆ. ಒಂದು ಬಾರಿಗೆ 250 ಮಂದಿಗೆ ಚಿತ್ರ ವೀಕ್ಷಣೆಗೆ ಅವಕಾಶವಿದೆ. ಪ್ರತೀ ಥಿಯೇಟರ್ನಲ್ಲಿ ದಿನಕ್ಕೆ ಎರಡು ಪ್ರದರ್ಶನ ಮಾಡಲಾಗುತ್ತಿದೆ.
ಒಂದು ಥಿಯೇಟರ್ನಲ್ಲಿ ಕಾಂತಾರ, ಅಪ್ಪು ಹಾಗೂ ಇನ್ನೊಂದರಲ್ಲಿ ಭಜರಂಗಿ ಭಾಯಿಜಾನ್, ಚಾರ್ಲಿ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕಾಂತಾರ ಚಿತ್ರಕ್ಕೆ ಹೆಚ್ಚು ಬೇಡಿಕೆಯ ಹಿನ್ನೆಲೆಯಲ್ಲಿ ಒಂದು ಥಿಯೇಟರ್ನಲ್ಲಿ ಕಾಂತಾರದ ಎರಡು ಪ್ರದರ್ಶನಕ್ಕೆ ಅವಕಾಶ ನೀಡಲಾಗಿದ್ದರೂ ಮತ್ತೂಂದು ಪ್ರದರ್ಶನ ಏರ್ಪಡಿಸಬೇಕೆಂದು ಶಿಬಿರಾರ್ಥಿಗಳು ಒತ್ತಾಯಿಸಿದರು. ಇದಕ್ಕೆ “ಅವಕಾಶ ನೀಡಿಲ್ಲ’ ಎಂಬ ಕಾರಣಕ್ಕೆ ಸಂಘಟಕರ ಜತೆಗೆ ಮಾತಿನ ಚಕಮಕಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ